Advertisement

ಸಿಎಂಗೆ ಎರಡು ಕ್ಷೇತ್ರದಲ್ಲೂ ಸೋಲು “ಡಬ್ಬಲ್‌ ಧಮಾಕಾ’

06:15 AM Apr 24, 2018 | Team Udayavani |

ಬೆಂಗಳೂರು: ಸುಮಾರು 30 ವರ್ಷಗಳಿಂದ ಪ್ರತಿನಿಧಿಸುತ್ತಿದ್ದ ಕ್ಷೇತ್ರ ಬಿಟ್ಟು ಬೇರೆ ಕ್ಷೇತ್ರವನ್ನು ಸಿಎಂ ಸಿದ್ದರಾಮಯ್ಯ ಆಯ್ಕೆ ಮಾಡಿಕೊಂಡಿರುವುದನ್ನು ನೋಡಿದರೆ ಅವರ ನೆಲವೇ ಅಲುಗಾಡುತ್ತಿರುವುದು ಸ್ಪಷ್ಟವಾಗಿದೆ ಎಂದು ಕೇಂದ್ರ ಸಚಿವ ಅನಂತಕುಮಾರ್‌ ಹೇಳಿದರು.

Advertisement

ಸೋಮವಾರ ವಿವಿಧ ಮುಖಂಡರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ಮೊದಲ ಬಾರಿಗೆ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿದ್ದರು. ಹಾಗಾಗಿ ವಡೋದರದಿಂದ ಹಾಗೂ ಉತ್ತರ ಭಾರತದ ಜನರ ಒತ್ತಾಯದ ಮೇರೆಗೆ ವಾರಣಾಸಿಯಿಂದ ಸ್ಪರ್ಧಿಸಿದ್ದರು. ಆದರೆ 30 ವರ್ಷ ಪ್ರತಿನಿಧಿಸಿದ್ದ ಕ್ಷೇತ್ರದ ಬದಲಿಗೆ ಬೇರೆ ಕ್ಷೇತ್ರಕ್ಕೆ ಹೋಗುತ್ತಿರುವುದು ಸೋಲಿನ ಭೀತಿಯಿಂದ. ಇನ್ನಾದರೂ ಸಿದ್ದರಾಮಯ್ಯ ಅರೆಬೆಂದ ವಿಶ್ಲೇಷಣೆ ಮಾಡುವುದನ್ನು ಬಿಡಬೇಕೆಂದು ಕುಟುಕಿದರು. ಸೋಲಿನ ಭೀತಿಯಲ್ಲಿರುವ ಸಿದ್ದರಾಮಯ್ಯ ಬಾದಾಮಿಗೆ ಪಲಾಯನ ಮಾಡಿದ್ದಾರೆ. ಬಾದಾಮಿ ಜನರೂ ಅವರಿಗೆ ಪಾಠ ಕಲಿಸಲಿದ್ದಾರೆ. ಒಟ್ಟಾರೆ ಸಿದ್ದರಾಮಯ್ಯನವರಿಗೆ ಎರಡೂ ಕಡೆಯು ಸೋಲಾಗುವ ಮೂಲಕ ಡಬ್ಬಲ್‌ ಧಮಾಕ ಸಿಗಲಿದೆ ಎಂದು ವ್ಯಂಗ್ಯವಾಡಿದರು.

ರಕ್ಷಣೆ ಸರ್ಕಾರದ ಹೊಣೆ: ಕೇಂದ್ರ ಸಚಿವ ಅನಂತ ಕುಮಾರ್‌ ಹೆಗಡೆ ಅವರಿಗೆ ಬೆದರಿಕೆ ಕರೆ ಕುರಿತಂತೆ ಪ್ರತಿಕ್ರಿಯಿಸಿದ ಅನಂತಕುಮಾರ್‌, ರಾಜ್ಯದ ಜನತೆ ಸೇರಿ ಜನಪ್ರತಿನಿಧಿಗಳ ರಕ್ಷಣೆಯು ರಾಜ್ಯ ಸರ್ಕಾರದ ಜವಾಬ್ದಾರಿ. ಅದರಂತೆ ಕೇಂದ್ರ ಸಚಿವರಿಗೂ ಸೂಕ್ತ ರಕ್ಷಣೆ ಕಲ್ಪಿಸಬೇಕಾದುದು ಮುಖ್ಯಮಂತ್ರಿ ಹಾಗೂ ಗೃಹ ಸಚಿವರ ಜವಾಬ್ದಾರಿ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next