Advertisement

Daily Horoscope: ಈ ರಾಶಿಯ ಅವಿವಾಹಿತರಿಗೆ ಇಂದು ಯೋಗ್ಯ ಸಂಗಾತಿ ಸಿಗುವ ಭರವಸೆ

07:18 AM Apr 11, 2024 | Team Udayavani |

11-04-2024

Advertisement

ಮೇಷ: ಉದ್ಯೋಗ ಸ್ಥಾನದಲ್ಲಿ ಯಥಾಸ್ಥಿತಿ ಮುಂದುವರಿಕೆ. ಹೊಟೇಲ್‌ ಉದ್ಯಮಿಗಳಿಗೆ ಕಡಿಮೆಯಾದ ಸಮಸ್ಯೆಗಳು. ವಸ್ತ್ರ, ಸಿದ್ಧ ಉಡುಪು, ಶೋಕಿಸಾಮಗ್ರಿ ವ್ಯಾಪಾರಿಗಳಿಗೆ ಅದೃಷ್ಟ. ಮಹಿಳಾ ಉದ್ಯಮಿಗಳಿಗೆ ಯಶಸ್ಸು.

ವೃಷಭ: ಉದ್ಯೋಗಸ್ಥರಿಗೆ ಹೊಸ ವಿಭಾಗಗಳಲ್ಲಿ ಪ್ರವೇಶ. ಖಾದಿಯ ಸಿದ್ಧ ಉಡುಪುಗಳು ಹಾಗೂ ವಸ್ತ್ರ ವ್ಯಾಪಾರಿಗಳಿಗೆ ಹೇರಳ ಲಾಭ. ಶಿಕ್ಷಿತ ವೃತ್ತಿಪರಿಣತರಿಗೆ ಉದ್ಯೋಗಾವಕಾಶ.

ಮಿಥುನ: ಯೋಜನೆಗಳ ಅನುಷ್ಠಾನವನ್ನು ತ್ವರಿತಗೊಳಿಸುವ ಕ್ರಮ ಆರಂಭ. ಉದ್ಯೋಗಸ್ಥರ ಅತಂತ್ರ ಸ್ಥಿತಿ ನಿವಾರಣೆ. ಅಪಾತ್ರರಿಗೆ ಸಲಹೆ ನೀಡುವುದರಿಂದ ಅವಮಾನ. ಅಸಹಾಯಕರಿಗೆ ಸಹಾಯ ಮಾಡುವ ಅವಕಾಶ.

ಕರ್ಕಾಟಕ: ಉದ್ಯೋಗಸ್ಥರಿಗೆ ಸೌಲಭ್ಯಗಳ ಹೆಚ್ಚಳ. ಉದ್ಯಮಗಳಿಗೆ ಸರಕಾರಿ ಸಬ್ಸಿಡಿ ಕೈಸೇರಲು ವಿಳಂಬ. ಸರಕಾರಿ ಸೌಲಭ್ಯಗಳ ಸುಧಾರಣೆಗೆ ರಾಜಕಾರಣಿಗಳ ನಿರ್ಲಕ್ಷ್ಯ. ಚಾರಿತ್ರ್ಯವಂತರ ಹೆಸರು ಕೆಡಿಸಲು ಸಂಚು.

Advertisement

ಸಿಂಹ: ಉದ್ಯೋಗಸ್ಥರಿಗೆ ಘಟಕದ ನೇತೃತ್ವ ಲಭ್ಯ. ಉದ್ಯಮಕ್ಕೆ ಹೊಸ ರೂಪ ನೀಡುವ ಪ್ರಕ್ರಿಯೆ ಆರಂಭ. ಕುಟುಂಬದ ಮನೆಯಲ್ಲಿ ದೇವತಾರ್ಚನೆ. ಹಿರಿಯರು, ಗೃಹಿಣಿಯರು, ಮಕ್ಕಳು ಎಲ್ಲರಿಗೂ ಉತ್ತಮ ಆರೋಗ್ಯ.

ಕನ್ಯಾ: ಹೊಸ ವ್ಯವಹಾರದಲ್ಲಿ ಮುನ್ನಡೆ. ಹಿರಿಯರ ಆಸ್ತಿಯಲ್ಲಿ ಕೃಷಿಯ ಕಡೆಗೆ ಗಮನ. ಪಾಲುದಾರಿಕೆಯಲ್ಲಿ ಸಣ್ಣ ಉದ್ಯಮ ಆರಂಭಕ್ಕೆ ಚಿಂತನೆ. ಅವಿವಾಹಿತರಿಗೆ ಯೋಗ್ಯ ಸಂಗಾತಿ ಸಿಗುವ ಭರವಸೆ.

