Advertisement

Daily Horoscope: ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ ಸಂಭವ, ನಿರೀಕ್ಷೆಗೂ ಮೀರಿದ ಧನಾಗಮನ

07:16 AM May 30, 2023 | Team Udayavani |

ಮೇಷ: ಅನಿರೀಕ್ಷಿತ ಧನ ಸಂಪತ್ತು ವೃದ್ಧಿ. ಉದ್ಯೋಗ ವ್ಯವಹಾರದಲ್ಲಿ ಪರರಿಂದ ಸಂದರ್ಭಕ್ಕೆ ಸರಿಯಾಗಿ ಸಹಾಯ ಒದಗಿ ಬರುವುದು. ಆಸ್ತಿ ವಿಚಾರದಲ್ಲಿ ಮುನ್ನಡೆ. ಉತ್ತಮ ಜವಾಬ್ದಾರಿಯುತ ವಾಕ್‌ಚತುರತೆ. ಗುರುಹಿರಿಯರಿಂದ ಸಂತೋಷ.

Advertisement

ವೃಷಭ: ದೂರದ ಮಿತ್ರರ ಭೇಟಿ. ಕೆಲಸ ಕಾರ್ಯಗಳಲ್ಲಿ ನಿರೀಕ್ಷಿತ ಗುರಿ ಸಾಧನೆಯಿಂದ ನೆಮ್ಮದಿ. ಉತ್ತಮ ಧನಾರ್ಜನೆ. ಬಂಧುಮಿತ್ರರ ಸಹಕಾರ. ಆಸ್ತಿ ವಿಚಾರಗಳಲ್ಲಿ ಪರಿಶ್ರಮದಿಂದ ಮುನ್ನಡೆ. ಸಾಂಸಾರಿಕವಾಗಿ ಉತ್ತಮ ದಿನ.

ಮಿಥುನ: ಆರೋಗ್ಯ ಗಮನಿಸಿ. ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ ಸಂಭವ. ಸ್ವಚ್ಛತೆಗೆ ಆದ್ಯತೆ ನೀಡಿ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಪಾಲುದಾರಿಕಾ ವೃತ್ತಿಯಲ್ಲಿ ನಿರೀಕ್ಷಿತ ಧನಾಗಮ. ಮಕ್ಕಳ ನಿಮಿತ್ತ ಶ್ರಮ. ಸಾಂಸಾರಿಕ ಸುಖ ವೃದ್ಧಿ.

ರ್ಕ: ಸಣ್ಣ ಪ್ರಯಾಣ ಸಂಭವ. ನಿರೀಕ್ಷೆಗೂ ಮೀರಿದ ಧನಾಗಮನ. ಮನಃಸಂತೋಷ. ಉದ್ಯೋಗ ವ್ಯವಹಾರಗಳಲ್ಲಿ ಸ್ಥಾನ ಗೌರವ ವೃದ್ಧಿ. ಅಧಿಕಾರಯುತ ನಡೆಯಿಂದ ಸಫ‌ಲತೆ. ಬಂಧುಮಿತ್ರರ ಸಹಾಯ ಸಹಕಾರ ಲಭ್ಯ.

ಸಿಂಹ: ಆರೋಗ್ಯ ಸುಧಾರಣೆ. ಆಲೋಚಿಸಿದ ರೀತಿಯಲ್ಲಿ ಕಾರ್ಯ ವೃದ್ಧಿಯಾದುದರಿಂದ ಸಂತೋಷ. ಉದ್ಯೋಗ ವ್ಯವಹಾರಗಳಲ್ಲಿ ಜನಮನ್ನಣೆ. ಗೌರವ ಪ್ರಾಪ್ತಿ. ಮಾತಿನಲ್ಲಿ ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆ ಇರಲಿ. ನಷ್ಟ ಸಂಭವ.

Advertisement

ಕನ್ಯಾ: ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ. ನೇತೃತ್ವ. ಗುರುಹಿರಿಯರ ಸಲಹೆ ಸಹಕಾರ ಆಶೀರ್ವಾದ ಪ್ರಾಪ್ತಿ. ಧನಾರ್ಜನೆಗೆ ಸರಿಸಮನಾಗಿ ಧನವ್ಯಯ ತೋರೀತು. ಮಕ್ಕಳಿಂದ ತೃಪ್ತಿ. ಆಸ್ತಿ ವಿಚಾರದಲ್ಲಿ ಉತ್ತಮ ಬದಲಾವಣೆ ಸಂಭವ.

