ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಗೆ ಕೋವಿಡ್ ಸೋಂಕು ದೃಢವಾಗಿದ್ದು, ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.
ನೆರೆ ಪೀಡಿತ ಪ್ರದೇಶಗಳ ವೀಕ್ಷಣೆಗಾಗಿ ನಿನ್ನೆ ಬೆಳಗಾವಿ ಮತ್ತು ಬಾಗಲಕೋಟೆಗೆ ತೆರಳಬೇಕಾಗಿದ್ದ ಡಿಕೆ ಶಿವಕುಮಾರ್ ಅವರು ತಮ್ಮ ಪ್ರವಾಸವನ್ನು ರದ್ದು ಮಾಡಿದ್ದರು. ಆರೋಗ್ಯದ ದೃಷ್ಠಿಯಿಂದ ಈ ಪ್ರವಾಸವನ್ನು ರದ್ದು ಮಾಡಲಾಗಿದೆ ಎಂದು ಡಿ ಕೆ ಶಿವಕುಮಾರ್ ರವಿವಾರ ಹೇಳಿದ್ದರು.
ನಂತರ ಡಿಕೆಶಿ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದು, ಸದ್ಯ ಪಾಸಿಟಿವ್ ವರದಿಯಾಗಿದೆ. ರಾಜಾಜಿನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಗೆ ಒಳಗಾಗಿದ್ದಾರೆ ಎಂದು ವರದಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: ಅತಿವೃಷ್ಟಿ: ಹೆಚ್ಚಿನ ಪರಿಹಾರ ಕೋರಲು ಮುಂದಿನ ವಾರ ದೆಹಲಿಗೆ ಸಿ.ಎಂ ಬಿ.ಎಸ್.ಯಡಿಯೂರಪ್ಪ
ಇದನ್ನೂ ಓದಿ: ಸಾಯುವವರೆಗೂ ಕಾಂಗ್ರೆಸ್ ನಲ್ಲೇ ಇರುತ್ತೇವೆ, ಬಿಜೆಪಿಯ ಪ್ರಶ್ನೆಯೇ ಇಲ್ಲ: ಭಾವುಕರಾದ ಮೊಯ್ಲಿ