Advertisement

ರಂಭಾಪುರಿ ಪೀಠಕ್ಕೆ ಭೇಟಿ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್

09:45 AM Mar 20, 2020 | keerthan |

ಚಿಕ್ಕಮಗಳೂರು: ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಡಿ.ಕೆ. ಶಿವಕುಮಾರ್ ಅವರು ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನ ರಂಭಾಪುರಿ ಪೀಠಕ್ಕೆ ಭೇಟಿ ನೀಡಿ ಜಗದ್ಗುರು ವೀರ ಸೋಮೇಶ್ವರರಿಂದ ಆಶೀರ್ವಾದ ಪಡೆದರು. ಇದೇ ವೇಳೆ ಹಿರಿಯ ಜಗದ್ಗುರು ವೀರ ಗಂಗಾಧರ ಸ್ವಾಮೀಜಿ ಭಾವಚಿತ್ರವನ್ನು ಕೆಪಿಸಿಸಿ ಕಚೇರಿಯಲ್ಲಿ ಇಡುವಂತೆ ಕಾರ್ಯಕರ್ತರಿಗೆ ಸೂಚನೆ ನೀಡಿದರು.

Advertisement

ಜಿಲ್ಲಾ ಕಾಂಗ್ರೆಸ್ ಹಾಗೂ ಕಾರ್ಯಕರ್ತರಿಂದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಗೆ ಭವ್ಯ ಸ್ವಾಗತ ಕೋರಲಾಯಿತು.

ಈ ವೇಳೆ ಮಾತನಾಡಿದ ಡಿ ಕೆ ಶಿವಕುಮಾರ್ ಅವರು, ರಾಜ್ಯಾದ್ಯಂತ ಕೊರೊನಾದಿಂದ ಆರ್ಥಿಕವಾಗಿ ನಷ್ಟವಾಗುತ್ತಿರುವ ಹಿನ್ನೆಲೆಯಲ್ಲಿ ನಾಗರಿಕರ ಸಮಸ್ಯೆ ಬಗೆಹರಿಸಬೇಕು. ಎಲ್ಲಾ ಬ್ಯಾಂಕುಗಳ ಇಎಂಐಗೆ ಒಂದು ತಿಂಗಳ ವಿನಾಯಿತಿ ನೀಡುವಂತೆ ಬ್ಯಾಂಕ್ ಗಳಿಗೆ ಸೂಚಿಸಿ, ಸಾಮಾನ್ಯ ಜನರಿಗೆ ಆರ್ಥಿಕವಾಗಿ ಉಸಿರಾಡಲೂ ಆಗುತ್ತಿಲ್ಲ ಎಂದು ಕೇಂದ್ರ ಸರಕಾರಕ್ಕೆ ಮನವಿ ಮಾಡಿದರು.

ಕೊರೊನಾದಿಂದ ರಾಜ್ಯದ ಜನ ತೀವ್ರ ಆರ್ಥಿಕ ಸಂಕಷ್ಟದಲ್ಲಿದ್ದಾರೆ. ವ್ಯಾಪಾರಸ್ಥರು, ಸಣ್ಣ ಉದ್ಯಮಿಗಳು, ನಾಗರಿಕರೂ ತೀವ್ರ ಕಷ್ಟದಲ್ಲಿದ್ದಾರೆ. ಜನರಿಗೆ ಯಾವುದೇ ತೊಂದರೆ ಆಗದಂತೆ ಮುಂಜಾಗ್ರತಾ ಕ್ರಮಗಳನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರ ವಹಿಸಲಿ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next