ತುಲಾ: ಹಠಮಾರಿತನ ಮಾಡದೇ ಕಾರ್ಯ ಪ್ರವೃತ್ತರಾಗಿ ಅನಾವಶ್ಯಕ ವಾಗÌದಕ್ಕೆ ಅವಕಾಶ ನೀಡದಿರಿ. ಬಂಧುಮಿತ್ರರಿಂದ ಸಹಕಾರ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ಉತ್ತಮ ಧನಾರ್ಜನೆ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ.

ವೃಶ್ಚಿಕ: ಭೂ ಸಂಬಂಧೀ ವ್ಯವಹಾರಗಳಲ್ಲಿ ಪ್ರಗತಿ. ಗೃಹದಲ್ಲಿ ಸಂತಸದ ವಾತಾವರಣ. ಉತ್ತಮ ಧನಾರ್ಜನೆ. ದೂರದ ವ್ಯವಹಾರಗಳಲ್ಲಿ ಪ್ರಗತಿ. ದಂಪತಿಗಳಲ್ಲಿ ಅನ್ಯೂನ್ಯತೆ. ಮಕ್ಕಳಿಂದ ಹೆಚ್ಚಿದ ಸುಖ. ಹಿರಿಯರ ಆರೋಗ್ಯದ ಬಗ್ಗೆ ನಿಗಾ ವಹಿಸಿ.

ಧನು: ಪಾಲುದಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ಆರೋಗ್ಯ ಉತ್ತಮ. ನಿರೀಕ್ಷಿತ ಧನ ಸಂಪತ್ತು ಲಭ್ಯ. ಆಸ್ತಿ ವಿಚಾರಗಳಲ್ಲಿ ಹೆಚ್ಚಿದ ಬದಲಾವಣೆ. ಗುರುಹಿರಿಯರೊಂದಿಗೆ ಚರ್ಚೆಗೆ ಅವಕಾಶ ನೀಡದಿರಿ. ಮಕ್ಕಳಿಂದ ಸಂತೋಷ.

ಮಕರ: ಆರೋಗ್ಯ ಗಮನಿಸಿ. ಉದ್ಯೋಗದಲ್ಲಿ ನಿರೀಕ್ಷೆಯಂತೆ ಪ್ರಗತಿ. ಯೋಜನೆಗಳು ಸಫ‌ಲತೆ. ದೂರದ ಧನಸಂಪತ್ತು ಪ್ರಾಪ್ತಿ. ಉತ್ತಮ ವಾಕ್‌ ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಮಕ್ಕಳ ನಿಮಿತ್ತ ಹೆಚ್ಚಿದ ನೆಮ್ಮದಿ.

ಕುಂಭ: ಅಧ್ಯಯನದಲ್ಲಿ ತತ್ಪರತೆ. ಮಕ್ಕಳಿಗೆ ಹೆಚ್ಚಿದ ಸೌಕರ್ಯ. ಉದ್ಯೋಗ ವ್ಯವಹಾರಗಳಲ್ಲಿ ಗಣನೀಯ ಉತ್ತಮ ಪ್ರಗತಿ. ಸ್ಥಿರ ಉತ್ತಮ ಆರೋಗ್ಯ. ಹೆಚ್ಚಿದ ವರಮಾನ. ಗುರುಹಿರಿಯರ ರಕ್ಷೆ ಲಭ್ಯ. ದೇವತಾ ಸ್ಥಳಗಳಿಗೆ ಸಂದರ್ಶನ.

ಮೀನ: ಸರಿಯಾದ ನಿಯಮ ಪಾಲಿಸುವುದರಿಂದ ಆರೋಗ್ಯ ವೃದ್ಧಿ. ದೀರ್ಘ‌ ಪ್ರಯಾಣ. ದೂರದ ವ್ಯವಹಾರಗಳಿಂದ ಅನಿರೀಕ್ಷಿತ ಧನಾಗಮ. ಖರ್ಚು ವೆಚ್ಚ ಮುಂಜಾಗ್ರತೆ ವಹಿಸಿ. ಮಕ್ಕಳಿಗೆ ಉತ್ತಮ ಪ್ರಗತಿದಾಯಕ ಬದಲಾವಣೆ. ವಿದ್ಯಾರ್ಥಿಗಳು ಅಧ್ಯಯನದ ಕಡೆ ಗಮನಹರಿಸುವುದು ಉತ್ತಮ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next