Advertisement

ಪಿತೃ ವಿಯೋಗ :ವಿಮಾನ ನಿಲ್ದಾಣದಲ್ಲಿ ಸಿ.ಟಿ. ರವಿ ಅವರಿಗೆ ಡಿ.ಕೆ.ಶಿವಕುಮಾರ್ ಸಾಂತ್ವನ

06:58 PM Jan 29, 2022 | Team Udayavani |

ಬೆಂಗಳೂರು : ಪಿತೃ ವಿಯೋಗಕ್ಕೆ ಒಳಗಾಗಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ರಾಜ್ಯದ ಮಾಜಿ ಸಚಿವ ಸಿ.ಟಿ. ರವಿ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶನಿವಾರ ಸಂಜೆ ಸಾಂತ್ವನ ಹೇಳಿದರು.

Advertisement

ಡಿ.ಕೆ. ಶಿವಕುಮಾರ್ ಅವರು ಗೋವಾದಲ್ಲಿ ಚುನಾವಣೆ ಪ್ರಚಾರ ಮುಗಿಸಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಾಗ ಸಿ.ಟಿ. ರವಿ ಅವರು ಎದಿರಾದರು.

ಇದನ್ನೂ ಓದಿ : 

ಸಿಎಂ ಸೇರಿ ಗಣ್ಯರಿಂದ ಸಂತಾಪ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಸಿಟಿ ರವಿ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಬೊಮ್ಮಾಯಿ, ಸಂತಾಪ ಸೂಚಿಸಿದರು. ದೇವರು ತಿಮ್ಮೇಗೌಡ ಅವರ ಆತ್ಮಕ್ಕೆ ಶಾಂತಿಯನ್ನು ಕರುಣಿಸಲಿ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಮುಖ್ಯಮಂತ್ರಿಗಳು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.

Advertisement

ತಿಮ್ಮೇಗೌಡ(92)ವಯೋಸಹಜ ಅನಾರೋಗ್ಯದಿಂದ ಶನಿವಾರ ಮೃತಪಟ್ಟಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next