Advertisement

ಅತಿಯಾದ ಕಾರ್ಯ ಒತ್ತಡದಿಂದ ದೇಹಾಯಾಸ ತೋರಿತು. ದೀರ್ಘ‌ ಪ್ರಯಾಣ ಸಂಭವ.

09:09 AM Nov 18, 2021 | Team Udayavani |

ಮೇಷ: ಉತ್ತಮ ಜನಮನ್ನಣೆ. ವಿಶ್ವಾಸ ಪಾತ್ರರಾಗಿರಿ. ಉತ್ತಮ ಧನಾರ್ಜನೆ ಇದ್ದರೂ ಧನವ್ಯಯಕ್ಕೆ ಹಲವು ದಾರಿ ಬಂದಾವು. ಉದ್ಯೋಗ ವ್ಯವಹಾರಗಳಲ್ಲಿ ಘರ್ಷಣೆಗೆ ಅವಕಾಶ ನೀಡದಿರಿ. ಕಾರ್ಯ ಸಫ‌ಲತೆ ಆಗುವುದು.

Advertisement

ವೃಷಭ: ಮನಸ್ಸಿನಲ್ಲಿ ಗೊಂದಲಕ್ಕೆ ಅವಕಾಶ ನೀಡದೇ ಧೈರ್ಯದಿಂದ ಕಾರ್ಯ ನಿರ್ವಹಿಸಿ. ಅತಿಯಾದ ಆಸೆ ಸಲ್ಲದು. ಭೂಮಿ ಆಸ್ತಿ ಇತ್ಯಾದಿ ವ್ಯವಹಾರಗಳಲ್ಲಿ ಸ್ವಲ್ಪ ಪ್ರಗತಿ. ಗೃಹದಲ್ಲಿ ಸಂತಸದ ವಾತಾವರಣ. ಧಾರ್ಮಿಕ ಕೆಲಸಗಳಲ್ಲಿ ಭಾಗಿ.

ಮಿಥುನ: ಆರೋಗ್ಯ ಗಮನಿಸಿ. ಅಧ್ಯಯನ ನಿಮಿತ್ತ ದೀರ್ಘ‌ ಪ್ರಯಾಣ ಸಂಭವ. ಪಾಲುದಾರಿಕಾ ವ್ಯವಹಾರ ದಲ್ಲಿ ಉತ್ತಮ ಪ್ರಗತಿ. ನೂತನ ಮಿತ್ರರ ಸಮಾಗಮ. ಧನಾರ್ಜನೆಗೆ ಕೊರತೆ ಆಗದು. ಗುರುಹಿರಿಯರಿಂದ ಉತ್ತಮ ಮಾರ್ಗದರ್ಶನ.

ಕಟಕ: ಅತಿಯಾದ ಆತ್ಮವಿಶ್ವಾಸ ಸಲ್ಲದು. ಮಾತನಾಡು ವಾಗ ಎಚ್ಚರ ವಹಿಸಿ. ದಾಂಪತ್ಯದಲ್ಲಿ ಸಹನೆ ಇರಲಿ. ಧಾರ್ಮಿಕ ವಿಚಾರದಲ್ಲಿ ಭಕ್ತಿ ಶ್ರದ್ಧೆ ಕೊರತೆಯಾಗದಂತೆ ಕಾರ್ಯ ನಿರ್ವಹಿಸಿ. ಗುರುಹಿರಿಯರಲ್ಲಿ ಬೇಸರ ಮಾಡದಿರಿ.

ಸಿಂಹ: ಅತಿಯಾದ ಕಾರ್ಯ ಒತ್ತಡದಿಂದ ದೇಹಾಯಾಸ ತೋರಿತು. ದೀರ್ಘ‌ ಪ್ರಯಾಣ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಧನಾರ್ಜನೆ. ವಿದ್ಯಾರ್ಥಿಗಳು ಪರರನ್ನು ಅವಲಂಬಿಸದೇ ಸ್ವಂತ ಪರಿಶ್ರಮದಲ್ಲಿ ಕಾರ್ಯ ಸಾಧಿಸಿಕೊಳ್ಳಿ.

Advertisement

ಕನ್ಯಾ: ಆರೋಗ್ಯ ವೃದ್ಧಿ. ಧಾರ್ಮಿಕ ಚಟುವಟಿಕೆಗಳಿಗಾಗಿ ಪ್ರಯಾಣ ಸಂಭವ. ಧನಾರ್ಜನೆಗಿಂತಲೂ ಅಧಿಕ ವ್ಯಯದ ಪರಿಸ್ಥಿತಿ. ಉದ್ಯೋಗ ವ್ಯವಹಾರದಲ್ಲಿ ಸಮಾಧಾನ ತೃಪ್ತಿ. ಪಾಲುದಾರಿಕಾ ಕ್ಷೇತ್ರದವರಿಗೆ ಸದವಕಾಶ.

