Advertisement

ಧರ್ಮಸ್ಥಳ ದೇವಸ್ಥಾನಕ್ಕೆ ಭೇಟಿ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

11:37 AM Apr 04, 2021 | Team Udayavani |

ಬೆಳ್ತಂಗಡಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ರವಿವಾರ ಭೇಟಿ ನೀಡಿದರು.

Advertisement

ಕೇರಳದ ವಯನಾಡ್ ನಿಂದ ಧರ್ಮಸ್ಥಳದ ಹೆಲಿಪ್ಯಾಡ್ ಗೆ 10-55 ಗಂಟೆಗೆ ಹೆಲಿಕಾಪ್ಟರ್ ಮೂಲಕ ಬಂದಿಳಿದರು. ಜತೆಯಲ್ಲಿ ಮಿಥುನ್ ರೈ ಇದ್ದು ಬಳಿಕ ಸನ್ನಿಧಿ ವಸತಿಗೃಹಕ್ಕೆ ತೆರಳಿದರು.

ಇದನ್ನೂ ಓದಿ:ಡಿ. ಸುಧಾಕರ್‌ಗೆ ಸಿ.ಡಿ. ಕಂಟಕ : ಯುವತಿ ಜತೆ ಮಾತು ತನಿಖೆಯಲ್ಲಿ ದೃಢ

ಈ ಸಂದರ್ಭದಲ್ಲಿ ಮಾಜಿ ಶಾಸಕ ವಸಂತ ಬಂಗೇರ, ಬೆಳ್ತಂಗಡಿ ಕಾಂಗ್ರೆಸ್ ತಾಲೂಕು‌ ಮುಖಂಡರಾದ ಗಂಗಾಧರ ಗೌಡ, ರಂಜನ್ ಗೌಡ, ಶೈಲೇಶ್ ಕುಮಾರ್, ಅಭಿನಂದನ್ ಹರೀಶ್ ಕುಮಾರ್ ಮುಂತಾದವರು ಉಪಸ್ಥಿತರಿದ್ದರು.‌

Advertisement

ಬಳಿಕ ಮಂಜುನಾಥ ಸ್ವಾಮಿ ದೇವರ ದರ್ಶನ ಪಡೆದು ಡಾ.ಡಿ.ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಬಳಿಕ ಹೆಲಿಕಾಪ್ಟರ್ ಮೂಲಕ ಮಂಗಳೂರು ವಿಮಾನ ‌ನಿಲ್ದಾಣಕ್ಕೆ ತೆರಳಿ ವಿಮಾನದ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next