Advertisement

Daily Horoscope ಚಾರಿತ್ರ್ಯ ವಂತರ ಹೆಸರು ಕೆಡಿಸಲು ಸಂಚು

07:25 AM Oct 02, 2024 | Team Udayavani |

ಮೇಷ: ಉದ್ಯೋಗಿಗಳಿಗೆ ಯಥಾಸ್ಥಿತಿಯ ಅನುಭವ. ಉದ್ಯಮಿಗಳಿಗೆ ಕಡಿಮೆಯಾದ ಸಮಸ್ಯೆಗಳು.ವಸ್ತ್ರ, ಸಿದ್ಧ ಉಡುಪು, ಶೋಕಿಸಾಮಗ್ರಿ ವ್ಯಾಪಾರಿಗಳಿಗೆ ಅದೃಷ್ಟ. ಮಹಿಳಾ ಉದ್ಯಮಿಗಳಿಗೆ ಸಾಮಾನ್ಯ ಯಶಸ್ಸು. ಗೃಹೋತ್ಪನ್ನಗಳಿಗೆ ಅಧಿಕ ಬೇಡಿಕೆ.

Advertisement

ವೃಷಭ: ಹೊಸ ವಿಭಾಗಗಳಲ್ಲಿ ಪ್ರವೇಶ. ಖಾದಿಯ ಸಿದ್ಧ ಉಡುಪುಗಳು ಹಾಗೂ ವಸ್ತ್ರ ವ್ಯಾಪಾರಿಗಳಿಗೆ ಹೇರಳ ಲಾಭ. ಶಿಕ್ಷಿತ ವೃತ್ತಿಪರಿಣತರಿಗೆ ಉದ್ಯೋಗಾವಕಾಶ. ಲೇವಾದೇವಿ ವ್ಯವಹಾರದಲ್ಲಿ ನಷ್ಟ. ಯಂತ್ರೋಪಕರಣ ವ್ಯಾಪಾರಿಗಳಿಗೆ ಅನುಕೂಲ.

ಮಿಥುನ: ಯೋಜನೆಗಳ ಶೀಘ್ರ ಅನುಷ್ಠಾನಕ್ಕೆ ಪ್ರಯತ್ನ.ಉದ್ಯೋಗಸ್ಥರ ಅತಂತ್ರ ಸ್ಥಿತಿ ನಿವಾರಣೆ. ಅಪಾತ್ರರಿಗೆ ಸಲಹೆ ನೀಡಿ ಅವಮಾನ. ಕೆಲವು ವರ್ಗದ ವ್ಯಾಪಾರಿಗಳಿಗೆ ಹೇರಳ ಲಾಭ. ಹಳೆಯ ಒಡನಾಡಿಗಳ ಭೇಟಿ ಸಂಭವ.

ಕರ್ಕಾಟಕ: ಉದ್ಯೋಗಸ್ಥರಿಗೆ ಸೌಲಭ್ಯಗಳ ಹೆಚ್ಚಳ. ಉದ್ಯಮಗಳಿಗೆ ಸರಕಾರಿ ಸಬ್ಸಿಡಿ ಕೈಸೇರಲು ವಿಳಂಬ. ಸರಕಾರಿ ಸೌಲಭ್ಯಗಳ ಸುಧಾರಣೆಗೆ ರಾಜಕಾರಣಿಗಳ ನಿರ್ಲಕ್ಷ್ಯ . ಚಾರಿತ್ರ್ಯ ವಂತರ ಹೆಸರು ಕೆಡಿಸಲು ಸಂಚು.

ಸಿಂಹ: ಉದ್ಯೋಗಸ್ಥರಿಗೆ ಘಟಕದ ನೇತೃತ್ವ ಲಭ್ಯ. ಉದ್ಯಮಕ್ಕೆ ಹೊಸ ರೂಪ ಪ್ರಾಪ್ತಿ. ಕುಟುಂಬದ ಮನೆಯಲ್ಲಿ ಪಿತೃಕಾರ್ಯ ಸಂಪನ್ನ. ಹಿರಿಯರು, ಗೃಹಿಣಿಯರು, ಮಕ್ಕಳು ಎಲ್ಲರಿಗೂ ಉತ್ತಮ ಆರೋಗ್ಯ.

Advertisement

ಕನ್ಯಾ: ಹೊಸ ವ್ಯವಹಾರದಲ್ಲಿ ಮುನ್ನಡೆ. ಹಿರಿಯರ ಆಸ್ತಿಯಲ್ಲಿ ಕೃಷಿಯ ಕಡೆಗೆ ಗಮನ. ಪಾಲುದಾರಿಕೆ ಉದ್ಯಮ ಮುನ್ನಡೆ. ಅವಿವಾಹಿತರಿಗೆ ಯೋಗ್ಯ ಸಂಗಾತಿ ಸಿಗುವ ಭರವಸೆ. ಕುಟುಂಬದ ಹಿರಿಯ ಹಿತೈಷಿ ಆಗಮನ.