ತುಲಾ: ಉತ್ತಮ ಗೌರವಾದರದಿಂದ ಕೂಡಿದ ಧನಾರ್ಜನೆ. ಜ್ಞಾನಕ್ಕೆ ಮನ್ನಣೆ. ಸಹೋದರರಿಗೆ ಅಭಿವೃದ್ಧಿ. ಮಕ್ಕಳಿಗೆ, ವಿದ್ಯಾರ್ಥಿಗಳಿಗೆ ಪ್ರಯಾಣ ಯೋಗ. ದೇವತಾ ಕಾರ್ಯಗಳಲ್ಲಿ ಗೊಂದಲವಿದ್ದರೂ ಸಫ‌ಲತೆ ಸಾಧಿಸಿದ ತೃಪ್ತಿ.

ವೃಶ್ಚಿಕ: ಉದ್ಯೋಗ ನಿಮಿತ್ತ ಪ್ರಯಾಣ. ನಿರೀಕ್ಷಿತ ಸ್ಥಾನ ಸುಖ. ಸ್ವಪ್ರಯತ್ನದಿಂದ ಕೂಡಿದ ಧನಾರ್ಜನೆ. ಗೃಹೋಪಯೋಗಿ ವಸ್ತು ಸಂಗ್ರಹ. ಮಕ್ಕಳ ವಿಚಾರದಲ್ಲಿ ತಾಳ್ಮೆ ಅಗತ್ಯ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಅಗತ್ಯ.

ಧನು: ಧನಾರ್ಜನೆಗೆ ಸರಿಯಾದ ಖರ್ಚು. ಆರೋಗ್ಯದಲ್ಲಿ ಏರಿಳಿತದ ಸ್ಥಿತಿ. ಕಾರ್ಮಿಕ ವರ್ಗ ದವರಿಂದಲೂ ಸಹೋದರಾದಿ ವರ್ಗದವರಿಂದಲೂ ಸುಖ. ಪ್ರಯಾಣ, ದೇವತಾ ಕಾರ್ಯಗಳಲ್ಲಿ ಅಡಚಣೆ ವಿಳಂಬ.

ಮಕರ: ಆಹಾರೋದ್ಯಮದವರಿಗೆ ಅಭಿವೃದ್ಧಿ. ಉತ್ತಮ ಧನಾರ್ಜನೆ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ ಪ್ರಯಾಣ ಯೋಗ. ಧಾರ್ಮಿಕ ಕಾರ್ಯಗಳಿಗೆ ಧನವ್ಯಯ. ಹಿರಿಯರ ಆರೋಗ್ಯದ ಬಗ್ಗೆ ಗಮನಿಸಿ.

ಕುಂಭ: ಮಕ್ಕಳ ವಿಚಾರದಲ್ಲಿ ಸಂತೋಷ. ನಿರೀಕ್ಷಿತ ಧನಾಗಮ. ಸಹೋದರ ಸಮಾನರಿಗೆ ದೀರ್ಘ‌ ಪ್ರಯಾಣ ಸಖ. ಉದ್ಯೋಗ ವಿಚಾರದಲ್ಲಿ , ಪಾಲುದಾರಿಕಾ ವ್ಯವಹಾರದಲ್ಲಿ ಜವಾಬ್ದಾರಿ ವಹಿಸುವುದರಿಂದ ಅನುಕೂಲ.
ಮೀನ: ದೂರ ಪ್ರಯಾಣ. ಗೃಹೋಪ ವಸ್ತು ಸಂಗ್ರಹ. ಮಕ್ಕಳಿಗೆ, ವಿದ್ಯಾರ್ಥಿಗಳಿಗೆ ನಿರೀಕ್ಷಿತ ಸ್ಥಾನ ಸುಖ. ಉತ್ತಮ ಧನಾರ್ಜನೆ. ಗುರುಹಿರಿಯರ ಆರೋಗ್ಯ ವೃದ್ಧಿ. ಧಾರ್ಮಿಕ ಕಾರ್ಯಗಳಿಗೆ ಧನವ್ಯಯದಿಂದ ಸಮಾಧಾನ ತೃಪ್ತಿ.
Advertisement

Udayavani is now on Telegram. Click here to join our channel and stay updated with the latest news.

Next