Advertisement

ತಾಂತ್ರಿಕ ತೊಂದರೆಯಿಂದ ನಿತ್ಯ 9 ಗಂಟೆ ವಿದ್ಯುತ್‌ ಪೂರೈಕೆ ಕಷ್ಟ : ಸಿಎಂ ಯಡಿಯೂರಪ್ಪ

10:22 AM Mar 13, 2020 | Sriram |

ಬೆಂಗಳೂರು: ಅನೇಕ ತಾಂತ್ರಿಕ ಸಮಸ್ಯೆಗಳಿಂದಾಗಿ ರೈತರಿಗೆ ಕೃಷಿ ಚುಟವಟಿಕೆಗಳಿಗಾಗಿ ನಿತ್ಯ 9 ಗಂಟೆಗಳ ಕಾಲ ವಿದ್ಯುತ್‌ ಪೂರೈಸಲು ಸಾಧ್ಯವಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

Advertisement

ಮೇಲ್ಮನೆಯಲ್ಲಿ ಕಾಂಗ್ರೆಸ್‌ ಸದಸ್ಯ ಮಾನೆ ಶ್ರೀನಿವಾಸ್‌ ಅವರ ಪ್ರಶ್ನೆಗೆ ಉತ್ತರಿಸಿದ ಸಿಎಂ ಯಡಿಯೂರಪ್ಪ ಅವರು, ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಅಳವಡಿಸಲಾಗಿರುವ ಟ್ರಾನ್ಸ್‌ಫಾರ್ಮರ್‌ಗಳು ಅಧಿಕ ವಿದ್ಯುತ್‌ ಹೊರೆ ಮತ್ತು ಇತರ ಕಾರಣಗಳಿಂದ ವಿಫ‌ಲವಾಗುತ್ತಿರುವುದು ವಿದ್ಯುತ್‌ ಸರಬರಾಜು ಕಂಪೆನಿಗಳ ಗಮನಕ್ಕೆ ಬಂದಿದೆ. ಅಲ್ಲದೆ ಕೆಲವರು 7ಎಚ್‌ಪಿ ಬದಲು 15 ಎಚ್‌ಪಿ ಪಂಪ್‌ಸೆಟ್‌ಗಳನ್ನು ಬಳಕೆ ಮಾಡುತ್ತಿರುವುದು ಟ್ರಾನ್ಸ್‌ಫಾರ್ಮರ್‌ ಸಮಸ್ಯೆಗೆ ಒಂದು ಕಾರಣವಾಗಿದೆ ಎಂದರು.

ಸರಕಾರ ಪ್ರತಿ ದಿನ 7 ಗಂಟೆಗಳ ಕಾಲ ವಿದ್ಯುತ್‌ ಸಂಪರ್ಕ ಕಲ್ಪಿಸಲಿದೆ. ಆದರೆ 120 ಕಡೆ ವಿದ್ಯುತ್‌ ಸಮಸ್ಯೆ ಇರುವುದು ನಿಜ. ಈ ಸಮಸ್ಯೆಯನ್ನು ಶೀಘ್ರದಲ್ಲಿಯೇ ಬಗೆಹರಿಸಲು ಬದ್ಧವಾಗಿದೆ ಎಂದು ಭರವಸೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next