Advertisement

Daily Horoscope; ಕ್ಷುಲ್ಲಕರ ಹಾವಳಿಗೆ ಅಂಜದಿರಿ. ಉದ್ಯೋಗ ಸ್ಥಾನದಲ್ಲಿ ಭರವಸೆಯ ಸನ್ನಿವೇಶ

07:24 AM Aug 14, 2024 | Team Udayavani |

ಮೇಷ: ಧ್ಯಾನ, ಲಘು ವ್ಯಾಯಾಮದಿಂದ ದೇಹಾರೋಗ್ಯ. ಉದ್ಯೋಗಸ್ಥರ ಪ್ರತಿಭೆಗೆ ಗೌರವ. ಉದ್ಯಮಗಳ ಬೆಳವಣಿಗೆಗೆ ಪೈಪೋಟಿಯ ಬಾಧೆ. ಆಪ್ತವರ್ಗದಿಂದ ಸಕಾಲಿಕ ನೆರವು. ಹಿರಿಯರ ಆರೋಗ್ಯದ ಕಡೆಗೆ ಲಕ್ಷ್ಯ ಇರಲಿ.

Advertisement

ವೃಷಭ: ಉದ್ಯೋಗದಲ್ಲಿ ಪದೋನ್ನತಿಗೆ ಪ್ರಯತ್ನ.ಸರಕಾರಿ ಅಧಿಕಾರಿಗಳಿಗೆ ಸ್ಥಾನ ಬದಲಾವಣೆ. ಖಾಸಗಿ ಉದ್ಯಮಗಳಲ್ಲಿ ಉತ್ಪಾದನೆ ಹೆಚ್ಚಳ. ದೇವತಾ ಸಾನ್ನಿಧ್ಯಕ್ಕೆ ಭೇಟಿ. ಹಿರಿಯರು, ಗೃಹಿಣಿಯರು ಮತ್ತು ಮಕ್ಕಳಿಗೆ ಉಲ್ಲಾ ಸದ ವಾತಾವರಣ.

ಮಿಥುನ: ಕ್ಷುಲ್ಲಕರ ಹಾವಳಿಗೆ ಅಂಜದಿರಿ. ಉದ್ಯೋಗ ಸ್ಥಾನದಲ್ಲಿ ಭರವಸೆಯ ಸನ್ನಿವೇಶ. ಸ್ವಂತ ಉದ್ಯಮದಲ್ಲಿ ಪ್ರಗತಿ ತೃಪ್ತಿಕರ. ಆಪ್ತರ ನೈತಿಕ ಬೆಂಬಲ ದಿಂದ ಧೈರ್ಯ ವರ್ಧನೆ. ವ್ಯವಹಾರ ನಿಮಿತ್ತ ಪೂರ್ವದ ಕಡೆಗೆ ಪ್ರಯಾಣ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ.

ಕರ್ಕಾಟಕ: ಉದ್ಯೋಗ ಸ್ಥಾನದಲ್ಲಿ ಕೊಂಚ ಕಿರಿಕಿರಿ, ಉದ್ಯಮದ ಉತ್ಪಾದನೆಗಳಲ್ಲಿ ವೈವಿಧ್ಯ ಪಾಲನೆಗೆ ಪ್ರಾಶಸ್ತ್ಯ ವಸ್ತ್ರ, ಸಿದ್ಧ ಉಡುಪು, ಆಭರಣ, ಶೋಕಿ ವಸ್ತುಗಳ ವ್ಯಾಪಾರ ವೃದ್ಧಿ. ದೀರ್ಘಾವಧಿ ಹೂಡಿಕೆಯಲ್ಲಿ ಲಾಭ. ಎಲ್ಲ ಮನೆಮಂದಿಗೂ ಉಲ್ಲಾಸದ ವಾತಾವರಣ.

ಸಿಂಹ: ನಿಧಾನವಾದರೂ ಸ್ಥಿರವಾದ ಪ್ರಗತಿ. ಉದ್ಯೋಗಸ್ಥರಿಗೆ ಹೆಚ್ಚು ದುಡಿಮೆಗೆ ಪ್ರೋತ್ಸಾಹ. ಬಾಯ್ದೆರೆ ಪ್ರಚಾರದಿಂದ ವ್ಯಾಪಾರ ವೃದ್ಧಿ. ಕಟ್ಟಡ ನಿರ್ಮಾಣ ಕಾಮಗಾರಿಗಳ ವೇಗ ವರ್ಧನೆ. ಮನೆಯಲ್ಲಿ ಮಂಗಲ ಕಾರ್ಯದ ಪ್ರಸ್ತಾವ.

Advertisement

ಕನ್ಯಾ: ಬಹುಪಾಲು ನೆಮ್ಮದಿಯ ದಿನ. ಉದ್ಯೋಗ ಸ್ಥಾನದಲ್ಲಿ ಅನುಕೂಲದ ವಾತಾವರಣ. ಉದ್ಯಮದಲ್ಲಿ ಶೀಘ್ರ ಪ್ರಗತಿ. ಉದ್ಯೋಗಾಸಕ್ತರನ್ನು ಅರಸಿ ಬರುವ ಅವಕಾಶಗಳು. ಮನೆಯಲ್ಲಿ ಎಲ್ಲರ ಆರೋಗ್ಯ ಉತ್ತಮ.

