Advertisement

ದ.ಕನ್ನಡ: ಇಬ್ಬರು ಪಿಎಸ್ಐ ಗಳ ವರ್ಗಾವಣೆ

01:00 PM Jul 29, 2022 | Team Udayavani |

ಮಂಗಳೂರು: ಪಶ್ಚಿಮ ವಲಯದ ಇಬ್ಬರು ಪಿಎಸ್ ಐಗಳನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಪೊಲೀಸ್ ಮಹಾನಿರೀಕ್ಷಕಿ ದೇವಜ್ಯೋತಿ ರೇ ಆದೇಶ ಹೊರಡಿಸಿದ್ದಾರೆ.

Advertisement

ಕುಂದಾಪುರ ಗ್ರಾಮಾಂತರ ಠಾಣೆಯ ಪಿಎಸ್ಐ ಸುಹಾಸ್ ಆರ್ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಸಂಚಾರ ವಿಭಾಗಕ್ಕೆ ವರ್ಗಾಯಿಸಲಾಗಿದೆ.

ವಿಟ್ಲ ಠಾಣೆಯ ಪಿಎಸ್ ಐ ಮಂಜುನಾಥ ಟಿ ಅವರನ್ನು ಸುಬ್ರಹ್ಮಣ್ಯ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಸಂಚಾರ ವಿಭಾಗಕ್ಕೆ ವರ್ಗಾಯಿಸಲಾಗಿದೆ.

ಇದನ್ನೂ ಓದಿ:ಹಿಂದು ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಖಂಡಿಸಿ ಹಿಂದು ಸಂಘಟನೆಗಳಿಂದ ಪ್ರತಿಭಟನೆ

ಇಬ್ಬರೂ ಕೂಡಲೇ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಸ್ಥಳದಿಂದ ಬಿಡುಗಡೆಗೊಂಡು, ಯಾವುದೇ ಸೇರುವಿಕೆ ಕಾಲವನ್ನು ಬಳಸಿಕೊಳ್ಳದೆ, ಶೀಘ್ರದಲ್ಲಿ ನಿಯೋಜಿತ ಸ್ಥಳದಲ್ಲಿ ವರದಿ ಮಾಡಬೇಕು ಎಂದು ಪಶ್ಚಿಮ ವಲಯ ಪೊಲೀಸ್ ಮಹಾನರೀಕ್ಷಕರಾದ ದೇವಜ್ಯೋತಿ ರೇ ಅವರು ಆದೇಶ ಹೊರಡಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next