Advertisement

ನಿರೀಕ್ಷಿತ ಸ್ಥಾನ ಸುಖಕ್ಕಾಗಿ ಹೆಚ್ಚಿದ ಶ್ರಮ

07:55 AM Oct 02, 2021 | Team Udayavani |

ಮೇಷ: ಆರೋಗ್ಯ ಗಮನಿಸಿ. ಮಾಡುವಂತಹ ವ್ಯವಹಾರದಲ್ಲಿ ಪಾರದರ್ಶಕತೆ ಹೆಚ್ಚಿನ ಆದ್ಯತೆ ನೀಡುವುದರಿಂದ ನಿರೀಕ್ಷಿತ ಸಫ‌ಲತೆ. ಧನಾರ್ಜನೆ ಉತ್ತಮ ವಾಗಿದ್ದರೂ ಏನೋ ಒಂದು ವಿಧದ ಅತೃಪ್ತಿ ತೋರೀತು.

Advertisement

ವೃಷಭ: ಪಾಲುದಾರಿಕಾ ವ್ಯವಹಾರಗಳಲ್ಲಿ ಅನಿರೀಕ್ಷಿತ ಅಭಿವೃದ್ಧಿ. ಮಾಡುವಂತಹ ಉದ್ಯೋಗದಲ್ಲಿ ಹೆಚ್ಚಿನ ಗೌರವ ಮನ್ನಣೆ ಪ್ರಾಪ್ತಿ. ಅವಿವಾಹಿತರಿಗೆ ಉತ್ತಮ ಸಂಬಂಧ ಒದಗಿ ಬರುವ ಸಮಯ. ಆರೋಗ್ಯದಲ್ಲಿ ಅಭಿವೃದ್ಧಿ.