ತುಲಾ: ಹಿತಶತ್ರುಗಳ ಕಾಟದಿಂದ ಮುಕ್ತಿ. ಪೈಪೋಟಿ ಎದುರಿಸಲು ಉದ್ಯಮಿಗಳ ಸಿದ್ಧತೆ. ಉದ್ಯೋಗಕ್ಕಾಗಿ ಕಾಯುತ್ತಿರುವವರಿಗೆ ಮಾರ್ಗದರ್ಶನ ಮಾಡುವ ಅವಕಾಶ. ಲೇವಾದೇವಿ ವ್ಯವಹಾರದಿಂದ ದೂರವಿರಿ. ಸಾರ್ವಜನಿಕ ವ್ಯಕ್ತಿಗಳಿಗೆ ಮುಖಭಂಗ.

ವೃಶ್ಚಿಕ: ಸರ್ವವಿಧದಲ್ಲೂ ಉತ್ತಮವಾಗಿರುವ ಪರಿಸ್ಥಿತಿ. ಉದ್ಯೋಗಸ್ಥರ ಸ್ಥಾನ ಗೌರವ ಅಬಾಧಿತ. ಸರಕಾರಿ ಅಧಿಕಾರಿಗಳಿಗೆ ಕೆಲಸದ ಹೊರೆಯ ಚಿಂತೆ. ರಾಜಕಾರಣಿಗಳಿಗೆ ಕೊಂಚ ಇಕ್ಕಟ್ಟಿನ ಪರಿಸ್ಥಿತಿ. ಗೃಹೋಪಯೋಗಿ ಸಾಮಗ್ರಿಗಳ ಖರೀದಿ.

ಧನು: ಉದ್ಯೋಗ ಘಟಕದ ಕಾರ್ಯ ಸುಧಾರಣೆಯ ಹೊಣೆಗಾರಿಕೆ. ಉದ್ಯಮದ ವೈವಿಧ್ಯೀಕರಣ ಕ್ರಮ ಮುನ್ನಡೆ. ಹಿರಿಯ ನಾಗರಿಕರಿಗೆ ಸರಕಾರಿ ನೆರವು ಸಿಗದಂತೆ ಅಡ್ಡಗಾಲು. ಮಕ್ಕಳ ಅಧ್ಯಯನಾಸಕ್ತಿ ಬೆಳೆಸಲು ಪ್ರಯತ್ನ.

ಮಕರ: ಕಾರ್ಯಸಾಮರ್ಥ್ಯ ಪರೀಕ್ಷೆಗಳಲ್ಲಿ ವಿಜಯ. ಉದ್ಯಮಿಗಳಿಗೆ ಹಠಾತ್‌ನಷ್ಟವಾಗುವ ಸಾಧ್ಯತೆ. ಬಂಧುಗಳ ಭೇಟಿಗೆ ಪೂರ್ವಕ್ಕೆ
ಪ್ರಯಾಣ. ಹಿರಿಯರ, ಮಕ್ಕಳ ಆರೋಗ್ಯ ಸುಧಾರಣೆ. ದೀರ್ಘಾವಧಿ ಹೂಡಿಕೆಯಲ್ಲಿ ಲಾಭ.

ಕುಂಭ: ಕೆಲಸ, ಕಾರ್ಯಗಳು ಸುಗಮ. ಉದ್ಯೋಗಸ್ಥರಿಗೆ ಯಥಾರೀತಿಯ ಅನುಭವ. ಸರಕಾರಿ ನೌಕರರಿಗೆ ಅಧಿಕ ಕೆಲಸದ ಚಿಂತೆ. ಶೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆಯಿಂದ ಲಾಭ. ಸಂಗೀತ, ನೃತ್ಯ ಕಲೆಗಳನ್ನು ಅಭ್ಯಾಸ ಮಾಡುವವರಿಗೆ ಸಂತಸ.

ಮೀನ: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ. ಸೇವಾ ರೂಪದ ಕಾರ್ಯಗಳು ಇಲಾಖೆಯವರ ಸಹಕಾರದಿಂದ ಯಶಸ್ವಿ. ಪುನರಾರಂಭಗೊಂಡ ಉದ್ಯಮ ಮುನ್ನಡೆ. ದೇವತಾ ಸಾನ್ನಿಧ್ಯಕ್ಕೆ ಭೇಟಿ. ಹಿರಿಯರ ಆತ್ಮಗಳಿಗೆ ಗೌರವ ಸಮರ್ಪಣೆ

Advertisement

Udayavani is now on Telegram. Click here to join our channel and stay updated with the latest news.

Next