Advertisement

Daily Horoscope; ಉದ್ಯೋಗ ಸ್ಥಾನದಲ್ಲಿ ಹಿತಶತ್ರು ಬಾಧೆ, ಪ್ರಯತ್ನದಲ್ಲಿ ಮುನ್ನಡೆ

07:22 AM Jun 26, 2024 | Team Udayavani |

ಮೇಷ: ಉದ್ಯೋಗ ಕ್ಷೇತ್ರದಲ್ಲಿ ಒಂದು ಬಗೆಯ ಸಮಾಧಾನ. ನಿರ್ಮಾಣ ಕಾರ್ಯಗಳಿಗೆ ಕಾರ್ಮಿಕರ ಸಮಸ್ಯೆ. ಕೃಷಿಕ ಸಮುದಾಯಕ್ಕೆ ಕಾರ್ಯೋತ್ಸಾಹ. ವಿದ್ಯಾರ್ಥಿ ವೃಂದಕ್ಕೆ ಅಧ್ಯಯನಕ್ಕೆ ಸ್ಫೂರ್ತಿ.ಮನೆಯಲ್ಲಿ ಎಲ್ಲರ ಆರೋಗ್ಯ ಉತ್ತಮ.

Advertisement

ವೃಷಭ: ಉದ್ಯೋಗ ಸ್ಥಾನದಲ್ಲಿ ಬದಲಾವಣೆಯ ಸೂಚನೆ. ಸರಕಾರಿ ನೌಕರರಿಗೆ ಕೆಲಸದ ಒತ್ತಡ. ವಿದೇಶಗಳಲ್ಲಿ ನೆಲಸಿರುವ ಮಕ್ಕಳಿಂದ ಕರೆ. ಗೃಹಿಣಿಯರ ಸ್ವಾವಲಂಬನೆ ಪ್ರಯತ್ನದಲ್ಲಿ ಮುನ್ನಡೆ. ಸಣ್ಣ ಪ್ರಯಾಣದ ಸಾಧ್ಯತೆ.

ಮಿಥುನ: ಸರಕಾರಿ ಉದ್ಯೋಗಸ್ಥರಿಗೆ ಕಿರಿಕಿರಿ. ಪತ್ರಕರ್ತರಿಗೆ ರಾಜಕಾರಣಿಗಳ ಒತ್ತಡ.ಕೃಷಿ ಸಂಬಂಧಿ ಉದ್ಯಮಗಳಿಗೆ ಅನುಕೂಲದ ದಿನ. ಮನೆಯಲ್ಲಿ ದೇವತಾರ್ಚನೆ ಹಾಗೂ ಮಂಗಲ ಕಾರ್ಯದ ಸಿದ್ಧತೆ. ಮಕ್ಕಳಿಗೆ ವ್ಯಾಸಂಗದಲ್ಲಿ ಆಸಕ್ತಿ.

ಕರ್ಕಾಟಕ: ಉದ್ಯೋಗ ಕ್ಷೇತ್ರದಲ್ಲಿ ಸ್ಥಿರ ವಾತಾವರಣ. ತಾಂತ್ರಿಕ ವಿಭಾಗಗಳಲ್ಲಿ ದುಡಿಯುವವರಿಗೆ ಕೆಲಸದ ಒತ್ತಡ. ಸ್ವಂತ ವ್ಯವಹಾರಸ್ಥರಿಗೆ ಸಮಯದೊಂದಿಗೆ ಸ್ಪರ್ಧೆ. ಪಾಲು ದಾರಿಕೆ ವ್ಯವಹಾರದಲ್ಲಿ ಮಧ್ಯಮ ಲಾಭ.

ಸಿಂಹ: ಉತ್ಪಾದನೆಗಳಿಗೆ ಒಳ್ಳೆಯ ಬೇಡಿಕೆ. ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ. ಸಮಾಜದಲ್ಲಿ ಸ್ಥಾನಮಾನ ವೃದ್ಧಿ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ಉತ್ತಮ ಲಾಭ. ಸಂಸಾರದಲ್ಲಿ ಪ್ರೀತಿ, ವಿಶ್ವಾಸ ವೃದ್ಧಿ.

Advertisement

ಕನ್ಯಾ: ನಿಯೋಜಿತ ಕಾರ್ಯ ಮುಗಿಸಲು ಸಹೋದ್ಯೋಗಿಯ ಸಹಾಯ. ಗುರು ಸಮಾನರ ಸಲಹೆಯಿಂದ ವಿಶ್ವಾಸಾರ್ಹತೆ ವೃದ್ಧಿ. ಉದ್ಯೋಗಾಕಾಂಕ್ಷಿಗಳಿಗೆ ಅವಕಾಶಗಳು ಗೋಚರ. ಪ್ರಾಪ್ತವಯಸ್ಕ ಪುತ್ರನ ವಿವಾಹ ಸಮಸ್ಯೆಗೆ ಪರಿಹಾರ.

