Advertisement

Daily Horoscope; ಹಿತಶತ್ರುಗಳು ಮತ್ತು ವಿಘ್ನ ಸಂತೋಷಿಗಳಿಂದ ತೊಂದರೆ

07:15 AM Apr 03, 2024 | Team Udayavani |

ಮೇಷ: ಕಾರ್ಯರಂಗದಲ್ಲಿ ಹೊಸತನ.ಉದ್ಯೋಗ ಸ್ಥಾನದಲ್ಲಿ ಉತ್ಸಾಹ ವರ್ಧನೆ.ಉದ್ಯಮಗಳ ನಡುವೆ ಉತ್ಪನ್ನಗಳ ಪ್ರಚಾರದಲ್ಲಿ ಮೇಲಾಟ. ವಿಸ್ತರಣಾ ಕಾರ್ಯಗಳಿಗೆ ಬ್ಯಾಂಕ್‌ ನೆರವು. ಹಿರಿಯರ ಹಳೆಯ ಪರಿಚಿತರ ಭೇಟಿ.

Advertisement

ವೃಷಭ: ಸರಕಾರಿ ಅಧಿಕಾರಿಗಳಿಗೆ ಹೆಚ್ಚುವರಿ ಕೆಲಸದ ಹೊರೆ. ಖಾಸಗಿ ರಂಗದ ಉತ್ಪಾದನೆ ಹೆಚ್ಚಳ ಅಲ್ಪಾವಧಿಯ ಷೇರು ವ್ಯವಹಾರದಲ್ಲಿ ನಷ್ಟ. ದೇವತಾ ಸಾನ್ನಿಧ್ಯಕ್ಕೆ ಭೇಟಿ. ಸಂಗೀತ ಶ್ರವಣದ ಅವಕಾಶ.

ಮಿಥುನ: ಹಿತಶತ್ರುಗಳು ಮತ್ತು ವಿಘ್ನ ಸಂತೋಷಿಗಳಿಂದ ತೊಂದರೆ. ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು. ಸ್ವಂತ ಉದ್ಯಮದ ಪ್ರಗತಿ ತೃಪ್ತಿಕರ. ಕೃಷ್ಯುತ್ಪನ್ನಗಳ ಮಾರಾಟದಿಂದ ಲಾಭ. ವ್ಯವಹಾರ ನಿಮಿತ್ತ ಸಣ್ಣ ಪ್ರಯಾಣ.

ಕರ್ಕಾಟಕ: ಉದ್ಯೋಗ ಸ್ಥಾನದಲ್ಲಿ ಪ್ರತಿಭೆ, ಅನುಭವಕ್ಕೆ ಪ್ರಾಶಸ್ತ್ಯ ಉದ್ಯಮದ ಉತ್ಪಾದನೆಗಳ ಜನಪ್ರಿಯತೆ ವೃದ್ಧಿ. ವಸ್ತ್ರ, ಸಿದ್ಧ ಉಡುಪು, ಆಭರಣ, ಶೋಕಿ ವಸ್ತುಗಳ ವ್ಯಾಪಾರ ಹೆಚ್ಚಳ. ದೀರ್ಘಾವಧಿ ಹೂಡಿಕೆಯಲ್ಲಿ ಲಾಭ.

ಸಿಂಹ: ಉದ್ಯೋಗಸ್ಥರಿಗೆ ಸಂತೃಪ್ತಿಯ ಭಾವನೆ. ಗ್ರಾಹಕರ ಪ್ರಚಾರದಿಂದ ವ್ಯಾಪಾರಕ್ಕೆಪೋಷಣೆ. ಕಟ್ಟಡ ನಿರ್ಮಾಣ ಕಂಟ್ರಾಕ್ಟರರಿಗೆ ಕಾರ್ಮಿಕರ
ಸಮಸ್ಯೆ. ಹೊಸ ನಿವೇಶನಕ್ಕಾಗಿ ಹುಡುಕಾಟ. ಮನೆಯಲ್ಲಿ ಮಂಗಲ ಕಾರ್ಯದ ಪ್ರಸ್ತಾವ.

Advertisement

ಕನ್ಯಾ: ಉದ್ಯೋಗ ಸ್ಥಾನದಲ್ಲಿ ಹಿತಕರ ವಾತಾ ವರಣ. ಸ್ವಂತ ಉದ್ಯಮದಲ್ಲಿ ಗಮನಾರ್ಹ ಪ್ರಗತಿ, ಹೊಸ ನೌಕರರ ಸೇರ್ಪಡೆ. ಉದ್ಯೋಗಾಸಕ್ತರಿಗೆ
ಅಯಾಚಿತ ಅವಕಾಶಗಳು ಲಭ್ಯ ಕೃಷಿ ಭೂಮಿಯಲ್ಲಿ ಉತ್ತಮ ಬೆಳೆ.

