Advertisement

Daily Horoscope: ಉದ್ಯೋಗ ವ್ಯವಹಾರದಲ್ಲಿ ನಿರೀಕ್ಷೆಗೂ ಮೀರಿದ ಯಶಸ್ಸು, ಕೀರ್ತಿ ಸಂಪಾದನೆ

07:23 AM May 27, 2023 | Team Udayavani |

ಮೇಷ:ಉದ್ಯೋಗ ವ್ಯವಹಾರ ನಿಮಿತ್ತ ದೂರ ಪ್ರಯಾಣ ಸಂಭವ. ಆರೋಗ್ಯ ಗಮನಿಸಿ. ಭೂಮ್ಯಾದಿ ಆಸ್ತಿ ವಿಚಾರದಲ್ಲಿ ಪ್ರಗತಿ. ಉತ್ತಮ ಧನ ವೃದ್ಧಿ. ಬಂಧುಮಿತ್ರರ ಪ್ರೋತ್ಸಾಹ. ದಾರ್ಮಿಕ ವಿಚಾರದಲ್ಲಿ ನಿಷ್ಠೆ ಶ್ರದ್ಧೆ .

Advertisement

ವೃಷಭ: ದೇವತಾ ಕಾರ್ಯದಲ್ಲಿ ತಲ್ಲೀನತೆಯಿಂದ ಮನಃ ಸಂತೋಷ. ಜನಮನ್ನಣೆ. ಉದ್ಯೋಗ ವ್ಯವಹಾರದಲ್ಲಿ ನಿರೀಕ್ಷೆಗೂ ಮೀರಿದ ಯಶಸ್ಸು, ಕೀರ್ತಿ ಸಂಪಾದನೆ. ಧನಾರ್ಜನೆ ವೃದ್ಧಿ. ಗುರುಹಿರಿಯರಿಂದ ಸಂತೋಷ ವೃದ್ಧಿ.

ಮಿಥುನ: ಉದ್ಯೋಗ ವ್ಯವಹಾರದಲ್ಲಿ ಅಭಿವೃದ್ಧಿ. ನಿರಿಕ್ಷಿತ ಧನಾಗಮನ. ಸಹೋದ್ಯೋಗಿ ಗಳಿಂದ ಸಹಕಾರ. ಭೂಮ್ಯಾದಿ ಆಸ್ತಿ ವಿಚಾರದಲ್ಲಿ ಪ್ರಗತಿ. ಸಂತೋಷದ ಪ್ರವೃತ್ತಿಯವರಿಗೆ ಸೌಕರ್ಯಾದಿ ವೃದ್ಧಿ. ಗುರು ಹಿರಿಯರ ಉತ್ತಮ ಮಾರ್ಗದರ್ಶನ ಲಭ್ಯ.

ಕರ್ಕ: ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ನಿರೀಕ್ಷಿತ ಯಶಸ್ಸು ಲಭ್ಯ. ಆರ್ಥಿಕ ಸುದೃಢತೆ. ಮಕ್ಕಳಿಂದಲೂ ವಿದ್ಯಾರ್ಥಿಗಳಿಂದಲೂ ಹಿರಿಯರಿಗೆ ಸಂತೋಷ ವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ.

ಸಿಂಹ:ಸ್ಥಿರ ಬುದ್ಧಿ, ದೃಢತೆಯಿಂದ ಕೂಡಿದ ಕಾರ್ಯವೈಖರಿ. ಸ್ಥಾನ ಮಾನ ವೃದ್ಧಿ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆ ಅಗತ್ಯ. ಮಾತಿನಲ್ಲಿ ಸಹನೆ ತಾಳ್ಮೆ ವಹಿಸುವುದರಿಂದ ಕೆಲಸ ಕಾರ್ಯಗಳಲ್ಲಿ ಸಫ‌ಲತೆ. ಗೃಹೋಪವಸ್ತುಗಳ ಸಂಗ್ರಹ.

Advertisement

ಕನ್ಯಾ: ಪಾಲುದಾರಿಕಾ ವ್ಯವಹಾರದಲ್ಲಿ ಸಂಶಯಕ್ಕೆ ಅವಕಾಶ ನೀಡದೇ ಪಾರದರ್ಶಕತೆಗೆ ಆದ್ಯತೆ ನೀಡಿ. ಉತ್ತಮ ಧನ ಸಂಚಯನ ಹಾಗೂ ಹೂಡಿಕೆಗಳಲ್ಲಿ ಅಭಿವೃದ್ಧಿ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ.

