Advertisement

Daily Horoscope: ಆರೋಗ್ಯ ಗಮನಿಸಿ. ಹಣಕಾಸಿನ ವಿಚಾರದಲ್ಲಿ ಪ್ರಗತಿ

07:13 AM May 05, 2023 | Team Udayavani |

ಮೇಷ: ಅಧಿಕ ಹಠ ಮಾಡದೇ ಸಹನೆ ಪರಸ್ಪರ ಸಹಕಾರದಿಂದ ಕಾರ್ಯ ಪ್ರವೃತ್ತರಾದರೆ ಯಶಸ್ಸು ಲಭಿಸಲಿದೆ. ಆರೋಗ್ಯ ಗಮನಿಸಿ. ಹಣಕಾಸಿನ ವಿಚಾರದಲ್ಲಿ ಪ್ರಗತಿ. ಉದ್ಯೋಗ ವ್ಯವಹಾರದಲ್ಲಿ ಪ್ರಾಮಾಣಿಕತೆಯ ಪ್ರದರ್ಶನದಿಂದ ಪ್ರೋತ್ಸಾಹ.

Advertisement

ವೃಷಭ: ಗೌರವ ಸ್ಥಾನಮಾನಾಧಿ ಗಳ ವೃದ್ಧಿ. ಜನಮನ್ನಣೆ. ಧಾರ್ಮಿಕ ಚಟುವಟಿಕೆಗಳಲ್ಲಿ ಸಕ್ರಿಯತೆ. ದೀರ್ಘ‌ ಪ್ರಯಾಣ. ದೇಶ ವಿದೇಶಗಳ ವ್ಯವಹಾರಗಳಲ್ಲಿ ಅಭಿವೃದ್ಧಿ. ಬಂಧುಮಿತ್ರರ ಭೇಟಿಯಿಂದ ಮಾನಸಿಕ ನೆಮ್ಮದಿ.

ಮಿಥುನ: ಸಂಶೋಧಕರಿಗೆ, ಆಳವಾದ ಅಧ್ಯಯನ ಪ್ರವೃತ್ತ ರಿಗೆ ಅನುಕೂಲಕರ ದಿನ. ಆರೋಗ್ಯ ಬಗ್ಗೆ ಗಮನಹರಿಸಿ. ಅತೀ ದೇಹಾಯಾಸ ಸಂಭವ. ದೂರದ ಮಿತ್ರರ ಭೇಟಿ. ದಾಂಪತ್ಯದಲ್ಲಿ ಅನುರಾಗ ವೃದ್ಧಿ. ಗುರುಹಿರಿಯರ ಮಾರ್ಗದರ್ಶನದ ಲಾಭ.

ಕರ್ಕ: ಪರರಿಗೆ ಉಪಕಾರ ಮಾಡಲು ಹೋಗಿ ತೊಂದರೆ ಆಹ್ವಾನಿಸದಿರಿ. ಪಾರದರ್ಶಕತೆ ಸ್ಪಷ್ಟತೆಯೊಂದಿಗೆ ವ್ಯವಹರಿಸಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಯತ್ನಕ್ಕೆ ತಕ್ಕ ಪ್ರತಿಫ‌ಲ ದೊರಕಲಿದೆ. ಮಾತೃಸಮಾನರಿಂದ ಪ್ರೋತ್ಸಾಹ.

ಸಿಂಹ: ಆರೋಗ್ಯದ ಬಗ್ಗೆ ಗಣನೀಯ ಎಚ್ಚರ ಅಗತ್ಯ. ಆಹಾರ ಸೇವನೆಯಲ್ಲಿ ಮುಂಜಾಗ್ರತೆ ವಹಿಸಿರಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ವಿದ್ಯಾರ್ಥಿ ಗಳಿಗೆ ಅನುಕೂಲಕರ ಪರಿಸ್ಥಿತಿ. ದೇವತಾ ಪ್ರಾರ್ಥನೆಯಿಂದ ನೆರವು.

Advertisement

ಕನ್ಯಾ: ಆರೋಗ್ಯ ವೃದ್ಧಿ. ಗೃಹ ಉಪಯೋಗಿ ವಸ್ತುಗಳ ಸಂಗ್ರಹ. ಬಂಧುಮಿತ್ರರ ಸಮಾಗಮ. ಆಸ್ತಿ ಸಂಚಯನಕ್ಕೆ ಆದ್ಯತೆ. ಹೂಡಿಕೆಗಳಲ್ಲಿ ಲಾಭ. ಪರಸ್ಪರ ಅನುರಾಗ ವೃದ್ಧಿ. ಮಕ್ಕಳಿಂದ ಸಂತೋಷದ ವಾರ್ತೆ. ವ್ಯವಹಾರಗಳಲ್ಲಿ ಗೌರವ.

