Advertisement

ರಾಶಿ ಫಲ : ಹಠಮಾರಿತನ ಸಲ್ಲದು. ಸುಮ್ಮನೆ ನಿಷ್ಠುರಕ್ಕೆ ಕಾರಣವಾಗದಿರಿ.

08:07 AM Nov 23, 2021 | Team Udayavani |

ಮೇಷ: ದೇವತಾನುಗ್ರದಿಂದ ಗೃಹದಲ್ಲಿ ಸಂತಸದ ವಾತಾವರಣ. ಆಸ್ತಿ ವಿಚಾರಗಳಲ್ಲಿ ಅಭಿವೃದ್ಧಿ. ನೂತನ ಬಂಧುಮಿತ್ರರ ಸಮಾಗಮ. ಅಧ್ಯಯನ ಪ್ರವೃತ್ತರಿಗೆ ಹೆಚ್ಚಿದ ಶ್ರಮ. ಕೆಲಸ ಕಾರ್ಯಗಳಲ್ಲಿ ಸಾಹಸ ಪ್ರವೃತ್ತಿಯಿಂದ ಅಭಿವೃದ್ಧಿ.

Advertisement

ವೃಷಭ: ವಿದೇಶ ಮೂಲದಿಂದ ಧನಾಗಮನ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಪ್ರಯಾಣ ಅಡಚಣೆ ಗಳ ನಿವಾರಣೆ. ಸ್ಥಾನ ಗೌರವಾದಿ ವಿಚಾರಗಳಲ್ಲಿ ಪ್ರಗತಿ. ಧಾರ್ಮಿಕ ಕಾರ್ಯಗಳಿಗೆ ಧನವ್ಯಯ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಪ್ರತಿಫ‌ಲ.

ಮಿಥುನ: ವಿದ್ಯಾರ್ಜನೆಯಲ್ಲಿ ತಲ್ಲೀನತೆ. ಗುರುಹಿರಿಯರ ಸಹಕಾರ ಪ್ರೋತ್ಸಾಹದಿಂದ ಸ್ಥಾನ ಗೌರವಾದಿ ವೃದ್ಧಿ. ನಿರಂತರ ಧನಾರ್ಜನೆ. ಉದ್ಯೋಗ ವ್ಯವಹಾರಗಳಲ್ಲಿ ವಾಕ್‌ಚತುರತೆಯಿಂದ ಪ್ರಗತಿ. ಮಕ್ಕಳಿಂದ ಸಂತೋಷ.

ಕಟಕ: ಗೃಹೋಪಕರಣ ವಸ್ತುಗಳಿಗಾಗಿ ಧನವ್ಯಯ. ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಅವಿವಾಹಿತರಿಗೆ ಯೋಗ್ಯ ಸಂಬಂಧ ಒದಗುವ ಸಮಯ. ಗುರುಹಿರಿಯರಿಗೆ ಸಂಭ್ರಮದ ಕಾಲ ಕಳೆಯುವಿಕೆ.

ಸಿಂಹ: ದೀರ್ಘ‌ ಪ್ರಯಾಣ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮದಿಂದ ಪ್ರಗತಿ. ಹಣಕಾಸಿನ ವಿಚಾರದಲ್ಲಿ ಸಾಹಸ ಪ್ರವೃತ್ತಿ ಸಲ್ಲದು. ತಾಳ್ಮೆಯ ನಡೆಯಿಂದ ಸಫ‌ಲತೆ. ಗೃಹೋಪ ವಸ್ತುಗಳ ಸಂಗ್ರಹ.

Advertisement

ಕನ್ಯಾ: ಆರೋಗ್ಯ ಗಮನಿಸಿ. ಅತಿಯಾದ ದೇಹಾಯಾಸ ವಿರುವ ಪ್ರವೃತ್ತಿ ಸಲ್ಲದು. ಹೆಚ್ಚಿದ ಜವಾಬ್ದಾರಿ. ಉದ್ಯೋಗ ವ್ಯವಹಾರಗಳಲ್ಲಿ ಗೌರವ ವೃದ್ಧಿ. ಉತ್ತಮ ಧನಾರ್ಜನೆ. ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ಸಫ‌ಲತೆ.

