Advertisement

Daily horoscope; ಈ ರಾಶಿಯವರಿಗಿಂದು ಉದ್ಯೋಗ ಸ್ಥಾನದಲ್ಲಿ ವಿಶೇಷ ಗೌರವದ ಯೋಗ

07:20 AM Jul 12, 2024 | Team Udayavani |

12-07-2024

Advertisement

ಮೇಷ: ದಿನಕ್ಕೊಂದು ಹೊಸ ಜವಾಬ್ದಾರಿ ಬಂದರೂ ಧೃತಿಗೆಡದಿರಿ. ಹೆಚ್ಚುವರಿ ಆದಾಯದ ಮಾರ್ಗ ಗೋಚರ. ವಸ್ತ್ರೋದ್ಯಮ ಸಂಬಂಧಿ ವ್ಯವಹಾರದಲ್ಲಿ ಯಶಸ್ಸು. ವ್ಯವಹಾರ ಸಂಬಂಧ ಸಣ್ಣ ಪ್ರಯಾಣ.

ವೃಷಭ: ಮೌನೇನ ಕಲಹಂ ನಾಸ್ತಿ ಎಂಬುದು ನೆನಪಿರಲಿ. ಸಾಮಾಜಿಕ ಕಾರ್ಯಗಳಿಗೆ ಉದ್ಯಮಿಗಳ ಪ್ರೋತ್ಸಾಹ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ಬಿಡುವಿಲ್ಲದ ವ್ಯಾಪಾರ. ಕೇಟರಿಂಗ್‌ ವ್ಯವಹಾರಸ್ಥರಿಗೆ ಸಾಮಾನ್ಯ ಲಾಭ.

ಮಿಥುನ: ಉದ್ಯೋಗಸ್ಥರಿಗೆ ವಿಧೇಯತೆಯಿಂದ ಸಮಾಧಾನ. ಸ್ವಂತ ಉದ್ಯಮಕ್ಕೆ ಮೂಲ ಸೌಲಭ್ಯಗಳ ಸಮಸ್ಯೆ. ಪ್ರಾಚೀನ ವಿದ್ಯೆಗಳನ್ನು ಕಲಿಯುವ ಆಸಕ್ತಿ. ಹಿರಿಯರ ಮನೆಯಲ್ಲಿ ದೇವತಾ ಕಾರ್ಯ. ಸ್ವಾವಲಂಬಿ ಜೀವನದ ಕಡೆಗೆ ಒಲವು.

ಕರ್ಕಾಟಕ: ಹದವರಿತು ಮಾತಾಡಿದರೆ ಗೆಲುವು. ಉದ್ಯಮಗಳಿಗೆ ಕಾನೂನು ತೊಂದರೆ. ವ್ಯಾಪಾರಿಗಳಿಗೆ ಹಿತಶತ್ರುಗಳ ಬಾಧೆ. ಪಾಲುದಾರಿಕೆ ವ್ಯವಹಾರದಲ್ಲಿ ಲಾಭ. ಸಣ್ಣ ಪ್ರಮಾಣದ ಕೃಷಿಕಾರ್ಯದಲ್ಲಿ ಸಂತೃಪ್ತಿ.

Advertisement

ಸಿಂಹ: ಉದ್ಯೋಗ ಸ್ಥಾನದಲ್ಲಿ ವಿಶೇಷ ಗೌರವದ ಯೋಗ. ಉದ್ಯಮದ ಉತ್ಪನ್ನಗಳ ಜನಪ್ರಿಯತೆ ವೃದ್ಧಿ. ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ. ಅಪರಿಚಿತ ಕ್ಷೇತ್ರದಿಂದ ಪಾಲುದಾರಿಕೆ ಪ್ರಸ್ತಾವ ಬರುವ ಸಾಧ್ಯತೆ.

ಕನ್ಯಾ: ಊಟ ಬಲ್ಲವನಿಗೆ ರೋಗವಿಲ್ಲ ಎಂಬುದು ನೆನಪಿರಲಿ. ವಾಹನ ಉದ್ಯಮಿಗಳಿಗೆ ಆದಾಯ ವೃದ್ಧಿ. ಸಟ್ಟಾ ವ್ಯವಹಾರದಿಂದ ದೂರವಿರಿ. ಪಾಲುದಾರಿಕೆ ಉದ್ಯಮದಲ್ಲಿ ನಿಧಾನ ಪ್ರಗತಿ. ಹಿರಿಯರ ಆರೋಗ್ಯ ಸುಧಾರಣೆ.

