Advertisement

ಜೀರೋ ಟ್ರಾಫಿಕ್ ನಲ್ಲಿ ಕೇಂದ್ರ ಸಚಿವ ಸದಾನಂದ ಗೌಡರು ಬೆಂಗಳೂರಿಗೆ ಶಿಫ್ಟ್

03:17 PM Jan 03, 2021 | Team Udayavani |

ಚಿತ್ರದುರ್ಗ: ಲೋ ಶುಗರ್ ನಿಂದ ಅಸ್ವಸ್ಥಗೊಂಡಿದ್ದ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರನ್ನು ಬೆಂಗಳೂರಿನ ಹಾಸ್ಟರ್ ಆಸ್ಪತ್ರೆಗೆ ಕರೆದೊಯ್ಯಲಾಯಿತು.

Advertisement

ಜ್ಯೂಸ್ ಕುಡಿದು ಸಹಜವಾದಂತೆ ಕಂಡುಬಂದ ಸದಾನಂದ ಗೌಡರು, ಬಸವೇಶ್ವರ ಆಸ್ಪತ್ರೆಯ ಅಂಬ್ಯುಲೆನ್ಸ್ ಮೂಲಕ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಜೀರೋ ಟ್ರಾಫಿಕ್ ಮಾಡಿಕೊಂಡು ಕರೆದೊಯ್ಯಲಾಯಿತು.

ಸಚಿವರು ಲೋ ಶುಗರ್ ಆಗಿದ್ದರಿಂದ ಪ್ರಜ್ಞೆ ತಪ್ಪಿದ್ದರು. ತಕ್ಷಣ ಚಿಕಿತ್ಸೆ ನೀಡಲಾಯಿತು. ಚಿಕಿತ್ಸೆಗೆ ಸ್ಪಂದಿಸಿ, ಚೆನ್ನಾಗಿಯೇ ಮಾತನಾಡಿದರು. ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಕಳುಹಿಸಲಾಗಿದೆ ಎಂದು ಚಿಕಿತ್ಸೆ ನೀಡಿದ ವೈದ್ಯ ಡಾ. ಅಭಿಷೇಕ್ ಮಾಹಿತಿ ನೀಡಿದರು.

ಇದನ್ನೂ ಓದಿ:ಚಿತ್ರದುರ್ಗದಲ್ಲಿ ಆಸ್ಪತ್ರೆಗೆ ದಾಖಲಾದ ಕೇಂದ್ರ ಸಚಿವ ಡಿ ವಿ ಸದಾನಂದ ಗೌಡ

ಅಂಬ್ಯಲೆನ್ಸ್ ನಲ್ಲಿ ಸದಾನಂದ ಗೌಡರ ಜತೆಗೆ ಡಾ. ಜಗದೀಶ್ ಬೆಂಗಳೂರಿಗೆ ತೆರಳಿದರು.

Advertisement

ಶಿವಮೊಗ್ಗದಲ್ಲಿ ನಡೆಯುತ್ತಿದ್ದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಗೆ ತೆರಳಿ ವಾಪಾಸಾಗುತ್ತಿದ್ದ ವೇಳೆ ಚಿತ್ರದುರ್ಗದಲ್ಲಿ ವಿಶ್ರಾಂತಿಗಾಗಿ ನವೀನ್ ರೀಜೆನ್ಸಿಗೆ ಆಗಮಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next