Advertisement

ಬುಧವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

07:48 AM Aug 18, 2021 | Team Udayavani |

ಮೇಷ: ಉತ್ತಮ ಜನಮನ್ನಣೆ. ವಿಶ್ವಾಸ ಪಾತ್ರರಾಗಿರಿ. ಉತ್ತಮ ಧನಾರ್ಜನೆ ಇದ್ದರೂ ಧನವ್ಯಯಕ್ಕೆ ಕೆಲವು ದಾರಿ ಬಂದಾವು. ಉದ್ಯೋಗ ವ್ಯವಹಾರಗಳಲ್ಲಿ ಘರ್ಷಣೆಗೆ ಅವಕಾಶ ನೀಡದಿರಿ. ಕಾರ್ಯ ಸಫ‌ಲತೆ ಆಗುವುದು. ದಾಂಪತ್ಯ ತೃಪ್ತಿದಾಯಕ.

Advertisement

ವೃಷಭ: ಮನಸ್ಸಿನಲ್ಲಿ ಗೊಂದಲಕ್ಕೆ ಅವಕಾಶ ನೀಡದೇ ಧೈರ್ಯದಿಂದ ಕಾರ್ಯ ನಿರ್ವಹಿಸಿ. ಅತಿಯಾದ ಆಸೆ ಸಲ್ಲದು. ಭೂಮಿ, ಆಸ್ತಿ ಇತ್ಯಾದಿ ವ್ಯವಹಾರಗಳಲ್ಲಿ ಸ್ವಲ್ಪ ಪ್ರಗತಿ. ಗೃಹದಲ್ಲಿ ಸಂತಸದ ವಾತಾವರಣ. ಧಾರ್ಮಿಕ ಕೆಲಸ ಕಾರ್ಯಗಳಲ್ಲಿ ಭಾಗಿ.

ಮಿಥುನ: ಅಧ್ಯಯನ ನಿಮಿತ್ತ ದೀರ್ಘ‌ ಪ್ರಯಾಣ ಸಂಭವ. ಪಾಲುದಾರಿಕಾ ವ್ಯವಹಾರದಲ್ಲಿ ಉತ್ತಮ ಪ್ರಗತಿ. ನೂತನ ಮಿತ್ರರ ಸಮಾಗಮ. ಧನಾರ್ಜನೆಗೆ ಕೊರತೆ ಆಗದು. ಗುರುಹಿರಿಯರಿಂದ ಉತ್ತಮ ಮಾರ್ಗದರ್ಶನ.

ಕರ್ಕ: ಅತಿಯಾದ ಆತ್ಮವಿಶ್ವಾಸ ಸಲ್ಲದು. ಮಾತನಾಡು ವಾಗ ಎಚ್ಚರ ವಹಿಸಿ. ದಾಂಪತ್ಯದಲ್ಲಿ ಸಹನೆ ಇರಲಿ. ಧಾರ್ಮಿಕ ವಿಚಾರದಲ್ಲಿ ಭಕ್ತಿ ಶ್ರದ್ಧೆಗೆ ಆದ್ಯತೆ ನೀಡಿ. ಧನಾರ್ಜನೆ ಉತ್ತಮ. ಗುರುಹಿರಿಯರಲ್ಲಿ ಬೇಸರ ಮಾಡದಿರಿ.

ಸಿಂಹ: ಅತಿಯಾದ ಕಾರ್ಯ ಒತ್ತಡದಿಂದ ದೇಹಾಯಾಸ ತೋರೀತು. ದೀರ್ಘ‌ ಪ್ರಯಾಣ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಧನಾರ್ಜನೆ. ವಿದ್ಯಾರ್ಥಿಗಳು ಪರರನ್ನು ಅವಲಂಬಿಸದೇ ಸ್ವಂತ ಪರಿಶ್ರಮದಲ್ಲಿ ಕಾರ್ಯ ಸಾಧಿಸಿರಿ.

Advertisement

ಕನ್ಯಾ: ಆರೋಗ್ಯದಲ್ಲಿ ವೃದ್ಧಿ . ಧಾರ್ಮಿಕ ಚಟುವಟಿಕೆ ಗಳಿಗಾಗಿ ಪ್ರಯಾಣ ಸಂಭವ. ಧನಾರ್ಜನೆಗಿಂತಲೂ ಅಧಿಕ ವ್ಯಯದ ಪರಿಸ್ಥಿತಿ. ಉದ್ಯೋಗ ವ್ಯವಹಾರದಲ್ಲಿ ಸಮಾಧಾನ ತೃಪ್ತಿ. ಪಾಲುದಾರಿಕಾ ಕ್ಷೇತ್ರದವರಿಗೆ ಸದವಕಾಶ.

