Advertisement

ಕನಕಪುರದಲಿ ಕಲ್ಲು ಒಡೆಯುತ್ತೇನೆ; ದೆಹಲಿ ಪಾಲಿಟಿಕ್ಸ್ ಗೆ ಹೋಗಲ್ಲ: ಡಿ ಕೆ ಶಿವಕುಮಾರ್

10:12 AM Jan 10, 2020 | keerthan |

ಬೆಂಗಳೂರು: ನಾನು ಸದ್ಯ ಕನಕಪುರದಲ್ಲಿ ಕಲ್ಲುಒಡೆಯುತ್ತೇನೆ. ರೇಷ್ಮೆ ಬೆಳೆಯುತ್ತೇನೆ. ರಾಜ್ಯದಲ್ಲಿ ರಾಜಕಾರಣ ಮಾಡುತ್ತೇನೆ. ಕೆಪಿಸಿಸಿ ಅಧ್ಯಕ್ಷ ಹುದ್ದೆ ಕೊಟ್ಟರೆ ಮಾತ್ರ ನಿಭಾಯಿಸುತ್ತೇನೆ ಎಂದು ಮಾಜಿ ಸಚಿವ ಡಿ ಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ.

Advertisement

ನಗರದಲ್ಲಿ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷರ ನೇಮಕದ ಬಗ್ಗೆ ಸಂಬಂಧಪಟ್ಟವರನ್ನು ಕೇಳಿ ಎಂದ ಅವರು. ಕೆಪಿಸಿಸಿ ಅಧ್ಯಕ್ಷ ವಿಚಾರ ಮಾತನಾಡುವುದಿಲ್ಲ. ನನಗೇನು ಅತುರ ಇಲ್ಲ ಎಂದರು. ದೆಹಲಿಯಲ್ಲಿ  ನಾನು ಎಐಸಿಸಿ ಅಧ್ಯಕ್ಷರನ್ನ ಭೇಟಿ ಮಾಡಿಲ್ಲ. ಎಐಸಿಸಿ ಅಧ್ಯಕ್ಷರು ಅಂಗಡಿಯಲ್ಲಿ ಸಿಗುವ ವಸ್ತು ಅಲ್ಲ ಎಂದು ಸ್ಪಷ್ಟ ಪಡಿಸಿದರು.

ಸಿಬಿಐ ಮೇಲೆ ನನಗೆ ನಂಬಿಕೆ ಇದೆ. ಸಿಬಿಐ ತನ್ನ ಗೌರವ ಉಳಿಸಿಕೊಂಡಿದೆ. ಯಾವುದೇ ನೋಟೀಸ್ ನನಗೆ ಕೊಟ್ಟಿಲ್ಲ ಎಂದ ಡಿ ಕೆ ಶಿವಕುಮಾರ್ ಅವರು, ಕೇಂದ್ರ ಸರಕಾರ ಮತ್ತು ಯಡಿಯೂರಪ್ಪ ಸಿಬಿಐ ಅವರಿಗೆ ನನ್ನ ಮನೆ ಸುತ್ತಲೂ ಇರುವಂತೆ ಹೇಳಿದ್ದಾರೆ. ರಾಜ್ಯದಲ್ಲಿ ಲೋಕಾಯುಕ್ತ ಎಸಿಬಿ ಇದ್ದರೂ ಸಿಎಂ ಸಿಬಿಐಗೆ ಪತ್ರ ಬರೆದಿದ್ದಾರೆ. ಎಲ್ಲವನ್ನೂ ಆರ್ ಟಿಐ ಅಡಿ ದಾಖಲೆ ತೆಗೆದುಕೊಂಡಿದ್ದೇನೆ. ಮಾಧ್ಯಮಗಳ ಮುಂದೆ ಏನು ಹೇಳಲ್ಲ. ದಾಖಲೆಗೆ ಹೋಗುವ ಕಡೆ ಎಲ್ಲವನ್ನೂ ಬಹಿರಂಗ ಮಾಡ್ತೀನಿ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next