Advertisement

ಈ ರಾಶಿಯವರಿಗೆ ಇಂದು ಮಾನಸಿಕ ನೆಮ್ಮದಿ, ಆರೋಗ್ಯದಲ್ಲಿ ಸುಧಾರಣೆ ಇರಲಿದೆ

08:13 AM Oct 10, 2021 | Team Udayavani |

ಮೇಷ: ದೈನಂದಿನ ಉದ್ಯೋಗ ವ್ಯವಹಾರಗಳಲ್ಲಿ ಸುದೃಢತೆ. ದೀರ್ಘ‌ ಪ್ರಯಾಣ ಸಂಭವ. ಸಾಂಸಾರಿಕ ಸುಖ ಸಮೃದ್ಧಿ. ಪಾಲುದಾರಿಕಾ ವ್ಯವಹಾರಗಳಲ್ಲಿ ತಾಳ್ಮೆ ಸಹನೆ ಅಗತ್ಯ. ಹೆಚ್ಚಿದ ಪರಿಶ್ರಮದಿಂದ ದೇಹಾಯಾಸ ಸಂಭವ.

Advertisement

ವೃಷಭ: ಗುರುಹಿರಿಯರ ಆರೋಗ್ಯದ ಬಗ್ಗೆ ಗಮನಹರಿಸಿ. ಎಲ್ಲಾ ಕೆಲಸಕಾರ್ಯಗಳಲ್ಲಿ ಸಫ‌ಲತೆ ಕಾಣುವಿರಿ. ಉತ್ತಮ ಧನ ಸಂಚಯನ. ಆಸ್ತಿ ವಿಚಾರಗಳಲ್ಲಿ ಎಚ್ಚರಿಕೆಯ ನಡೆ ಅಗತ್ಯ. ಗೃಹದಲ್ಲಿ ಚರ್ಚೆಗೆ ಅವಕಾಶ ನೀಡದಿರಿ.

ಮಿಥುನ: ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ಹಣಕಾಸಿನ ವಿಚಾರದಲ್ಲಿ ಜಾಗ್ರತೆ ವಹಿಸಿ. ಅವಿವಾಹಿತರಿಗೆ ಯೋಗ್ಯ ಸಂಬಂಧ ಕೂಡಿಬರಲಿದೆ. ಗುರುಹಿರಿಯರಿಂದ ಉತ್ತಮ ಸಹಕಾರ.

ಕಟಕ: ಪರರಿಗೆ ಸಹಾಯ ಮಾಡುವಾಗ ಪೂರ್ವಾಪರ ತಿಳಿದು ನಿರ್ಣಯಿಸಿ. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯ ಪ್ರವೃತ್ತಿ ಸಲ್ಲದು. ಉದ್ಯೋಗ ವ್ಯವಹಾರಗಳಲ್ಲಿ ಸಣ್ಣ ಬದಲಾವಣೆ ಸಂಭವ.ವಿದ್ಯಾರ್ಥಿಗಳಿಗೆ ಶುಭ ಫ‌ಲ.

ಸಿಂಹ: ಮನೋರಂಜನೆಯಿಂದ ಕೂಡಿದ ದಿನ. ಅನಿರೀಕ್ಷಿತ ಧನಾಗಮನ ಹೆಚ್ಚಳದ ಲಾಭ. ಆರೋಗ್ಯ ವೃದ್ಧಿ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ. ಆಸ್ತಿ ವಿಚಾರಗಳಲ್ಲಿ ಎಚ್ಚರಿಕೆ ನಡೆ ಅಗತ್ಯ. ದಾಂಪತ್ಯದಲ್ಲಿ ಅನುರಾಗ ವೃದ್ಧಿ. ಆರೋಗ್ಯ ಗಮನಿಸಿ.

Advertisement

ಕನ್ಯಾ:ಮಾತನಾಡುವಾಗ ದಾಕ್ಷಿಣ್ಯಕ್ಕೆ ಒಳಗಾಗದೆ ತಾಳ್ಮೆಯಿಂದ ವ್ಯವಹರಿಸಿ. ಸಂದರ್ಭಕ್ಕೆ ಸರಿಯಾಗಿ ಸಹಾಯ ಒದಗಿ ಬರುವುದು. ಹಣಕಾಸಿನ ವಿಚಾರದಲ್ಲಿ ದುಡುಕ ಬೇಡಿ. ಉತ್ತಮ ಆರೋಗ್ಯ ಭಾಗ್ಯ. ಮಕ್ಕಳಿಂದ ಸುಖ ಪ್ರಾಪ್ತಿ.