ತುಲಾ: ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ ಕಾರ್ಯ ಸಾಧಿಸಿದ ಸಂತೋಷ. ನಿರೀಕ್ಷಿತ ಸ್ಥಾನ ಗೌರವಾದಿ ಲಭ್ಯ. ದೂರದ ವ್ಯವಹಾರಗಳಿಂದ ಅಧಿಕ ಧನಾರ್ಜನೆ. ಮನೆಯಲ್ಲಿ ಸಂತಸದ ವಾತಾವರಣ. ಉತ್ತಮ ವಾಕ್‌ಚತುರತೆ.

ವೃಶ್ಚಿಕ: ಆರೋಗ್ಯದ ಬಗ್ಗೆ ಉದಾಸೀನ ಪ್ರವೃತ್ತಿ ಸಲ್ಲದು. ನೂತನ ಮಿತ್ರರ ಭೇಟಿ. ಸಹೋದ್ಯೋಗಿಗಳ ಸಹಕಾರದಿಂದ ಕೆಲಸ ಕಾರ್ಯಗಳಲ್ಲಿ ಪ್ರಗತಿ. ಅವಿವಾಹಿತರಿಗೆ ವಿವಾಹ ಭಾಗ್ಯ ಕೂಡಿ ಬರುವುದು. ಗೃಹೋಪಕರಣ ವಸ್ತು ಸಂಗ್ರಹ.

ಧನು: ಸರಿಯಾದ ನಿಯಮ ಪಾಲನೆಯಿಂದ ಆರೋಗ್ಯ ವೃದ್ಧಿ . ಉತ್ತಮ ಧನಾರ್ಜನೆ. ನಿರೀಕ್ಷಿತ ಸಹಾಯ ಲಭ್ಯ. ಸಾಂಸಾರಿಕ ಸುಖ ಮಧ್ಯಮ. ಧಾರ್ಮಿಕ ಕಾರ್ಯಗಳಿಗೆ ಹೆಚ್ಚಿನ ಶ್ರಮ. ವಿದ್ಯಾರ್ಥಿಗಳು ಪರರ ಸಹಾಯ ಪಡೆದು ಗುರಿ ಸಾಧಿಸಿರಿ.

ಮಕರ: ಆರೋಗ್ಯದಲ್ಲಿ ಸುಧಾರಣೆ. ದೂರದ ವ್ಯವಹಾರಗಳಿಂದ ಉತ್ತಮ ಧನಾರ್ಜನೆ. ಆಸ್ತಿ ಇತ್ಯಾದಿ ವಿಚಾರಗಳಲ್ಲಿ ಪ್ರಗತಿ. ಮಕ್ಕಳ ಬಗ್ಗೆ ಹೆಚ್ಚಿನ ಗಮನ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ ಒದಗುವ ಸಂಭವ.

ಕುಂಭ: ಅಧಿಕ ಧನಾರ್ಜನೆ. ನೂತನ ಮಿತ್ರರ ಭೇಟಿ. ಆಸ್ತಿ ವಿಚಾರಗಳಲ್ಲಿ ಹೆಚ್ಚಿನ ಜವಾಬ್ದಾರಿ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾದ ತೃಪ್ತಿ. ದೀರ್ಘ‌ ಪ್ರಯಾಣದಲ್ಲಿ ನಿರೀಕ್ಷಿತ ಸಫ‌ಲತೆ. ಉತ್ತಮ ಸ್ಥಾನ ಗೌರವಾದಿ ಲಕ್ಷಣ.

ಮೀನ: ಹಣಕಾಸಿನ ವಿಚಾರದಲ್ಲಿ ಜಾಗ್ರತೆಯ ನಡೆ ಅಗತ್ಯ. ಮಾತನಾಡುವಾಗ ದಾಕ್ಷಿಣ್ಯಕ್ಕೆ ಒಳಗಾಗದಿರಿ. ವಿದ್ಯಾರ್ಥಿ ಗಳಿಗೆ ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲ. ಸರಿಯಾದ ದಾಖಲಾತಿಯೊಂದಿಗೆ ವ್ಯವಹರಿಸಿ. ದೂರದ ವ್ಯವಹಾರ ನಿಮಿತ್ತ ಪ್ರಯಾಣ ಸಂಭವ .

Advertisement

Udayavani is now on Telegram. Click here to join our channel and stay updated with the latest news.

Next