Advertisement

Daily Horoscope; ಅಪರೂಪದ ಗೆಳೆಯರ ಆಗಮನ. ವಿದೇಶದಿಂದ ಶುಭ ವಾರ್ತೆ

07:20 AM Jul 17, 2024 | Team Udayavani |

ಮೇಷ: ವರಿಷ್ಠರ ಗಮನ ಸೆಳೆಯಲು ಮೇಲಾಟ. ಕಟ್ಟಡ ನಿರ್ಮಾಣ ಗುತ್ತಿಗೆದಾರರಿಗೆ ಸಮಯ ದೊಂದಿಗೆ ಸೆಣಸಾಟ. ಮಳೆಯಿಂದ ಕೃಷಿಕರಿಗೆ ಸಮಾಧಾನ. ಆಪ್ತರಿಂದ ನಿರೀಕ್ಷಿತ ಸಹಾಯ
ಸಕಾಲದಲ್ಲಿ ಕೈಸೇರಲಿದೆ.

Advertisement

ವೃಷಭ: ಉದ್ಯೋಗ ಸ್ಥಾನದಲ್ಲಿ ಯಥಾಸ್ಥಿತಿ. ಸರಕಾರಿ ನೌಕರರಿಗೆ ಕೆಲಸದ ಒತ್ತಡ. ವಿದೇಶಗಳಲ್ಲಿ ನೌಕರಿಯಲ್ಲಿರುವ ಬಂಧುಗಳಿಂದ ಕರೆ. ಮುದ್ರಣ ಕ್ಷೇತ್ರದವರಿಗೆ ಕೆಲಸದ ಒತ್ತಡ. ಗೃಹಿಣಿಯರ ಸ್ವಾವಲಂಬನೆ ಉದ್ಯಮದಲ್ಲಿ ಪ್ರಗತಿ.

ಮಿಥುನ: ಉದ್ಯೋಗಸ್ಥರಿಗೆ ಹೆಚ್ಚುವರಿ ಜವಾಬ್ದಾರಿಗಳು. ಪತ್ರಕರ್ತರಿಗೆ ರಾಜಕಾರಣಿ ಗಳ
ಒತ್ತಡ. ಮನೆಯಲ್ಲಿ ದೇವತಾರ್ಚನೆ ಹಾಗೂ ಮಂಗಲ ಕಾರ್ಯದ ಸಿದ್ಧತೆ. ಹವಾಮಾನ ವೈಪರೀತ್ಯದಿಂದ ಆರೋಗ್ಯದ ಮೇಲೆ ಪರಿಣಾಮ.

ಕರ್ಕಾಟಕ: ಉದ್ಯೋಗ ಕ್ಷೇತ್ರದಲ್ಲಿ ಸ್ಥಿರ ವಾತಾವರಣ. ತಾಂತ್ರಿಕ ವಿಭಾಗಗಳಲ್ಲಿ ದುಡಿಯುವವರಿಗೆ ಕೆಲಸದ ಒತ್ತಡ. ಸ್ವಂತ ವ್ಯವಹಾರಸ್ಥರಿಗೆ ಸಮಯದೊಂದಿಗೆ ಸ್ಪರ್ಧೆ. ಮನೆಯಲ್ಲಿ ಅನುಕೂಲ ವಾತಾವರಣ.

ಸಿಂಹ: ಉತ್ಪಾದನೆಗಳಿಗೆ ಒಳ್ಳೆಯ ಬೇಡಿಕೆ. ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ.
ಸಮಾಜದಲ್ಲಿ ಸ್ಥಾನಮಾನ ವೃದ್ಧಿ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ಉತ್ತಮ ಲಾಭ. ಸಂಸಾರ ಸುಖ ಉತ್ತಮ. ಉದ್ಯೋಗಾಸಕ್ತರಿಗೆ ಶುಭ ಸೂಚನೆ.

Advertisement

ಕನ್ಯಾ: ಪ್ರತಿಕೂಲ ವಾತಾವರಣದಿಂದ ಕಾರ್ಯವಿಳಂಬ. ಸಹೋದ್ಯೋಗಿಯ ಸಹಾಯದಿಂದ
ಕಾರ್ಯ ಶೀಘ್ರ ಮುಕ್ತಾಯ. ಅಪರೂಪದ ಗೆಳೆಯರ ಆಗಮನ. ವಿದೇಶದಿಂದ ಶುಭ ವಾರ್ತೆ.
ಉದ್ಯೋಗಾಕಾಂಕ್ಷಿಗಳಿಗೆ ಅವಕಾಶಗಳು ಗೋಚರ.

