Advertisement

ಪದಾಧಿಕಾರಿಗಳ ನೇಮಕಕ್ಕೆ ವೀಕ್ಷಕರ ನೇಮಕ: ಡಿ.ಕೆ. ಶಿವಕುಮಾರ್

01:48 PM Jun 30, 2021 | Team Udayavani |

ಬೆಂಗಳೂರು: ‘ಪಕ್ಷದ ಜಿಲ್ಲಾಧ್ಯಕ್ಷರು ಹಾಗೂ ಪದಾಧಿಕಾರಿಗಳ ನೇಮಕ ಸಂಬಂಧ ವೀಕ್ಷಕರ ನೇಮಕ ಮಾಡಲಾಗುತ್ತದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.

Advertisement

ಸದಾಶಿವನಗರ ನಿವಾಸದ ಬಳಿ ಗುರುವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್ ಅವರು, ‘ಈ ವಿಚಾರವಾಗಿ ಜಿಲ್ಲಾಧ್ಯಕ್ಷರು, ಶಾಸಕರುಗಳಿಗೆ ಸೂಚನೆ ನೀಡಿದ್ದು, ಅವರ ಅಭಿಪ್ರಾಯ ಪಡೆಯುತ್ತೇವೆ.

ಇದನ್ನೂ ಓದಿ: ರಮೇಶ ಜಾರಕಿಹೊಳಿ ಸರಕಾರಕ್ಕೆ ಮುಜುಗರ ತರುವ ಕೆಲಸ ಮಾಡುತ್ತಿಲ್ಲ : ಭೈರತಿ ಬಸವರಾಜ್

ಒಂದೆರಡು ದಿನಗಳಲ್ಲಿ ವೀಕ್ಷಕರ ನೇಮಕ ಮಾಡಲಾಗುತ್ತದೆ. ವೀಕ್ಷಕರುಗಳು ಎಲ್ಲ ಜಿಲ್ಲೆಗಳಿಗೂ ಭೇಟಿ ನೀಡಲಿದ್ದಾರೆ. ಕೆಲವು ಕಡೆಗಳಲ್ಲಿ ಒಂದಷ್ಟು ವಿಚಾರಗಳನ್ನು ಇತ್ಯರ್ಥ ಮಾಡಬೇಕಿದೆ. ಅವುಗಳನ್ನು ಪರಿಶೀಲಿಸಿ ಸರಿಪಡಿಸುತ್ತೇನೆ’ ಎಂದರು.

ನಾನು ಕೂಡ ಕೆಲವು ಕಡೆ ಹೋಗುತ್ತೇನೆ. ಅದಕ್ಕೆ ಮೊದಲು ಒಂದಷ್ಟು ವಿಚಾರಗಳನ್ನು ಅಂತಿಮಗೊಳಿಸಲಾಗುವುದು ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next