Advertisement
ಬುಧವಾರ ಪತ್ರಿಕಾ ಸಂವಾದದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಜತೆಗಿನ ಮೈತ್ರಿ ಸರ್ಕಾರದಿಂದ ಹೊರ ಬಂದು ಬಿಜೆಪಿ ಜತೆ ಮುಖ್ಯಮಂತ್ರಿಯಾಗುವ ಏಕೈಕ ಉದ್ದೇಶದಿಂದ ನನ್ನ ಬಳಿ ಕುಮಾರಸ್ವಾಮಿ ಗೋಗರೆದಿದ್ದರು. ಮೊದಲು ಮುಖ್ಯಮಂತ್ರಿ ಸ್ಥಾನವನ್ನು ಅವರಿಗೆ ಕೊಡುವ ವಿಚಾರವಾಗಿ ರಾಷ್ಟ್ರೀಯ ನಾಯಕ ಲಾಲಕೃಷ್ಣ ಅಡ್ವಾಣಿ ಅವರು ಹುಷಾರಾಗಿರಿ ಎಂದು ಮೊದಲೇ ಹೇಳಿದ್ದರು. ಆದರೆ, ನಾವು ಇವರನ್ನು ನಂಬಿ ಮೊದಲ ಆದ್ಯತೆ ಕೊಟ್ಟು ಮುಖ್ಯಮಂತ್ರಿ ಸ್ಥಾನ ಬಿಟ್ಟು ಕೊಟ್ಟೆವು. ಅಧಿಕಾರ ಅನುಭವಿಸಿದ ನಂತರ ಇದೇ ದೇವೇಗೌಡರು ಕರಾರು ಹಾಕಿದರು. ಇದನ್ನು ಒಪ್ಪಿಕೊಳ್ಳದೆ ಹೊರ ಬಂದಿದ್ದರಿಂದ ಬಿಜೆಪಿ ಅಧಿಕಾರಕ್ಕೆ ಬಂತು. ಈ ಅಪ್ಪ-ಮಕ್ಕಳ ಆಟ ಎಷ್ಟು ಹೇಳಿದರೂ ಕಡಿಮೆಯೇ ಎಂದು ಕುಮಾರಸ್ವಾಮಿ ಹೇಳಿಕೆಗೆ ಖಾರವಾಗಿ ಉತ್ತರಿಸಿದರು.
ಮುಖಂಡರು ಹಗಲಿರುಳು ಶ್ರಮಿಸುತ್ತಿದ್ದಾರೆ. ಅವರಿಗೆ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ.
● ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ.