Advertisement

Daily Horoscope; ಆರ್ಥಿಕ ಲಾಭ ನೀಡದ ಪದೋನ್ನತಿ, ಉದ್ಯಮಕ್ಕೆ ನವಚೈತನ್ಯ ನೀಡುವ ಪ್ರಕ್ರಿಯೆ

07:21 AM Jun 12, 2024 | Team Udayavani |

ಮೇಷ: ಉದ್ಯೋಗದಲ್ಲಿ ಜವಾಬ್ದಾರಿಗಳ ಬದಲಾವಣೆ. ಸರಕಾರಿ ಉದ್ಯೋಗಸ್ಥರಿಗೆ ಬದಲಾಗದ ಅನುಭವಸಂದರ್ಭಕ್ಕೆ ಸರಿಯಾಗಿ ಸ್ಪಂದನ. ಸಣ್ಣ ಉದ್ಯಮಿಗಳಿಗೆ ಸಾಧಾರಣ ಯಶಸ್ಸು. ಮಹಿಳಾ ಉದ್ಯಮಿಗಳಿಗೆ ಕೀರ್ತಿಲಾಭ.

Advertisement

ವೃಷಭ: ಉದ್ಯೋಗಸ್ಥರಿಗೆ ಖಾತೆ ಬದಲಾವಣೆ. ಖಾದಿಯ ಸಿದ್ಧ ಉಡುಪುಗಳು ಹಾಗೂ ವಸ್ತ್ರ ಉದ್ಯಮಕ್ಕೆ ಲಾಭ. ಕುಶಲಕರ್ಮಿಗಳಿಗೆ ಉದ್ಯೋಗಾವಕಾಶ. ಕುಟುಂಬದಲ್ಲಿ ಸಾಮರಸ್ಯ ವೃದ್ಧಿ.ಎಲ್ಲರಿಗೂ ಉತ್ತಮ ಆರೋಗ್ಯ ಭಾಗ್ಯ.
ಮಿಥುನ: ಹಳೆಯ ಯೋಜನೆಗಳನ್ನು ಕೈಬಿಡಲು ನಿರ್ಧಾರ. ತಾತ್ಕಾಲಿಕ ನೌಕರರ ಕೆಲಸ ಖಾಯಂ. ಅನವಶ್ಯ ವೈಮನಸ್ಯಕ್ಕೆ ಎಡೆಗೊಡ ಬೇಡಿ. ಯುವಜನರಿಗೆ ವೃತ್ತಿಪರ ಶಿಕ್ಷಣದ ವ್ಯವಸ್ಥೆ.ಸಂಸಾರದಲ್ಲಿ ಪ್ರೀತಿ, ವಿಶ್ವಾಸ ವೃದ್ಧಿ .

ಕರ್ಕಾಟಕ: ಎಣಿಸಿದ್ದಕ್ಕಿಂತ ಸುಲಭವಾಗಿ ಕಾರ್ಯಸಾಧನೆ. ಉದ್ಯೋಗಸ್ಥರ ಸ್ಥಿತಿಯಲ್ಲಿ ವ್ಯತ್ಯಾಸ ಇಲ್ಲ. ಉದ್ಯಮಗಳ ಬೆಳವಣಿಗೆಗೆ. ಕಾನೂನು ಅಡ್ಡಿ.ಸ್ವಾರ್ಥಿ ರಾಜಕಾರಣಿಳ ಮೇಲುಗೈ. ಮಹಿಳೆಯರ
ಸ್ವೋದ್ಯೋಗ ಯೋಜನೆ ಉತ್ಪನ್ನಗಳಿಗೆ ಕೀರ್ತಿ.

ಸಿಂಹ: ನಿರ್ವಹಿಸಲು ಕಷ್ಟವಾಗುವಷ್ಟು ವ್ಯವಹಾರಗಳು. ಉದ್ಯೋಗಸ್ಥರಿಗೆ ಆರ್ಥಿಕ ಲಾಭ ನೀಡದ ಪದೋನ್ನತಿ. ಉದ್ಯಮಕ್ಕೆ ನವಚೈತನ್ಯ ನೀಡುವ ಪ್ರಕ್ರಿಯೆ ಆರಂಭ. ಹೊಸ ಕ್ರಮಗಳಿಂದ ಉದ್ಯಮಕ್ಕೆ ಲಾಭ. ಎಲ್ಲರಿಗೂ ಉತ್ತಮ ಆರೋಗ್ಯ.

