Advertisement

ಈ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕೆಲಸ ಮಾಡಲು ಅಸಾಧ್ಯ: ದ.ಕ ಜಿಲ್ಲಾಧಿಕಾರಿ ರಾಜೀನಾಮೆ

09:59 AM Sep 07, 2019 | keerthan |

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ಶುಕ್ರವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

Advertisement

ಪ್ರಜಾಪ್ರಭುತ್ವದ ವ್ಯವಸ್ಥೆಗಳು ಮೂಲಭೂತ ಒತ್ತಡಗಳಿಂದ ರಾಜಿಯಾಗಿ ಕೆಲಸ ಮಾಡಬೇಕಾದ ಈ ಪರಿಸ್ಥಿತಿಇದೆ. ಸಿದ್ದಾಂತಕ್ಕೆ ಎದುರಾಗಿ ಹೋಗುವುದು ಕಷ್ಟ. ಮುಂದಿನ ದಿನಗಳು ದೇಶಕ್ಕೆ ಬಹಳಷ್ಟು ಸವಾಲುಗಳು ಎದುರಾಗಲಿದೆ.  ಈ ಪರಿಸ್ಥಿತಿಯಲ್ಲಿ ಸಾರ್ವಜನಿಕ ಸೇವೆಯಲ್ಲಿ ಮುಂದುವರಿಯುವುದು ಸರಿಯಲ್ಲ ಎಂದು ಅನಿಸಿದ್ದರಿಂದ ನಾನು ರಾಜೀನಾಮೆ ನೀಡುತ್ತಿರುವೆ ಎಂದು ಸಸಿಕಾಂತ್ ಸೆಂಥಿಲ್ ಬರೆದುಕೊಂಡಿದ್ದಾರೆ.

ಅಕ್ಟೋಬರ್ 2017 ನಿಂದ ಸಸಿಕಾಂತ್ ಸೆಂಥಿಲ್ ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಾಗಿದ್ದರು. ಜಿಲ್ಲೆಯಲ್ಲಿ ಕಳೆದ ವರ್ಷದ ಭೀಕರ ಮಳೆ, ಈ ವರ್ಷದ ಪ್ರವಾಹ, ಅತಿವೃಷ್ಠಿ, ಡೆಂಗ್ಯು, ಮರಳು ಮತ್ತಿತರ ಸಮಸ್ಯೆಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದರು.

2009 ರ ಬ್ಯಾಚ್‌ ನ ಐಎಎಸ್‌ ಅಧಿಕಾರಿಯಾದ ಸಸಿಕಾಂತ್‌ ಸೆಂಥಿಲ್‌, ಎಲೆಕ್ಟ್ರಿಕಲ್‌ ಮತ್ತು ಕಮ್ಯುನಿಕೇಶನ್‌ ವಿಷಯದಲ್ಲಿ ಇಂಜಿನಿಯರಿಂಗ್‌ ಪದವಿ ಪಡೆದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next