ತುಲಾ: ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟದಿಂದ ಮುಕ್ತಿ. ಪೈಪೋಟಿ ಎದುರಿ ಸಲು ಉದ್ಯಮಿಗಳ ಸಿದ್ಧತೆ.ಉದ್ಯೋಗಕ್ಕಾಗಿ ಕಾಯುತ್ತಿರುವವರಿಗೆ ಮಾರ್ಗದರ್ಶನ ಮಾಡುವ ಅವಕಾಶ. ಲೇವಾದೇವಿ ವ್ಯವಹಾರದಿಂದ ದೂರವಿರಿ.

ವೃಶ್ಚಿಕ: ಸರ್ವವಿಧದಲ್ಲೂ ಉತ್ತಮವಾಗಿರುವ ಪರಿಸ್ಥಿತಿ.ಉದ್ಯೋಗಸ್ಥರ ಸ್ಥಾನ ಗೌರವ ಅಬಾಧಿತ. ಸರಕಾರಿ ಅಧಿಕಾರಿಗಳಿಗೆ ಕೆಲಸದ ಹೊರೆಯ ಚಿಂತೆ. ರಾಜಕಾರಣಿಗಳಿಗೆ ಕೊಂಚ ಇಕ್ಕಟ್ಟಿನ ಪರಿಸ್ಥಿತಿ. ಮಕ್ಕಳ ಅಧ್ಯಯನಾಸಕ್ತಿ ಬೆಳೆಸಲು ಪ್ರಯತ್ನ.

ಧನು: ಉದ್ಯೋಗಸ್ಥರಿಗೆ ಘಟಕದ ಕಾರ್ಯ ಸುಧಾರಣೆಯ ಹೊಣೆಗಾರಿಕೆ. ಉದ್ಯಮದ ವೈವಿಧ್ಯೀಕರಣ ಯೋಜನೆ ಕಾರ್ಯಾರಂಭ. ಹಿರಿಯ ನಾಗರಿಕರಿಗೆ ಸರಕಾರಿ ನೆರವು ಸಿಗದಂತೆ ಅಡ್ಡಗಾಲು.

ಮಕರ: ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು. ಉದ್ಯೋಗಸ್ಥರ ಕಾರ್ಯಸಾಮರ್ಥ್ಯ ಪರೀಕ್ಷೆಗಳಲ್ಲಿ ವಿಜಯ. ಉದ್ಯಮಿಗಳಿಗೆ ಹಠಾತ್‌ ನಷ್ಟವಾಗುವ ಭೀತಿ. ಬಂಧುಗಳ ಭೇಟಿಗೆ ಪೂರ್ವಕ್ಕೆ ಪ್ರಯಾಣ.

ಕುಂಭ: ಕೆಲಸ, ಕಾರ್ಯಗಳು ಸುಗಮ. ಉದ್ಯೋಗಸ್ಥರಿಗೆ ಯಥಾ ರೀತಿಯ ಅನುಭವ. ಸರಕಾರಿ ನೌಕರರಿಗೆ ಅಧಿಕ ಕೆಲಸದ ಚಿಂತೆ. ಷೇರು ಮಾರುಕಟ್ಟೆಯಲ್ಲಿ ಹೂಡಿಕೆಯಿಂದ ಲಾಭ. ವ್ಯವಹಾರದ ನಿಮಿತ್ತ ಸಣ್ಣ ಪ್ರಯಾಣ ಸಂಭವ.

ಮೀನ: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ. ಸೇವಾ ರೂಪದ ಕಾರ್ಯಗಳು ಇಲಾಖೆಯವರ ಸಹಕಾರದಿಂದ ಯಶಸ್ವಿ. ಪುನರಾರಂಭಗೊಂಡ ಉದ್ಯಮ ಮುನ್ನಡೆ. ದೇವತಾ ಸಾನ್ನಿಧ್ಯಕ್ಕೆ ಭೇಟಿ. ಪರಿಸರ ಸುಧಾರಣೆಗೆ ಸಂಬಂಧಪಟ್ಟ ಸಾಮೂಹಿಕ ಕಾರ್ಯಗಳಲ್ಲಿ ಆಸಕ್ತಿ.

ಜಯತೀರ್ಥ ಆಚಾರ್ಯ

Advertisement

Udayavani is now on Telegram. Click here to join our channel and stay updated with the latest news.

Next