Advertisement

8 ಸಾಧಕರಿಗೆ ಡಾಕ್ ಸೇವಾ ಪ್ರಶಸ್ತಿ ಪ್ರಧಾನ ಮಾಡಿದ ರಾಜ್ಯಪಾಲರು

01:17 PM Oct 17, 2021 | Team Udayavani |

ಬೆಂಗಳೂರು: ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್ ಅವರು ಇಂದು ರಾಜಭವನದಲ್ಲಿ ಎಂಟು ಸಾಧಕರಿಗೆ ಡಾಕ್ ಸೇವಾ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.

Advertisement

2020-21ನೇ ಸಾಲಿನ ರಾಜ್ಯಮಟ್ಟದ ಡಾಕ್ ಸೇವಾ ಪ್ರಶಸ್ತಿಯನ್ನು ಅಂಚೆ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಎಂಟು ಸಾಧಕರಿಗೆ ರಾಜ್ಯಪಾಲರು ಪ್ರಶಸ್ತಿ ಪ್ರಧಾನ ಮಾಡಿದರು.

ಬ್ಯ್ರಾಂಚ್ ಪೋಸ್ಟ್ ಮಾಸ್ಟರ್ ಶಂಕರ್ ವೈ ಹರಿಜನ್, ಪೋಸ್ಟ್ ಮಾನ್ ಹೆಚ್.ಅಶ್ವತ್. ಪೋಸ್ಟಲ್ ಅಸಿಸ್ಟೆಂಟ್ ಸೋಮಶೇಖರ ಎನ್, ಅಂಚೆ ಕಚೇರಿಯ ಅಸಿಸ್ಟೆಂಟ್ ಸೂಪರಿಂಟೆಡೆಂಟ್ ಮೋಹನ್ ಜೆ, ಅಸಿಸ್ಟೆಂಟ್ ಪೋಸ್ಟ್ ಮಾಸ್ಟರ್ ಜನರಲ್ ವಿ ತಾರಾ, ಪೋಸ್ಟಲ್ ಅಸಿಸ್ಟೆಂಟ್ ಶ್ರೀವತ್ಸ ಜೆ, ಬ್ರ್ಯಾಂಚ್ ಪೋಸ್ಟ್ ಮಾಸ್ಟರ್ ನಾಗಮ್ಮ ಎಸ್ ಮಂತ, ಧನಂಜಯ.ಟಿ ಅವರುಗಳಿಗೆ ಪ್ರದಾನ ಮಾಡಲಾಯಿತು.

ಇದನ್ನೂ ಓದಿ:ಮಲ್ಲಿಕಾರ್ಜುನ ಖರ್ಗೆಯ ಭ್ರಷ್ಟ ಸಂಪತ್ತಿನ ಮುಂದೆ ಮಿಕ್ಕವರೆಲ್ಲ ಲೆಕ್ಕಕ್ಕಿಲ್ಲ: ಬಿಜೆಪಿ ಆರೋಪ

ಈ ಸಂದರ್ಭದಲ್ಲಿ ಕರ್ನಾಟಕ ಸರ್ಕಲ್ ನ ಮುಖ್ಯ ಪ್ರಧಾನ ಪೋಸ್ಟ್ ಮಾಸ್ಟರ್ ಶಾರದ ಸಂಪತ್, ಕರ್ನಾಟಕ ದಕ್ಷಿಣ ವಲಯದ ಡಿ.ಎಸ್.ವಿ ಆರ್ ಮೂರ್ತಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next