Advertisement

ಡಿಕೆಶಿ ಆರೋಗ್ಯದಲ್ಲಿ ಏರುಪೇರು ; ಲೋಹಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ

10:00 AM Sep 05, 2019 | Team Udayavani |

ನವದೆಹಲಿ: ಹಣಕಾಸು ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ಪ್ರಭಾವಿ ಕಾಂಗ್ರೆಸ್ ನಾಯಕ ಮತ್ತು ಮಾಜೀ ಸಚಿವ ಡಿ ಕೆ ಶಿವಕುಮಾರ್ ಅವರನ್ನು ಆರೋಗ್ಯ ತಪಾಸಣೆಗಾಗಿ ನಗರದಲ್ಲಿರುವ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

Advertisement

ಆರೋಗ್ಯ ತಪಾಸಣೆಯ ಬಳಿಕ ಡಿಕೆಶಿ ಅವರನ್ನು ಜಾರಿ ನಿರ್ದೇಶನಾಲಯ ಕಛೇರಿಗೆ ಕರೆತರಲಾಗುವುದು ಎಂದು ತಿಳಿದುಬಂದಿದೆ. ಆದರೆ ಆಸ್ಪತ್ರೆಯಲ್ಲಿ ಶಿವಕುಮಾರ್ ಅವರ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿರುವ ಕಾರಣ ಅವರನ್ನು ಇನ್ನೂ ಕೆಲ ಹೊತ್ತು ಆಸ್ಪತ್ರೆಯಲ್ಲೇ ಇರಿಸಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.

ಶಿವಕುಮಾರ್ ಅವರಿಗೆ ಆಸ್ಪತ್ರೆಯಲ್ಲಿ ಲೋ ಬಿಪಿ ಮತ್ತು ಹೈ ಶುಗರ್ ಸಮಸ್ಯೆ ಕಾಣಿಸಿಕೊಂಡ ಕಾರಣ ಅವರ ಆರೋಗ್ಯದ ಮೇಲೆ ನಿಗಾ ಇರಿಸಲು ಆಸ್ಪತ್ರೆಯ ವೈದ್ಯರು ನಿರ್ಧರಿಸಿದ್ದಾರೆ. ಹಾಗಾಗಿ ಇನ್ನೂ ಕೆಲ ಹೊತ್ತಿನವರೆಗೆ ಶಿವಕುಮಾರ್ ಅವರನ್ನು ಆಸ್ಪತ್ರೆಯಲ್ಲೇ ಉಳಿಸಿಕೊಳ್ಳಲು ನಿರ್ಧರಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಈತನ್ಯಧ್ಯೆ ಶಿವಕುಮಾರ್ ಅವರ ಬಂಧನದ ಸುದ್ದಿ ತಿಳಿಯುತ್ತಿದ್ದಂತೆ ಅವರ ತಾಯಿ ಅಸ್ವಸ್ಥರಾಗಿದ್ದಾರೆ ಎಂದು ತಿಳಿದುಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next