Advertisement

ಗ್ರಾಹಕರ ಗಮನಕ್ಕೆ; ಶುಕ್ರವಾರ 5 ಜಿಲ್ಲೆಗಳಲ್ಲಿ ಪೆಟ್ರೋಲ್ ಬಂಕ್ ಬಂದ್

05:42 PM Jun 15, 2017 | |

ಬೆಂಗಳೂರು: ನಾಳೆಯಿಂದ ಪ್ರತಿನಿತ್ಯವೂ ಪೆಟ್ರೋಲ್, ಡೀಸೆಲ್ ದರವನ್ನು ಪರಿಷ್ಕರಣೆ ಮಾಡಬೇಕೆಂಬ ಕೇಂದ್ರ ಸರ್ಕಾರದ ನಿರ್ಧಾರವನ್ನು ಖಂಡಿಸಿ ನಾಳೆ ಮೈಸೂರು ವಿಭಾಗದ ಪೆಟ್ರೋಲ್ ಬಂಕ್ ಬಂದ್ ಗೆ ಕರೆ ನೀಡಲಾಗಿದೆ. ಆದರೆ ಬೆಂಗಳೂರಿನಲ್ಲಿ ಪೆಟ್ರೋಲ್, ಡೀಸೆಲ್ ಬಂಕ್ ಬಂದ್ ಇಲ್ಲ ಎಂದು ಮೂಲಗಳು ತಿಳಿಸಿವೆ.

Advertisement

ಪ್ರತಿನಿತ್ಯ ಪೆಟ್ರೋಲ್, ಡೀಸೆಲ್ ದರ ಪರಿಷ್ಕರಣೆ ಮಾಡಬೇಕೆಂಬ ಕೇಂದ್ರದ ನಿಯಮ ವಿರೋಧಿಸಿ ಶುಕ್ರವಾರ ಮೈಸೂರು ವಿಭಾಗದ ಹಾಸನ, ಕೊಡಗು, ಮಂಡ್ಯ, ಚಾಮರಾಜನಗರ, ರಾಮನಗರದಲ್ಲಿರುವ ಪೆಟ್ರೋಲ್ ಬಂಕ್ ಕಾರ್ಯಾಚರಿಸುವುದಿಲ್ಲ ಎಂದು ಮೈಸೂರು ವಿಭಾಗದ ಪೆಟ್ರೋಲ್ ಬಂಕ್ ಮಾಲೀಕರ ಸಂಘದ ಅಧ್ಯಕ್ಷರು ಮಾಧ್ಯಮಕ್ಕೆ ತಿಳಿಸಿದ್ದಾರೆ.

ಇಂದು ರಾತ್ರಿ ಮಧ್ಯರಾತ್ರಿ 12ಗಂಟೆಯಿಂದ ಶುಕ್ರವಾರ ಮಧ್ಯರಾತ್ರಿ 12ಗಂಟೆವರೆಗೆ ಪೆಟ್ರೋಲ್ ಬಂಕ್ ಬಂದ್ ಇರಲಿದೆ ಎಂದು ಮೂಲಗಳು ಹೇಳಿವೆ. ಆದರೆ ಬೆಂಗಳೂರು ಸೇರಿದಂತೆ ರಾಜ್ಯದ ಬೇರೆ ಕಡೆ ಬಂದ್ ಇಲ್ಲ ಎಂದು ಬೆಂಗಳೂರು ಪೆಟ್ರೋಲ್ ಮಾಲೀಕರ ಸಂಘದ ಅಧ್ಯಕ್ಷ ಲೋಕೇಶ್ ಪ್ರತಿಕ್ರಿಯೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next