Advertisement

ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆಗೆ ಡಿಕೆಶಿ ಆಗ್ರಹ

12:01 PM Apr 14, 2022 | Team Udayavani |

ಬೆಂಗಳೂರು: ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಈಶ್ವರಪ್ಪ ಪ್ರಕರಣದ ತನಿಖೆ ನಡೆಯಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಗ್ರಹಿಸಿದ್ದಾರೆ.

Advertisement

ಸುದ್ದಿಗಾರರ ಜತೆ ಮಾತನಾಡಿದ ಅವರು ಪ್ರತಿಭಟನೆ ನಡೆಸದಂತೆ ಕೋರ್ಟ್ ಮೂಲಕ ನಮಗೆ ನಿರ್ಬಂಧ ಹೇರಿದ್ದಾರೆ. ಸಿಎಂ ಕೂಡ ಈ ಎಲ್ಲಾ ವಿಚಾರಗಳಲ್ಲಿ ನೇರವಾಗಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿದರು.

ಮೊದಲು ಈಶ್ವರಪ್ಪ ವಿರುದ್ಧ ಭ್ರಷ್ಟಾಚಾರದ ಪ್ರಕರಣ ದಾಖಲಿಸಬೇಕು. ಈಶ್ವರಪ್ಪ ಅವರನ್ನು ಬಂಧಿಸಿ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯಬೇಕು ಎಂದು ಆಗ್ರಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next