ತುಲಾ: ಕೀರ್ತನೆ, ಭಜನೆ, ಸತ್ಸಂಗಗಳಲ್ಲಿ ಆಸಕ್ತಿ. ಸಮಸ್ಯೆಗಳಿಗೆ ಸಕಾಲದಲ್ಲಿ ಪರಿಹಾರ. ಎಣಿಸದ ಮೂಲದಿಂದ ಧನಪ್ರಾಪ್ತಿ. ಎಲೆಕ್ಟ್ರಾನಿಕ್ಸ್‌ ಸಾಮಗ್ರಿಗಳ ಖರೀದಿ. ಕುಶಲಕರ್ಮಿಗಳಿಗೆ ಉದ್ಯೋಗಾವಕಾಶ. ಆರೋಗ್ಯ ಉತ್ತಮ.

ವೃಶ್ಚಿಕ: ಎಲ್ಲ ರೀತಿಯ ಸಂಕಟಗಳಿಂದ ವಿಮೋಚನೆ. ಉದ್ಯೋಗ ಸ್ಥಾನದಲ್ಲಿ ವಿಶ್ವಾಸ ವೃದ್ಧಿ. ಉದ್ಯಮ ಭರದಲ್ಲಿ ಮುನ್ನಡೆ.ಉತ್ಪನ್ನಗಳ ಗುಣಮಟ್ಟಕ್ಕೆ ಸಾಮಾಜಿಕರ ಶ್ಲಾಘನೆ. ಗೃಹೋದ್ಯಮ ಉತ್ಪನ್ನಗಳ ಜನಪ್ರಿಯತೆ ವೃದ್ಧಿ.

ಧನು: ಕುಟುಂಬದೊಳಗೆ ಸಾಮರಸ್ಯ ಸ್ಥಾಪನೆ. ಉದ್ಯೋಗ ಸ್ಥಾನದಲ್ಲಿ ಸಜ್ಜನರ ಸದ್ಭಾವನೆಗೆ ಪಾತ್ರರಾಗುವಿರಿ. ಸಣ್ಣ ಪ್ರಮಾಣದ ಉದ್ಯಮಗಳ ಅಭಿವೃದ್ಧಿ. ಕೃಷಿ ಭೂಮಿಯಲ್ಲಿ ಉತ್ತಮ ಬೆಳೆ. ಹೈನುಗಾರಿಕೆ, ಜೇನು ವ್ಯವಸಾಯ ಆರಂಭ.

ಮಕರ: ಉದ್ಯೋಗ ಸ್ಥಾನದಲ್ಲಿ ಬಹುಪಾಲು ನೆಮ್ಮದಿ. ಕೃಷ್ಯುತ್ಪನ್ನಗಳ ಮಾರಾಟದಿಂದ ಸಾಮಾನ್ಯ ಲಾಭ. ಹಣ್ಣು, ತರಕಾರಿ ಬೆಳೆಗಾರರಿಗೆ ಆದಾಯ ವೃದ್ಧಿ. ಮನೆಯಲ್ಲಿ ಎಲ್ಲರ ಆರೋಗ್ಯ ತೃಪ್ತಿಕರ.

ಕುಂಭ: ಸೇವಾಕಾರ್ಯಗಳಲ್ಲಿ ಕೈಜೋಡಿಸಲು ಮನೆಯಲ್ಲಿ ಸಹಕಾರ ಹೊಸ ಆದಾಯ ಮೂಲಗಳು ಗೋಚರ. ಸರಕಾರಿ ನೌಕರರಿಗೆ ಅನುಕೂಲ. ಕೆಲವು ಉದ್ಯಮಗಳಲ್ಲಿ ನಿರೀಕ್ಷೆ ಮೀರಿದ ಪ್ರಗತಿ. ಪ್ರಾಚೀನ ವಿದ್ಯೆಗಳನ್ನು ಕಲಿಯಲು ಆಸಕ್ತಿ.

ಮೀನ: ಧರ್ಮ ಮಾರ್ಗದಲ್ಲಿ ನಡೆಯಲು ಆಸಕ್ತಿ. ಉದ್ಯೋಗ ಸ್ಥಾನದಲ್ಲಿ ಅಜಾತಶತ್ರುತ್ವ. ಸರಕಾರಿ ಇಲಾಖೆ ನೌಕರರಿಂದ ಸಹಕಾರ. ಪಾಲುದಾರಿಕೆಯಲ್ಲಿ ಹೊಸ ವ್ಯವಹಾರ ಆರಂಭಿಸಲು ಚಿಂತನೆ. ದೇವಾಲಯದ ಅಭಿವೃದ್ಧಿ ಕಾರ್ಯ ಮುಂದುವರಿಕೆ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ.

Advertisement

Udayavani is now on Telegram. Click here to join our channel and stay updated with the latest news.

Next