Advertisement

Lok Sabha Election; ಡಿ.ಕೆ. ಸುರೇಶ್‌ಗೆ ಠೇವಣಿ ಸಿಗದು: ಅಗರ್ವಾಲ್‌

10:54 PM Apr 06, 2024 | Team Udayavani |

ದಾವಣಗೆರೆ: ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ. ಸುರೇಶ್‌ ಠೇವಣಿ ಕಳೆದುಕೊಳ್ಳುತ್ತಾರೆ. ಮೂರ್‍ನಾಲ್ಕು ಲಕ್ಷ ಮತಗಳ ಅಂತರದಲ್ಲಿ ಬಿಜೆಪಿ ಅಭ್ಯರ್ಥಿ ಡಾ| ಮಂಜುನಾಥ ಗೆಲ್ಲಲಿದ್ದಾರೆ ಎಂದು ಬಿಜೆಪಿ ರಾಜ್ಯ ಚುನಾವಣ ಉಸ್ತುವಾರಿ ರಾಧಾಮೋಹನ್‌ ಅಗರ್ವಾಲ್‌ ವಿಶ್ವಾಸ ವ್ಯಕ್ತಪಡಿಸಿದರು.

Advertisement

ನಗರದಲ್ಲಿ ಶನಿವಾರ ಮುಖಂಡರ ಸಭೆ ನಡೆಸಿದ ಬಳಿಕ ಅವರು ಮಾಧ್ಯಮದೊಂದಿಗೆ ಮಾತನಾಡಿ, ಡಿ.ಕೆ.ಸುರೇಶ್‌ ಭಾರೀ ಅಂತರದಿಂದ ಸೋಲು ಅನುಭವಿಸಲಿದ್ದಾರೆ. ರಾಜ್ಯದ 28 ಕ್ಷೇತ್ರಗಳಲ್ಲಿಯೂ ಬಿಜೆಪಿ ಗೆಲ್ಲಲಿದೆ. ಕಾಂಗ್ರೆಸ್‌ ದೇಶದಲ್ಲಿ ಸಂಪೂರ್ಣ ಸರ್ವನಾಶವಾಗಿದೆ.

ನಾವು ಯಾವುದೇ ಗ್ಯಾರಂಟಿ ಬಗ್ಗೆ ಹೇಳುವುದಿಲ್ಲ. ನಮಗೆ ಪ್ರಧಾನಿ ನರೇಂದ್ರ ಮೋದಿಯೇ ಗ್ಯಾರಂಟಿ ಎಂದರು.

 

Advertisement

Udayavani is now on Telegram. Click here to join our channel and stay updated with the latest news.

Next