ತುಲಾ: ಖಾಸಗಿ ರಂಗದ ನೌಕರರಿಗೆ ಹೊಸ ಅವಕಾಶಗಳು. ಸ್ವಂತ ವ್ಯವಹಾರಸ್ಥರಿಗೆ ಅನಿರೀಕ್ಷಿತ ಯಶಸ್ಸು. ಮಹಾಪುರುಷರ ದರ್ಶನ ಯೋಗ. ಮಕ್ಕಳ ಭವಿಷ್ಯದ ಚಿಂತನೆ. ಪರಿಸರ ಅಭಿ
ವೃದ್ಧಿಯಲ್ಲಿ ಆಸಕ್ತಿ. ಅಪರೂಪದ ಗೆಳೆಯರ ಭೇಟಿ.

ವೃಶ್ಚಿಕ: ಮನೆಯಲ್ಲಿ ಹಿತಕರ ವಾತಾವರಣ. ಉದ್ಯೋಗ, ವ್ಯವಹಾರ ಕ್ಷೇತ್ರಗಳಲ್ಲಿ ಅನು
ಕೂಲ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿದ ಲಾಭ. ಮರದ ಸಾಮಗ್ರಿಗಳ ನಿರ್ಮಾ ಪಕರಿಗೆ ಉತ್ತಮ ಬೇಡಿಕೆ.

ಧನು: ಅನಿರೀಕ್ಷಿತ ಧನಪ್ರಾಪ್ತಿ. ವ್ಯಾಪಾರ ವಿಸ್ತರಣೆಗೆ ಚಿಂತನೆ. ವಸ್ತ್ರ, ಆಭರಣ, ಕಟ್ಟಡ
ನಿರ್ಮಾಣ ಸಾಮಗ್ರಿಗಳ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿದ ಲಾಭ. ಕೈ ಕಸಬುದಾರರಿಗೆ ಕೈತುಂಬಾ
ಕೆಲಸ. ಮನೆಯಲ್ಲಿ ಅನುಕೂಲದ ವಾತಾವರಣ.

ಮಕರ: ಸಹೋದ್ಯೋಗಿಗಳಿಂದ ಹಿತಕರ ವರ್ತನೆ. ಗೃಹೋಪಯೋಗಿ ಸಾಮಗ್ರಿಗಳ
ಖರೀದಿ. ರೂಪದರ್ಶಿಗಳ ವ್ಯವಹಾರದಲ್ಲಿ ಹಿನ್ನಡೆ. ಲೇವಾದೇವಿ ವ್ಯವಹಾರಸ್ಥರಿಗೆ ನಷ್ಟ. ಫ್ಯಾಶನ್‌ ಡಿಸೈನಿಂಗ್‌ ಪರಿಣತರಿಗೆ ಉದ್ಯೋಗಾವಕಾಶ.

ಕುಂಭ: ಹೊಸ ಕ್ಷೇತ್ರಗಳಲ್ಲಿ ಕೆಲಸ ಮಾಡುವ ಆಸಕ್ತಿ. ಶಿಕ್ಷಣ ಕ್ಷೇತ್ರದಲ್ಲಿ ಉದ್ಯೋಗಸ್ಥರಿಗೆ
ಹೊಸ ಜವಾಬ್ದಾರಿಗಳು. ಸರಕಾರಿ ನೌಕರರಿಗೆ ಶುಭ ಸಮಾಚಾರ. ಹಿರಿಯ ಅಧಿಕಾರಿಗಳಿಗೆ ರಾಜಕಾರಣಿಗಳ ಕಾಟ. ಮುದ್ರಣ ಸಾಮಗ್ರಿ ವ್ಯಾಪಾರಿಗಳಿಗೆ ಲಾಭ ಮಧ್ಯಮ.

ಮೀನ: ನಿತ್ಯದ ವ್ಯವಹಾರಗಳು ಸುಗಮ. ಉದ್ಯೋಗಸ್ಥರಿಗೆ ನಿರಾತಂಕವಾದ ವಾತಾವರಣ. ಸರಕಾರಿ ಅಧಿಕಾರಿಗಳಿಂದ ಮತ್ತು ನೌಕರರಿಂದ ಉತ್ತಮ ಸ್ಪಂದನ.ಕೆಲವು ವರ್ಗಗಳ ವ್ಯವಹಾರಸ್ಥರಿಗೆ ಅನಿರೀಕ್ಷಿತ ಪ್ರಗತಿ. ವ್ಯವಹಾರ ನಿರ್ವಹಣೆಗೆ ಎಲ್ಲರ ಸಹಕಾರ. ಮಕ್ಕಳ
ಅಧ್ಯಯನಾಸಕ್ತಿ ವೃದ್ಧಿ.

Advertisement

Udayavani is now on Telegram. Click here to join our channel and stay updated with the latest news.

Next