ತುಲಾ: ಉದ್ಯೋಗದಲ್ಲಿ ವೇತನ ಏರಿಕೆಯ ಸಾಧ್ಯತೆ. ಹತ್ತಿರದ ತೀರ್ಥಕ್ಷೇತ್ರಕ್ಕೆ ಸಂದರ್ಶನ. ನೂತನ ವಾಹನ ಖರೀದಿ. ಮಹಿಳೆಯರ ನೇತೃತ್ವದ ಉದ್ಯಮಗಳಿಗೆ ಪ್ರಚಾರ. ಸಂಸಾರದಲ್ಲಿ ಪ್ರೀತಿ, ಸಾಮರಸ್ಯದ ವಾತಾವರಣ.

ವೃಶ್ಚಿಕ: ಉದ್ಯೋಗ ಸ್ಥಾನದಲ್ಲಿ ಉತ್ತೇಜಕ ಪರಿಸ್ಥಿತಿ. ಸರಕಾರಿ ಉದ್ಯೋಗಿಗಳಿಗೆ ಕಿರಿಯಂತ್ರೋಪಕರಣ ವ್ಯಾಪಾರಿಗಳಿಗೆ ಅದೃಷ್ಟ. ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ. ಮಕ್ಕಳ ಕಲಿಕೆ ಆಸಕ್ತಿ ಹೆಚ್ಚಿಸಲು ಪ್ರಯತ್ನ.

ಧನು: ಸಹೋದ್ಯೋಗಿಗಳಿಂದ ಪ್ರೀತಿ,ಗೌರವದ ವರ್ತನೆ. ನಿವೇಶನ ಖರೀದಿ ಪ್ರಯತ್ನಕ್ಕೆ ವಿಘ್ನ. ಉದ್ಯೋಗಾಸಕ್ತ ಶಿಕ್ಷಿತರಿಗೆ ಸದವಕಾಶ. ಗೃಹಿಣಿಯರ ಸ್ವ ಉದ್ಯೋಗ ಯೋಜನೆಗಳಿಗೆ ಲಾಭ. ವ್ಯವಹಾರದ ಸಂಬಂಧ ಪ್ರಮುಖ ವ್ಯಕ್ತಿಯ ಭೇಟಿ.

ಮಕರ: ಮಾತಿನಲ್ಲಿ ಮೃದುತ್ವ ಇರಲಿ. ವಸ್ತ್ರ, ಸಿದ್ಧ ಉಡುಪು, ಆಭರಣ, ಪಾದರಕ್ಷೆ, ಶೋಕಿ ಸಾಮಗ್ರಿ ವ್ಯಾಪಾರಿಗಳಿಗೆ ಹೇರಳ ಲಾಭ. ಉದ್ಯೋಗ ಅರಸುತ್ತಿರುವವರಿಗೆ ಅವಕಾಶಗಳು ಲಭ್ಯ. ಹಳೆಯ ಒಡನಾಡಿಗಳ ಸಂಪರ್ಕ. ಮಕ್ಕಳ ಕ್ಷೇಮ ಚಿಂತನೆ.

ಕುಂಭ: ಸ್ವಂತ ವ್ಯವಹಾರಸ್ಥರಿಗೆ ಸುದಿನ. ಗ್ರಾಹಕರ ಅಪೇಕ್ಷೆಗೆ ಸರಿಯಾಗಿ ಸ್ಪಂದನ. ಸಮಾಜ ಸೇವಾಕಾರ್ಯಗಳಿಗೆ ಮತ್ತಷ್ಟು ಅವಕಾಶಗಳು. ಟೈಲರಿಂಗ್‌ ಬಲ್ಲವರಿಗೆ ಉದ್ಯೋಗಾವಕಾಶ. ದೇವತಾ ಕಾರ್ಯದಲ್ಲಿ ಭಾಗಿ.

ಮೀನ: ಉದ್ಯೋಗ ಸ್ಥಾನದಲ್ಲಿ ವಿಶಿಷ್ಟವಾಗಿ ವಾತಾವರಣ. ಸರಕಾರಿ ಕಾರ್ಯಾಲಯಗಳಲ್ಲಿ ಸಕಾರಾತ್ಮಕ ಸ್ಪಂದನ. ಭವಿಷ್ಯದ ಯೋಜನೆಗಳ ಅನುಷ್ಠಾನಕ್ಕೆ ಕಾಲ ಸನ್ನಿಹಿತ. ಸಾಮಾಜಿಕ ಕ್ಷೇತ್ರದಲ್ಲಿ ಹೊಸ ಹೊಣೆಗಾರಿಕೆ. ವ್ಯವಹಾರ ಸಂಬಂಧ ವಿಮಾನ ಪ್ರಯಾಣ.

ಜಯತೀರ್ಥ ಆಚಾರ್ಯ

Advertisement

Udayavani is now on Telegram. Click here to join our channel and stay updated with the latest news.

Next