Advertisement

ಡಿ. 2: ಉಜಿರೆಯಲ್ಲಿ ದ.ಕ. ಜಿಲ್ಲಾ ಮಟ್ಟದ ಶ್ರೀ ಭಗವದ್ಗೀತಾ ಸ್ಪರ್ಧೆ

02:50 PM Dec 01, 2023 | Team Udayavani |

ಬೆಳ್ತಂಗಡಿ: ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ-ಶಿರಸಿ, ದ.ಕ ಜಿಲ್ಲಾ ಮದ್ಭಗವದ್ಗೀತಾ ಅಭಿಯಾನ ಸಮಿತಿ, ಸಂಸ್ಕೃತ ಸಂಘ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳು ಉಜಿರೆ ಹಾಗೂ ಧರ್ಮಸ್ಥಳ ಸಂಯುಕ್ತ ಆಶ್ರಯದಲ್ಲಿ ಶ್ರೀ ಭಗವದ್ಗೀತಾ ಅಭಿಯಾನ ಅಂಗವಾಗಿ ದಕ್ಷಿಣಕನ್ನಡ ಜಿಲ್ಲಾಮಟ್ಟದ ಶ್ರೀ ಭಗವದ್ಗೀತಾ ಸ್ಪರ್ಧೆಗಳು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕನ್ನಡ ಮಾಧ್ಯಮ ಪ್ರೌಢ ಶಾಲೆಯಲ್ಲಿ ಡಿ. 2ರಂದು ಬೆಳಗ್ಗೆ 9 ಗಂಟೆಗೆ ನೆರವೇರಲಿದೆ.

Advertisement

ತಾಲೂಕು ಮಟ್ಟದಲ್ಲಿ ಈಗಾಗಲೇ ಕಂಠಪಾಠ, ಭಾಷಣ ಹಾಗೂ ರಸಪ್ರಶ್ನೆ ಸ್ಪರ್ಧೆಗಳಲ್ಲಿ ವಿಜೇತರಾದ ಪ್ರಾಥಮಿಕ, ಪ್ರೌಢ ಹಾಗೂ ಪಿಯುಸಿ ವಿದ್ಯಾರ್ಥಿ ಸ್ಪರ್ಧಾರ್ಥಿಗಳು ಸ್ಪರ್ಧಿಸಲಿದ್ದು, ಅಂದು ಬಹುಮಾನ ವಿತರಣ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಣೆ ನಡೆಯಲಿದೆ.

ಸಮಾರಂಭದ ಅಧ್ಯಕ್ಷತೆಯನ್ನು ಸುರತ್ಕಲಿನ ಉದ್ಯಮಿ ಉಮೇಶ್‌ ಹೆಗಡೆ ವಹಿಸಲಿದ್ದಾರೆ. ಡಾ| ಪ್ರದೀಪ ನಾವರ, ಶಾಸಕ ಹರೀಶ್‌ ಪೂಂಜ, ವಿಧಾನ ಪರಿಷತ್ತಿನ ಸದಸ್ಯರಾದ ಪ್ರತಾಪಸಿಂಹ ನಾಯಕ್‌ ಹಾಗೂ ಭೋಜೆಗೌಡ, ಪ್ರೌಢಶಾಲಾ ಮುಖ್ಯೋಪಾಧ್ಯಾಯ ಸುರೇಶ್‌, ಅಭಿಯಾನದ ಜಿಲ್ಲಾ ಸಂಯೋಜಕ ಡಾ| ಮಧುಕೇಶ್ವರ ಶಾಸ್ತ್ರಿ ಮತ್ತಿತರರು ಭಾಗವಹಿಸಲಿರುವರು ಎಂದು ಜಿಲ್ಲಾ ಶ್ರೀ ಮದ್ಭಗವದ್ಗೀತಾ ಸ್ಪರ್ಧಾ ಕಾರ್ಯಕ್ರಮದ ಸಂಚಾಲಕ ಡಾ| ಶ್ರೀಧರ ಭಟ್‌ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next