ಮಿಥುನ: ನಿರೀಕ್ಷಿತ ಸ್ಥಾನ ಸುಖಕ್ಕಾಗಿ ಹೆಚ್ಚಿದ ಶ್ರಮ. ಉದ್ಯೋಗ ವ್ಯವಹಾರಗಳಲ್ಲಿ ಅಧಿಕ ಜವಾಬ್ದಾರಿ. ಸಹೋದ್ಯೋಗಿಗಳಿಂದ ಸಹಕಾರ. ವಿದ್ಯಾರ್ಥಿಗಳಿಗೆ ಅಧ್ಯಯನ ಶೀಲರಿಗೆ ಗೌರವ ಪುರಸ್ಕಾರದ ಅವಕಾಶ. 
ಕಟಕ: ಆರೋಗ್ಯದಲ್ಲಿ ಸುಧಾರಣೆ. ಸಣ್ಣ ಪ್ರಯಾಣ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಹೊಂದಾಣಿಕೆ ಅಗತ್ಯ. ಭೂಮಿ ಆಸ್ತಿ ಇತ್ಯಾದಿ ವಿಚಾರಗಳಲ್ಲಿ ತಾಳ್ಮೆಯ ನಿರ್ಣಯ ಫ‌ಲಿಸೀತು. ಮಿತ್ರರಲ್ಲಿ ಗೊಂದಲಕ್ಕೆ ಅವಕಾಶ ನೀಡದಿರಿ.
ಸಿಂಹ: ಆರೋಗ್ಯ ವಿಚಾರದಲ್ಲಿ ಉದಾಸೀನತೆ ತೋರದಿರಿ. ಸಾಂಸಾರಿಕ ಜವಾಬ್ದಾರಿ ಹೆಚ್ಚಾದೀತು. ದೀರ್ಘ‌ ಸಂಚಾರಗಳಲ್ಲಿ ವಿಳಂಬ ಎದುರಾದೀತು. ದೇವತಾ ಪ್ರಾರ್ಥನೆಯಿಂದ ವಿಘ್ನ ಪರಿಹಾರ. ವಿದ್ಯಾರ್ಥಿಗಳಿಗೆ ಉತ್ತಮ ಸ್ಥಾನ.
ಕನ್ಯಾ: ಅಧಿಕ ದೈಹಿಕ ಶ್ರಮದಿಂದ ನಿರೀಕ್ಷಿತ ಸ್ಥಾನ ಪ್ರಾಪ್ತಿ. ಉತ್ತಮ ಗೌರವದ ಧನ ಸಂಪಾದನೆ. ಪರರ ಸಹಾಯ ನಿರೀಕ್ಷೆ ಮಾಡದೆ ಸ್ವಂತ ನಿರ್ಣಯಗಳಲ್ಲಿ ಕಾರ್ಯತತ್ಪರತೆ. ಭೂಮಿ ವಾಹನ ಆಸ್ತಿ ಇತ್ಯಾದಿ ವಿಚಾರಗಳಲ್ಲಿ ಮುನ್ನಡೆ.
ತುಲಾ: ಆರೋಗ್ಯ ವೃದ್ಧಿ. ಮನೋರಂಜನೆಯಿಂದ ಕೂಡಿದ ದಿನ. ಅನಿರೀಕ್ಷಿತ ಧನಾಗಮನ ಹೆಚ್ಚಿನ ಲಾಭ. ನೂತನ ಮಿತ್ರರ ಭೇಟಿ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ. ಆಸ್ತಿ ವಿಚಾರಗಳಲ್ಲಿ ಪರಿಶ್ರಮದಿಂದ ಮುನ್ನಡ ಇತ್ಯಾದಿ ಶುಭಫ‌ಲ.
ವೃಶ್ಚಿಕ: ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ಸರಕಾರಿ ಉದ್ಯೋಗಗಳಲ್ಲಿ ಸಫ‌ಲತೆ. ದೂರದ ವ್ಯವಹಾರಗಳಲ್ಲಿ ನಿರೀಕ್ಷಿತ ಧನಲಾಭ. ಮಿತ್ರರ ಸಹಾಯ. ಗುರುಹಿರಿಯರ ಪ್ರೋತ್ಸಾಹ ಆಶೀರ್ವಾದ. ವಿದ್ಯಾರ್ಥಿಗಳಿಗೆ ಸಣ್ಣ ಪ್ರಯಾಣ ಸಂಭವ.
ಧನು: ಮಾತನಾಡುವಾಗ ದಾಕ್ಷಿಣ್ಯಕ್ಕೆ ಒಳಗಾಗದೇ ತಾಳ್ಮೆ ಯಿಂದ ವ್ಯವಹರಿಸಿ ಕಾರ್ಯ ಸಾಧನೆ. ಸಂದರ್ಭಕ್ಕೆ ಸರಿಯಾಗಿ ಸಹಾಯ ಒದಗಿ ಬರುವುದು. ಹಣಕಾಸಿನ ವಿಚಾರದ‌ಲ್ಲಿ ದುಡುಕು ನಿರ್ಧಾರ ಮಾಡದಿರಿ. ವಿದ್ಯಾರ್ಥಿಗಳ ವಿಚಾರದಲ್ಲಿ ವಿಪುಲ ಅವಕಾಶ.
ಮಕರ:ದೀರ್ಘ‌ ಪ್ರಯಾಣ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಸಫ‌ಲತೆ. ಗೌರವ ಆದರಾದಿ ಸುಖ. ಅಧಿಕ ಧನಾರ್ಜನೆ. ಗುರುಹಿರಿಯರ ಆರೋಗ್ಯದ ಬಗ್ಗೆ ಗಮನಹರಿಸಿ. ಆಸ್ತಿ ವಿಚಾರದಲ್ಲಿ ಮುನ್ನಡೆ.
ಕುಂಭ:ಆರೋಗ್ಯ ವೃದ್ಧಿ. ಗುರುಹಿರಿಯರಿಂದ ಉತ್ತಮ ಮಾರ್ಗದರ್ಶನ, ಪ್ರೋತ್ಸಾಹ. ದೂರದ ವ್ಯವಹಾರಗಳಿಂದ ಧನವೃದ್ಧಿ. ಪಾಲುದಾರಿಕಾ ವ್ಯವಹಾರದಲ್ಲಿ ಉತ್ತಮ ಸಹಕಾರ. ನಿರೀಕ್ಷಿತ ಗುರಿ ಸಾಧನೆ. ಮನೆಯಲ್ಲಿ ಸಂತಸ.
ಮೀನ:ಮಕ್ಕಳಿಂದ ಸಂತೋಷ. ಮಾನಸಿಕ ನೆಮ್ಮದಿ. ಆರೋಗ್ಯದಲ್ಲಿ ಸುಧಾರಣೆ. ಗೃಹ ಆಸ್ತಿ ವಿಚಾರಗಳಲ್ಲಿ ಎಚ್ಚರಿಕೆಯ ನಡೆಯಿಂದ ಶ್ರೇಯಸ್ಸು. ಧನಾರ್ಜನೆಗೆ ಕೊರತೆ ಯಾಗದು. ಸಹೋದ್ಯೋಗಿಗಳಿಂದ ಉತ್ತಮ ಅವಕಾಶ.
Advertisement

Udayavani is now on Telegram. Click here to join our channel and stay updated with the latest news.

Next