ತುಲಾ: ಉದ್ಯೋಗ ಸ್ಥಾನದಲ್ಲಿ ಹಿತಶತ್ರು ಬಾಧೆ. ಸ್ವಂತ ವ್ಯವಹಾರಸ್ಥರಿಗೆ ಅನಿರೀಕ್ಷಿತ ಯಶಸ್ಸು. ಮಕ್ಕಳ ಭವಿಷ್ಯದ ಚಿಂತನೆ. ಪರಿಸರ ಅಭಿವೃದ್ಧಿಯಲ್ಲಿ ಆಸಕ್ತಿ. ಹಿರಿಯ ಗೃಹಿಣಿಯರ ಆರೋಗ್ಯ ವೃದ್ಧಿ.

ವೃಶ್ಚಿಕ: ಉದ್ಯೋಗ, ವ್ಯವಹಾರ ಕ್ಷೇತ್ರಗಳಲ್ಲಿ ಅನುಕೂಲ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿದ ಲಾಭ. ಪೀಠೊಪಕರಣ ನಿರ್ಮಾಪಕರಿಗೆ ಉತ್ತಮ ಬೇಡಿಕೆ. ಪಾಲುದಾರಿಕೆ ವ್ಯವಹಾರದಲ್ಲಿ ಲಾಭ.ಇಷ್ಟದೇವರ ದರ್ಶನದಿಂದ ಅಭೀಷ್ಟ ಪೂರ್ತಿ

ಧನು: ವ್ಯಾಪಾರ ವಿಸ್ತರಣೆಗೆ ಚಿಂತನೆ. ವಸ್ತ್ರ, ಆಭರಣ, ನಿರ್ಮಾಣ ಸಾಮಗ್ರಿಗಳ ವ್ಯಾಪಾರಿಗಳಿಗೆ ಲಾಭ. ಬೌದ್ಧಿಕ ಶ್ರಮಗಾರರಿಗೆ ಹಲವು ಬಗೆಯ ಒತ್ತಡ. ಮನೆಯಲ್ಲಿ ನೆಮ್ಮದಿಯ ವಾತಾವರಣ. ಹೊಸ ವ್ಯವಹಾರಕ್ಕಾಗಿ ಸಣ್ಣ ಪ್ರವಾಸ.

ಮಕರ: ಗೃಹೋಪಯೋಗಿ ಸಾಮಗ್ರಿಗಳ ಖರೀದಿ. ರೂಪದರ್ಶಿಗಳ ವ್ಯವಹಾರದಲ್ಲಿ ಹಿನ್ನಡೆ. ಲೇವಾದೇವಿ ವ್ಯವಹಾರಸ್ಥರಿಗೆ ನಷ್ಟ. ಫ್ಯಾಶನ್‌ ಡಿಸೈನಿಂಗ್‌ ಪರಿಣತರಿಗೆ ಉದ್ಯೋಗಾವಕಾಶ. ಕಿರಿಯರಿಗೆ ಯೋಗ್ಯ ಸಂಸ್ಕಾರ ನೀಡಲು ಚಿಂತನೆ.

ಕುಂಭ: ಸೇವಾ ಕಾರ್ಯಗಳ ವಿಸ್ತರಣೆಗೆ ಸಮಾನ ಮನಸ್ಕರ ಸಹಕಾರ. ಶಿಕ್ಷಣ ಕ್ಷೇತ್ರದಲ್ಲಿ ಉದ್ಯೋಗಸ್ಥರಿಗೆ ಹೊಸ ಜವಾಬ್ದಾರಿಗಳು. ಅಧ್ಯಾಪಕರಿಗೆ ಕೆಲಸದ ಹೊರೆ. ಹಿರಿಯ ಅಧಿಕಾರಿಗಳಿಗೆ ರಾಜಕಾರಣಿಗಳ ಕಾಟ.ಮುದ್ರಣ ಸಾಮಗ್ರಿ ವ್ಯಾಪಾರಿಗಳಿಗೆ ಲಾಭ.

ಮೀನ: ನಿತ್ಯದ ವ್ಯವಹಾರಗಳು ಸುಗಮ. ಉದ್ಯೋಗಸ್ಥರಿಗೆ ನಿರಾತಂಕವಾದ ವಾತಾವರಣ. ಸರಕಾರಿ ಇಲಾಖೆಗಳಿಂದ ಉತ್ತಮ ಸ್ಪಂದನ. ಕೆಲವು ಬಗೆಯ ವ್ಯವಹಾರಸ್ಥರಿಗೆ ಅನಿರೀಕ್ಷಿತ ಪ್ರಗತಿ. ಸಂಸಾರದ ಕೆಲಸಕ್ಕಾಗಿ ಪೂರ್ವ ದಿಕ್ಕಿನಲ್ಲಿ ಪ್ರಯಾಣ. ಕುಟುಂಬ ಕಲಹ ಸಂವಾದದಿಂದ ಪರಿಹಾರ.

Advertisement

Udayavani is now on Telegram. Click here to join our channel and stay updated with the latest news.

Next