ತುಲಾ: ಅವಿವಾಹಿತರಿಗೆ ಉತ್ತಮ ಸಂಬಂಧ ಕೂಡಿ ಬರುವ ಸಮಯ. ಆರೋಗ್ಯ ವೃದ್ಧಿ. ನೂತನ ಬಂಧುಮಿತ್ರರ ಸಮಾಗಮ. ಹೆಚ್ಚಿದ ಸ್ಥಾನ ಗೌರವಾದಿ ಸುಖ. ನಿರಂತರ ಧನಾಗಮ. ಉದ್ಯೋಗ ವ್ಯವಹಾರಗಳಲ್ಲಿ ಎಲ್ಲರಿಂದಲೂ ಸಹಾಯ ಸಹಕಾರ ಲಭ್ಯ.

ವೃಶ್ಚಿಕ: ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ನಿರೀಕ್ಷಿತ ಗುರಿ ಸಾಧಿಸಿದ ತೃಪ್ತಿ ಸಮಾಧಾನ. ಪಾಲುದಾರರಿಂದ ಸಹಕಾರ ಪ್ರೋತ್ಸಾಹ. ಅನಿರೀಕ್ಷಿತ ಧನಾಗಮನ. ಎಲ್ಲರಲ್ಲೂ ಪ್ರೀತಿ ವಿಶ್ವಾಸ ಸಂಪಾದನೆ. ಹಿರಿಯರ ಆರೋಗ್ಯದ ಬಗ್ಗೆ ಗಮನಹರಿಸಿ.

ಧನು: ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ ಉತ್ತಮ ಧನಾರ್ಜನೆ. ಗೃಹದಲ್ಲಿ ಸಂತಸದ ವಾತಾವರಣ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಮಾಡದಿರಿ. ವಿದ್ಯಾರ್ಥಿಗಳಿಗೆ ಪ್ರಯಾಣ ಸಂಭವ. ಧಾರ್ಮಿಕ ಕಾರ್ಯ ಗಳಲ್ಲಿ ಭಾಗಿ. ಹಣಕಾಸಿನ ಬಗ್ಗೆ ಜಾಗ್ರತೆ.

ಮಕರ: ಈ ದಿನ ಸಾಮಾನ್ಯ ಫ‌ಲದಾಯಕ. ಯಾವುದೇ ಸಾಹಸ ಪ್ರವೃತ್ತಿ ಸಲ್ಲದು. ತಾಳ್ಮೆ ಸಮಾಧಾನದಿಂದ ಸಮಯ ಕಳೆಯಿರಿ. ವಿಶ್ರಾಂತಿ ಪಡೆಯಿರಿ. ದೇವತಾ ಪ್ರಾರ್ಥನೆಯಿಂದ ನೆಮ್ಮದಿ. ಆರೋಗ್ಯ ಗಮನಿಸಿ.

ಕುಂಭ: ಆರೋಗ್ಯ ವೃದ್ಧಿ. ಮಕ್ಕಳ ನಿಮಿತ್ತ ಸಂತೋಷ ವೃದ್ಧಿ. ಹೆಚ್ಚಿದ ವರಮಾನ. ಬಂಧುಮಿತ್ರರಿಂದಲೂ, ಉದ್ಯೋಗ ವ್ಯವಹಾರ ದಿಂದಲೂ ಅನಿರೀಕ್ಷಿತ ಪ್ರಗತಿ. ಗೃಹೋಪಯೋಗಿ ವಸ್ತುಗಳ ಸಂಗ್ರಹ.

ಮೀನ: ಉದ್ಯೋಗ ವ್ಯವಹಾರ ಗಳಲ್ಲಿ ಪರಿಶ್ರಮದಿಂದ ಪ್ರಗತಿ. ಆರೋಗ್ಯದಲ್ಲಿ ಸುಧಾರಣೆ. ಧನಾರ್ಜನೆಯಲ್ಲಿ ಮುನ್ನಡೆ. ಆಸ್ತಿ ವಿಚಾರದಲ್ಲಿ ಪ್ರಗತಿಪರ ಬದಲಾವಣೆ. ಮಕ್ಕಳಿಂದ ಸುವಾರ್ತೆ. ಸಾಂಸಾರಿಕವಾಗಿ ನೆಮ್ಮದಿಯ ದಿನ.

Advertisement

Udayavani is now on Telegram. Click here to join our channel and stay updated with the latest news.

Next