ತುಲಾ: ಉದ್ಯೋಗದಲ್ಲಿ ಯೋಗ್ಯತೆಗೆ ಸರಿಯಾದ ಮಾನ್ಯತೆ. ಅಕಸ್ಮಾತ್‌ ಧನಪ್ರಾಪ್ತಿ. ವಿತ್ತ ಸಂಸ್ಥೆಯ ನೆರವಿನಿಂದ ವ್ಯವಹಾರ ವಿಸ್ತರಣೆ.ಅವಿವಾಹಿತರಿಗೆ ವಿವಾಹ ಯೋಗ. ಕುಶಲಕರ್ಮಿಗಳಿಗೆ ಉದ್ಯೋಗಾವಕಾಶ. ಕೀರ್ತನೆ, ಭಜನೆ, ಸತ್ಸಂಗಗಳಲ್ಲಿ ಆಸಕ್ತಿ.

ವೃಶ್ಚಿಕ: ಉದ್ಯೋಗಸ್ಥರಿಗೆ ಸ್ವಯಂ ಯೋಗ್ಯತೆ ಯಿಂದ ಗೌರವ. ಉದ್ಯಮ ಭರದಲ್ಲಿ ಮುನ್ನಡೆ. ಉತ್ಪನ್ನಗಳ ಗುಣಮಟ್ಟಕ್ಕೆ ಸರ್ವತ್ರ ಶ್ಲಾಘನೆ. ಸಂಸಾರದಲ್ಲಿ ಪ್ರೀತಿ, ವಿಶ್ವಾಸ ವೃದ್ಧಿ. ಹತ್ತಿರದ ದೇವತಾ ಕ್ಷೇತ್ರಕ್ಕೆ ಭೇಟಿ.

ಧನು: ಸ್ವಲ್ಪ ಏರುಪೇರಾದ ವಾತಾವರಣ. ಆತ್ಮೀಯರಿಂದ ಸಕಾಲದಲ್ಲಿ ಸಹಾಯ. ಉದ್ಯೋಗ ಸ್ಥಾನದಲ್ಲಿ ಸದ್ಭಾವನೆಗೆ ಪಾತ್ರರಾಗುವಿರಿ. ಸಣ್ಣ ಪ್ರಮಾಣದ ಉದ್ಯಮಗಳ ಅಭಿವೃದ್ಧಿ. ಹೈನುಗಾರಿಕೆ, ಜೇನು ವ್ಯವಸಾಯಕ್ಕೆ ಅವಕಾಶ.

ಮಕರ: ಉದ್ಯೋಗ ಸ್ಥಾನದಲ್ಲಿ ನೆಮ್ಮದಿ. ಉದ್ಯಮಿಗಳಿಗೆ ಶುಭದಿನ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ. ಕೃಷ್ಯುತ್ಪನ್ನಗಳ ಮಾರಾಟದಿಂದ ಉತ್ತಮ ಲಾಭ. ಹಣ್ಣು, ತರಕಾರಿ ಬೆಳೆಗಾರರಿಗೆ ಆದಾಯ ವೃದ್ಧಿ.

ಕುಂಭ: ಹಲವು ಮೂಲಗಳಿಂದ ಆದಾಯ ವೃದ್ಧಿ. ಸರಕಾರಿ ನೌಕರರಿಗೆ ಕೆಲಸದ ಹೊರೆ. ಉದ್ಯಮಗಳಲ್ಲಿ ನಿರೀಕ್ಷೆ ಮೀರಿದ ಪ್ರಗತಿ. ನ್ಯಾಯಾಲಯ ವ್ಯವಹಾರದಲ್ಲಿ ಜಯ. ಮುದ್ರಣ ಸಾಮಗ್ರಿ ವಿತರಕರ ವ್ಯಾಪಾರ ವೃದ್ಧಿ. ಆರೋಗ್ಯ ಉತ್ತಮ.

ಮೀನ: ಗುರುಕೃಪೆಯಿಂದ ಕಡಿಮೆಯಾದ ಶನಿಮಹಾತ್ಮನ ಕಾಟ. ಉದ್ಯೋಗ ಸ್ಥಾನದಲ್ಲಿ ಅನುಕೂಲ. ಸರಕಾರಿ ಅಧಿಕಾರಿಗಳಿಗೆ ಜನಗೌರವ. ಬಂಧುವರ್ಗದಲ್ಲಿ ಶುಭಕಾರ್ಯ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ. ಹಿರಿಯರ, ಗೃಹಿಣಿಯರ ಆರೋಗ್ಯ ಉತ್ತಮ.

Advertisement

Udayavani is now on Telegram. Click here to join our channel and stay updated with the latest news.

Next