Advertisement

ಪಾದಯಾತ್ರೆಗೂ ಮುನ್ನ ಪತ್ನಿಯೊಂದಿಗೆ ಕೆಂಕೇರಮ್ಮ ದೇವಿಯ ದರ್ಶನ ಪಡೆದ ಡಿಕೆಶಿ

12:20 PM Jan 08, 2022 | Team Udayavani |

ರಾಮನಗರ/ಕನಕಪುರ: ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ಕನಕಪುರ ತಾಲೂಕಿನ ಕಾವೇರಿ ಮತ್ತು ಅರ್ಕಾವತಿ ನದಿಗಳ ಸಂಗಮ ಸ್ಥಳದಿಂದ ಮೇಕೆದಾಟುವಿಗೆ ಪಾದಯಾತ್ರೆ ಜ.9 ಭಾನುವಾರ ಬೆಳಿಗ್ಗೆ 8.3೦ಕ್ಕೆ ಆರಂಭವಾಗಲಿದ್ದು, ವೀಕೆಂಡ್ ಕರ್ಫ್ಯೂ ಮತ್ತು ಏರುತ್ತಿರುವ ಕೋವಿಡ್ ಪ್ರಕರಣಗಳ ಸಂಖ್ಯೆಯ ನಡುವೆ ಈ ಪಾದಯಾತ್ರೆಯ ಬಗ್ಗೆ ಸರ್ಕಾರ ಕಠಿಣ ನಿಲುವು ತಳೆಯುವ ಸಾಧ್ಯತೆ ಇದೆ.

Advertisement

ಭಾನುವಾರ ಆರಂಭವಾಗಲಿರುವ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಕನಕಪುರ ಶಾಸಕ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಈಗಾಗಲೇ ಕನಕಪುರದಲ್ಲಿ ವಾಸ್ತವ್ಯವಿದ್ದು, ಶನಿವಾರ ಬೆಳಿಗ್ಗೆ ಕುಟುಂಬ ಸಮೇತ ತಮ್ಮ ಮನೆ ದೇವರು ಕೆಂಕೇರಮ್ಮ ದೇವಿಯ ದರ್ಶನ ಪಡೆದುಕೊಂಡಿದ್ದಾರೆ ಮತ್ತು ಕನಕಪುರ ತಾಲೂಕು ಕಬ್ಬಾಳಮ್ಮ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಜನರ ಒಳಿತಿಗಾಗಿ ಪಾದಯಾತ್ರೆ ಹಮ್ಮಿಕೊಂಡಿದ್ದು ಇನ್ನಾವುದೇ ಉದ್ದೇಶ ಇಲ್ಲ ಎಂದಿದ್ದಾರೆ.

ಸಿಎಲ್ ಪಿ ಸಭೆ
ಇಂದು ಮಧ್ಯಾಹ್ನ 3 ಗಂಟೆಗೆ ಕಾಂಗ್ರೆಸ್ ಶಾಸಕರ ಸಭೆಯನ್ನು ಸಿದ್ದರಾಮಯ್ಯ ಅವರು ಕನಕಪುರದ ಡಿಕೆಶಿ ನಿವಾಸದಲ್ಲಿ ಕರೆದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next