ತುಲಾ: ನೂತನ ಮಿತ್ರರ ಸಮಾಗಮ. ಅಧಿಕ ಧನಲಾಭ. ಸಾಂಸಾರಿಕ ಸುಖ ತೃಪ್ತಿದಾಯಕ. ಧಾರ್ಮಿಕ ಸ್ಥಳಗಳ ಸಂದರ್ಶನ. ವಿದ್ಯಾರ್ಥಿಗಳಿಗೆ ಸಕಲ ಸೌಕರ್ಯಗಳ ಲಾಭ. ಗುರುಹಿರಿಯರ ಆರೋಗ್ಯದ ಬಗ್ಗೆ ಜಾಗ್ರತೆ ವಹಿಸಿ.

ವೃಶ್ಚಿಕ: ಪ್ರಯಾಣದಿಂದ ಸಂತೋಷ. ಜನಮನ್ನಣೆ ಹೆಚ್ಚಿದ ಸ್ಥಾನಮಾನ ಕೀರ್ತಿ. ಅನಿರೀಕ್ಷಿತ ಧನಾಗಮನ. ಅವಿವಾಹಿತರಿಗೆ ಒಳ್ಳೆಯ ಸಂಬಂಧ ಒದಗಿ ಬರುವ ಅವಕಾಶ. ದಾಂಪತ್ಯದಲ್ಲಿ ಅನಗತ್ಯ ಚರ್ಚೆಗೆ ಆಸ್ಪದ ಕೊಡಬೇಡಿ.

ಧನು: ಗೃಹದಲ್ಲಿ ಸಂತಸದ ವಾತಾವರಣ. ಆರೋಗ್ಯದ ವಿಚಾರದಲ್ಲಿ ಸರಿಯಾದ ನಿಯಮ ಪಾಲಿಸುವುದರಿಂದ ಅಭಿವೃದ್ಧಿ. ಕುಟುಂಬದಿಂದ ಉತ್ತಮ ಪ್ರೋತ್ಸಾಹ. ಉದ್ಯೋಗ ವ್ಯವಹಾರದಲ್ಲಿ ಅಭಿವೃದ್ಧಿ. ಮಾತಿನಲ್ಲಿ ಹಿಡಿತವಿರಲಿ.

ಮಕರ: ದೂರದ ವ್ಯಾವಹಾರಗಳಿಂದ ಧನವೃದ್ಧಿ. ಅಧ್ಯಯನಶೀಲತೆ, ರಾಜಕೀಯ, ಸರಕಾರಿ ವರ್ಗ ದವರ ಸಹಾಯ. ಮನೆಯಲ್ಲಿ ಸಂಭ್ರಮದ ವಾತಾವರಣ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಮುಂದಾಳುತ್ವ.

ಕುಂಭ: ಸಣ್ಣ ಪ್ರಯಾಣ ಭಾಗ್ಯ. ಪರರಿಗೆ ಸಹಾಯ ಮಾಡುವಾಗ ಪೂರ್ವಾಪರ ತಿಳಿದು ನಿರ್ಣಯಿಸಿ. ಹಣಕಾಸಿನ ವಿಚಾರದಲ್ಲಿ ದುಂದುವೆಚ್ಚಕೆ ಅವಕಾಶ ನೀಡದಿರಿ. ಉದ್ಯೋಗ ವ್ಯವಹಾರಗಳಲ್ಲಿ ಸಣ್ಣ ಬದಲಾವಣೆ ಸಂಭವ.

ಮೀನ: ಮಾನಸಿಕ ನೆಮ್ಮದಿ. ಆರೋಗ್ಯದಲ್ಲಿ ಸುಧಾರಣೆ. ಗೃಹ ಆಸ್ತಿಯ ವಿಚಾರದಲ್ಲಿ ಎಚ್ಚರಿಕೆಯ ನಡೆಯಿಂದ ಶ್ರೇಯಸ್ಸು. ಗುರುಹಿರಿಯರ ಆರೋಗ್ಯ ತೃಪ್ತಿ ದಾಯಕ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಪ್ರತಿಫ‌ಲ.

Advertisement

Udayavani is now on Telegram. Click here to join our channel and stay updated with the latest news.

Next