ಕನ್ಯಾ: ಉದ್ಯೋಗಸ್ಥರಿಗೆ ಪರಿಶ್ರಮದಿಂದ ಹೆಸರು ಸಂಸ್ಥೆಯ ಪ್ರಮುಖರಿಂದ ಪುರಸ್ಕಾರ. ಅವಿವಾಹಿತರಿಗೆ ಯೋಗ್ಯ ಸಂಗಾತಿ ಸಿಗುವ ಭರವಸೆ. ಮನೆಯಲ್ಲಿ ಎಲ್ಲರಿಗೂ ಉತ್ತಮ ಆರೋಗ್ಯ. ವ್ಯವಹಾರ ಸಂಬಂಧ ಉತ್ತರಕ್ಕೆ ಪ್ರಯಾಣ.
ತುಲಾ: ಶಾರೀರಿಕ ಬಾಧೆಯಿಂದ ಮುಕ್ತರಾಗಿ ದ್ದೀರಿ ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟದಿಂದ ಬಿಡುಗಡೆ ಉದ್ಯಮಿಗಳಿಗೆ ಎದುರಾಳಿಗಳ ಪೈಪೋಟಿ ಶಮನ. ಉದ್ಯೋಗ ಅರಸುವವರಿಗೆ ಉಪಯುಕ್ತ ಮಾಹಿತಿ ಲಭ್ಯ.

Advertisement

ವೃಶ್ಚಿಕ: ಉದ್ಯೋಗಸ್ಥರ ಹಿತಕ್ಕೆ ಹಾನಿಯಾಗದು. ಸರಕಾರಿ ಅಧಿಕಾರಿಗಳಿಗೆ ನಿಶ್ಚಿಂತೆ. ರಾಜಕಾರಣಿಗಳ ನಡುವೆ ನಿಲ್ಲದ ಕೆಸರೆರಚಾಟ. ವಸ್ತ್ರ, ಆಭರಣ, ಗೃಹೋಪಯೋಗಿ ಸಾಮಗ್ರಿಗಳ ಖರೀದಿ. ಸಂಸಾರದಲ್ಲಿ ಸಾಮರಸ್ಯ, ಒಗ್ಗಟ್ಟಿಗೆ ಹಾನಿಯಿಲ್ಲ.

ಧನು: ಪಟ್ಟು ಬಿಡದ ಪ್ರಯತ್ನದಿಂದ ಕಾರ್ಯ ವೈಖರಿ ಸುಧಾರಣೆ. ಉದ್ಯಮದ ವೈವಿಧ್ಯೀಕರಣ ಯೋಜನೆ ಸಫ‌ಲ. ಹಿರಿಯ ನಾಗರಿಕರಿಗೆ ಸರಕಾರಿ ನೆರವು ದೊರಕಿಸಲು ಸಹಾಯ. ಮಕ್ಕಳ ಪ್ರತಿಭೆ ವಿಕಸನಕ್ಕೆ ಪ್ರೋತ್ಸಾಹ.

ಮಕರ: ಉದ್ಯಮಿಗಳಿಗೆ ಹಠಾತ್‌ ನಷ್ಟವಾಗುವ ಭೀತಿ. ಉದ್ಯೋಗಸ್ಥರ ಕಾರ್ಯಸಾಮರ್ಥ್ಯಕ್ಕೆ ಹೊಸ ಸವಾಲುಗಳು.
ಹಿತಶತ್ರುಗಳ ಮಸಲತ್ತಿಗೆ ಸೋಲು. ಯಂತ್ರೋಪಕರಣ ಉದ್ಯಮಿಗಳಿಗೆ ಅನುಕೂಲದ ವಾತಾವರಣ.

ಕುಂಭ: ಸಪ್ತಾಹ ಮುಂದುವರಿಯುತ್ತಿದ್ದಂತೆ ಮುಂದೆ ಸಾಗುವ ಕೆಲಸ, ಕಾರ್ಯಗಳು. ಉದ್ಯೋಗಸ್ಥರಿಗೆ ಹಿತಕರವಾದ ವಾತಾವರಣ. ಸರಕಾರಿ ನೌಕರರಿಗೆ ನಿಶ್ಚಿಂತೆಯ ಅನುಭವ. ಷೇರು ಮಾರುಕಟ್ಟೆಯಲ್ಲಿ ಹೂಡಿಕೆಯಿಂದ ಲಾಭ. ಸಾಹಿತ್ಯ, ಸಂಗೀತ, ನೃತ್ಯಾದಿ ಲಲಿತ ಕಲೆಗಳಲ್ಲಿ ಆಸಕ್ತರಿಗೆ ಹರ್ಷ.

ಮೀನ: ಅಷ್ಟೊಂದು ಪೋ›ತ್ಸಾಹಕ ವಾತಾವರಣ ಕಾಣಿಸದಿದ್ದರೂ ಕಾರ್ಯದಲ್ಲಿ ಮುನ್ನಡೆ. ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ. ಸೇವಾ ರೂಪದ ಕಾರ್ಯಗಳು ಯಶಸ್ವಿ. ಸಮಾಜ ಸುಧಾರಣಾ
ಕಾರ್ಯಗಳಲ್ಲಿ ಸಕ್ರಿಯ ಪಾತ್ರ. ಮಕ್ಕಳಲ್ಲಿ ವಿದ್ಯಾಭ್ಯಾಸದ ಬಗ್ಗೆ ಆಸಕ್ತಿ. ಸಂಸಾರದಲ್ಲಿ ಪ್ರೀತಿ, ಸಾಮರಸ್ಯ ವೃದ್ಧಿ

Advertisement

Udayavani is now on Telegram. Click here to join our channel and stay updated with the latest news.

Next