Advertisement

ಎಸ್ಸೆಂಕೆಗೆ ಶುಭ ಕೋರಿದ ಸಚಿವ ಡಿ.ಕೆ.ಶಿವಕುಮಾರ್‌

02:01 AM Jan 02, 2019 | Team Udayavani |

ಬೆಂಗಳೂರು: ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಅವರು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ನಾಯಕ ಎಸ್‌.ಎಂ.ಕೃಷ್ಣ ಅವರನ್ನು ಭೇಟಿ ಮಾಡಿ ಹೊಸ ವರ್ಷದ ಶುಭಾಶಯ ತಿಳಿಸಿದರು. ಮಂಗಳವಾರ ಸದಾಶಿವನಗರದ ಎಸ್‌.ಎಂ.ಕೃಷ್ಣ ಅವರ ನಿವಾಸಕ್ಕೆ ಆಗಮಿಸಿದ ಡಿ.ಕೆ.ಶಿವಕುಮಾರ್‌, ಕೃಷ್ಣ ಅವರ ಕಾಲು ಮುಟ್ಟಿ ನಮಸ್ಕರಿಸಿ ಆಶೀರ್ವಾದ ಪಡೆದರು. ನಂತರ ಮಾತನಾಡಿದ ಅವರು, ಕೃಷ್ಣ ಅವರು ನನ್ನ ತಂದೆ ಸಮಾನ. ನನಗೆ ರಾಜಕೀಯ ಮಾರ್ಗದರ್ಶಕರು. ಹೊಸ ವರ್ಷದ 
ಶುಭಾಶಯ ಕೋರಲು ಬಂದಿದ್ದೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಸಮ್ಮಿಶ್ರ ಸರ್ಕಾರ ಸಂಕ್ರಾಂತಿ ನಂತರ ಉರುಳುತ್ತದೆ ಎಂಬ ಬಿಜೆಪಿ ನಾಯಕರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಯಡಿಯೂರಪ್ಪ ಅವರಿಗೆ ಮುಖ್ಯಮಂತ್ರಿ ಆಗಬೇಕು ಎಂಬ ಆಸೆ ಇದೆ. ಬೇಕಾದರೆ ಈಗಲೇ ಹೋಗಿ ವಿಧಾನಸೌಧದಲ್ಲಿ ಕುಳಿತುಕೊಳ್ಳಲಿ. ವಿಧಾನಸೌಧ ಬೀಗ ಒಡೆದು ಹೋಗಲಿ ಎಂದು ಡಿ.ಕೆ.ಶಿವ ಕುಮಾರ್‌ ವ್ಯಂಗ್ಯವಾಡಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next