Advertisement

ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಮನೆಯಲ್ಲಿ ಅಲ್ಪಸಂಖ್ಯಾತ ಮುಖಂಡರ ಸಭೆ

12:11 PM Apr 20, 2020 | keerthan |

ಬೆಂಗಳೂರು: ಪಾದರಾಯನಪುರ  ಘಟನೆಯ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ 0ಡಿ ಕೆ ಶಿವಕುಮಾರ್ ಅವರು ಅಲ್ಪಸಂಖ್ಯಾತ ಮುಖಂಡರ ಸಭೆ ಕರೆದಿದ್ದಾರೆ.

Advertisement

ಡಿ ಕೆ ಶಿವಕುಮಾರ್ ಅವರು ತಮ್ಮ ಸದಾಶಿವನಗರದ ನಿವಾಸದಲ್ಲಿ ಬೆಂಗಳೂರಿನ ಅಲ್ಪಸಂಖ್ಯಾತ ಮುಖಂಡರ ಸಭೆ ಕರೆದಿದ್ದಾರೆ.

ಈ ಸಭೆಯಲ್ಲಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಮಾಜಿ ಸಚಿವ ಸಿಎಂ ಇಬ್ರಾಹಿಂ, ಜಮೀರ್ ಅಹಮದ್ ಖಾನ್, ಎನ್ ಎ ಹ್ಯಾರಿಸ್, ವಿಧಾನ ಪರಿಷತ್ ಸದಸ್ಯ ನಜೀರ್, ಮತ್ತಿತರ ಮುಖಂಡರು ಭಾಗವಹಿಸಲಿದ್ದಾರೆ.

ಬೆಂಗಳೂರಿನ ಪಾದರಾಯನಪುರದಲ್ಲಿ ರವಿವಾರ ಸೋಂಕಿತರ ಸಂಪರ್ಕದಲ್ಲಿದ್ದವರನ್ನು ಕ್ವಾರಂಟೈನ್ ಮಾಡಲು ಹೋದ ಕೋವಿಡ್ ಯೋಧರ ವಿರುದ್ಧ ಹಲ್ಲೆ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ 54 ಜನರನ್ನು ಬಂಧಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next