ತುಲಾ: ಹಠಮಾರಿತನ ಸಲ್ಲದು. ಸುಮ್ಮನೆ ನಿಷ್ಠುರಕ್ಕೆ ಕಾರಣವಾಗದಿರಿ. ತಾಳ್ಮೆ ಸಹನೆಯಿಂದ ವ್ಯವಹರಿಸಿ. ನಿರೀಕ್ಷಿತ ಗುರಿ ಸಾಧಿಸಿಕೊಳ್ಳಿ. ಹಣಕಾಸಿನ ವಿಚಾರದಲ್ಲಿ ಉತ್ತಮ ಪ್ರಗತಿ. ಆಸ್ತಿ ವಿಚಾರದಲ್ಲಿ ಹೆಚ್ಚಿ ಪರಿಶ್ರಮ ಅಗತ್ಯ.

ವೃಶ್ಚಿಕ: ಆರೋಗ್ಯ ವೃದ್ಧಿ. ಹೆಚ್ಚಿದ ಸ್ಥಾನಮಾನ ಗೌರವ. ಬಂಧುಮಿತ್ರರ ಸಹಕಾರ. ಕೈತುಂಬಾ ಉದ್ಯೋಗ ವ್ಯವಹಾರ ಸಂಭವ. ಸಾಂಸಾರಿಕ ಸುಖ ವೃದ್ಧಿ. ಗುರುಹಿರಿಯರ ಉತ್ತಮ ಸಹಾಯ ಮಾರ್ಗದರ್ಶನ.

ಧನು : ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ಬದಲಾವಣೆ ಸಂಭವ. ದೀರ್ಘ‌ ಪ್ರಯಾಣದಿಂದ ಲಾಭ. ನೂತನ ಮಿತ್ರರ ಸಮಾಗಮ. ಆಸ್ತಿ ಭೂಮಿ ಕಟ್ಟಡ ವಿಚಾರಗಳಲ್ಲಿ ಮುನ್ನಡೆ. ಸಾಂಸಾರಿಕ ಸುಖ ಮಧ್ಯಮ.

ಮಕರ: ಮಕ್ಕಳಿಂದ ಹೆಚ್ಚಿದ ಸಂತೋಷ. ಬಹುಮಿತ್ರರ ಸಮಾಗಮ. ಉದ್ಯೋಗ ವ್ಯವಹಾರಗಳಲ್ಲಿ ವಿಪುಲ ಅವಕಾಶ. ಸಾಂಸಾರಿಕ ಸುಖ ವೃದ್ಧಿ. ಅನಿರೀಕ್ಷಿತ ಧನಾಗಮ ಹಾಗೂ ಹೆಚ್ಚಿದ ಉಳಿತಾಯ. ಆರೋಗ್ಯ ಗಮನಿಸಿ.

ಕುಂಭ:ಆಸ್ತಿ ವಿಚಾರಗಳಲ್ಲಿ ಪ್ರಗತಿ. ಬಂಧುಮಿತ್ರರ ಸಹಕಾರ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಪ್ರಗತಿ. ಧನಾರ್ಜನೆ ಉತ್ತಮ. ವಿದ್ಯಾರ್ಥಿಗಳಿಗೆ ಅನಿರೀಕ್ಷಿತ ಅವಕಾಶ, ಗೌರವಾದಿ ಪ್ರಾಪ್ತಿ. ದಾಂಪತ್ಯ ಸುಖ ತೃಪ್ತಿದಾಯಕ.

ಮೀನ: ಗೃಹೋಪ ವಸ್ತುಗಳ ಸಂಗ್ರಹ. ಆರೋಗ್ಯ ಗಮನಿಸಿ. ಸಹೋದರ ಸಮಾನರಿಂದ ಉತ್ತಮ ಸಹಕಾರ ಸಂಭವ. ಹೆಚ್ಚಿದ ವರಮಾನ. ಗೃಹದಲ್ಲಿ ಸಂತಸದ ವಾತಾವರಣ. ಗುರುಹಿರಿಯರ ಉತ್ತಮ ಮಾರ್ಗದರ್ಶನ.

Advertisement

Udayavani is now on Telegram. Click here to join our channel and stay updated with the latest news.

Next