Advertisement

D.K. Shivakumar: ಕುಮಾರಸ್ವಾಮಿಗೆ ಹುಚ್ಚಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಬೇಕು: ಡಿಸಿಎಂ

09:54 PM Aug 10, 2024 | Team Udayavani |

ಕನಕಪುರ: ಎಚ್‌.ಡಿ. ಕುಮಾರಸ್ವಾಮಿಯ ಹೇಳಿಕೆ ನೋಡುತ್ತಿದ್ದರೆ ಅವರಿಗೆ ಆದಷ್ಟು ಬೇಗ ಹುಚ್ಚಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ವ್ಯಂಗ್ಯವಾಡಿದರು.

Advertisement

ನಗರದಲ್ಲಿನ ತಮ್ಮ ನಿವಾಸದಲ್ಲಿ ಶನಿವಾರ ಸಾರ್ವಜನಿಕರ ಕುಂದು ಕೊರತೆ ಅಹವಾಲುಗಳನ್ನು ಆಲಿಸಿದ ಬಳಿಕ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ಮಾಜಿ ಸಿಎಂ ಎಸ್‌.ಎಂ. ಕೃಷ್ಣ ಅವರ ಅಳಿಯ ಸಿದ್ಧಾರ್ಥ ಅವರ ಸಾವಿಗೆ ಕಾರಣ ಯಾರು ಎಂದು ನಿಮ್ಮ ವಿರುದ್ಧ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ ಎಂದು ಮಾಧ್ಯಮಗಳು ಕೇಳಿದಾಗ, ನಾನು ಅವರ ತಂದೆ ವಿರುದ್ಧ 1985ರಲ್ಲಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದೆ. ಬಂಗಾರಪ್ಪನವರ ಸಂಪುಟದಲ್ಲಿ ಸಚಿವನಾಗಿದ್ದೆ. ನನ್ನ ಹಾಗೂ ಎಸ್‌.ಎಂ. ಕೃಷ್ಣ ಅವರ ನಡುವಣ ಸಂಬಂಧ ಏನು ಎಂದು ಕುಮಾರಸ್ವಾಮಿಗೆ ಏನು ಗೊತ್ತಿದೆ? ಅವರಿಗೆ ಹುಚ್ಚು ಹಿಡಿದಿದೆ. ಅವರಿಗೆ ಸೂಕ್ತ ಚಿಕಿತ್ಸೆ ಕೊಡಿಸಿ ಎಂದು ಅವರ ಪಕ್ಷದವರಿಗೆ, ನಾಯಕರಿಗೆ, ಹಿತೈಷಿಗಳಿಗೆ ಹೇಳ್ಳೋಣ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next