ತುಲಾ: ಸ್ವಂತ ಪರಿಶ್ರಮ ಬುದ್ಧಿವಂತಿಕೆಯಿಂದ ಕೂಡಿದ ಕಾರ್ಯವೈಖರಿಯ ಸಫ‌ಲತೆ. ಗಣ್ಯರಿಂದ ಮನ್ನಣೆ. ಆತ್ಮೀಯರಿಗೆ ಪ್ರೀತಿ ಪಾತ್ರರಾಗುವ ಸಂದರ್ಭ. ಸಾಂಸಾರಿಕ ಸುಖ ವೃದ್ಧಿ. ಭೂಮ್ಯಾದಿ ವಿಚಾರಗಳಲ್ಲಿ ವಿಳಂಬ ಇತ್ಯಾದಿ ಫ‌ಲ.

ವೃಶ್ಚಿಕ: ದೈರ್ಯ ಪರಾಕ್ರಮ, ಶೌರ್ಯ, ಆತ್ಮಧೈರ್ಯದಿಂದ ಕೂಡಿದ ಚಟುವಟಿಕೆ. ಸ್ವಾಭಿಮಾನ ಗುಣದಿಂದ ಗೌರವ ಆದರಾದಿ ಸುಖ ವೃದ್ಧಿ. ಸಣ್ಣ ಸಂಚಾರ ಸಂಭವ. ಗೃಹದಲ್ಲಿ ಸಂತಸದ ವಾತಾವರಣ.

ಧನು: ಉದ್ಯೋಗ ವ್ಯವಹಾರ ಕೆಲಸ ಕಾರ್ಯಗಳಲ್ಲಿ ತನ್ಮಯತೆ. ನಿರೀಕ್ಷಿತ ಫ‌ಲ ಲಭಿಸಿದ ತೃಪ್ತಿ. ಸ್ಥಾನಮಾನ ಗೌರವ ಪ್ರಾಪ್ತಿ. ಮಕ್ಕಳಿಂದ ಸಂತೋಷ, ವಿದ್ಯೆ ಜ್ಞಾನ ಪ್ರಗತಿ. ಕೀರ್ತಿ ಸಂಪಾದನೆ. ಅನಿರೀಕ್ಷಿತ ಧನ ಸಂಚಯನ .
ಮಕರ: ನಾಯಕತ್ವ ಗುಣ ವೃದ್ಧಿ. ಸಹೋದರ ಸಮಾನರಿಂದ ಸಂದಭೋìಚಿತ ಸಹಾಯ ಸಹಕಾರ. ಪ್ರಯಾಣದಿಂದ ಲಾಭ. ದಾಂಪತ್ಯದಲ್ಲಿ ಅನುರಾಗ ವೃದ್ಧಿ. ಅವಿವಾಹಿತರಿಗೆ ಉತ್ತಮ ಸಂಬಂಧ ಒದಗುವ ಸಮಯ.

ಕುಂಭ: ಅಧ್ಯಯನಶೀಲತೆ. ಉದ್ಯೋಗ ವ್ಯವಹಾರಗಳಲ್ಲಿ ಅಧಿಕ ಧನಾರ್ಜನೆ ಆದರೂ ಪರರಿಗೆ ಸಹಾಯ ಮಾಡುವಾಗ ಪೂರ್ವಾಪರ ವಿಚಾರ ತಿಳಿದು ನಿರ್ಣಯಿಸಿ. ಗೃಹೋಪಕರಣ ವಸ್ತು ಸಂಗ್ರಹ. ಗುರು ಹಿರಿಯರ ಆರೋಗ್ಯ ವೃದ್ಧಿ.

ಮೀನ: ಮಾನಸಿಕ ಸಂತುಷ್ಟತೆಗೆ ತೊಂದರೆ ಆಗದಂತೆ ಕಾರ್ಯ ನಿರ್ವಹಿಸಿ. ಅನಗತ್ಯ ವಿಚಾರಣೆ ಗಳಿಗೆ ಒಲವು ತೋರದಿರಿ. ಧಾರ್ಮಿಕ ವಿಚಾರದಲ್ಲಿ ಆಸಕ್ತಿ. ದೇವತಾ ಸಂದರ್ಶನ. ಸಹೋದರಾದಿ ವರ್ಗದವರಿಂದ ಸಹಾಯ. ದಾಂಪತ್ಯ ಸುಖ ವೃದ್ಧಿ.

Advertisement

Udayavani is now on Telegram. Click here to join our channel and stay updated with the latest news.

Next