Advertisement

ಕೇರಳದಿಂದ ದಕ್ಷಿಣ ಕನ್ನಡಕ್ಕೆ ಬರುವವರಿಗೆ ಪಾಸ್‌ ಅಗತ್ಯ: ಜಿಲ್ಲಾಧಿಕಾರಿ

12:06 PM Aug 17, 2020 | sudhir |

ಮಂಗಳೂರು: ದೈನಂದಿನ ಚಟುವಟಿಕೆಗಳಿಗೆ ಕೇರಳದಿಂದ ದ.ಕ. ಜಿಲ್ಲೆಗೆ ಪ್ರತೀ ದಿನ ಸಂಚರಿಸುವ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಜಿಲ್ಲೆಯ ಗಡಿಗಳನ್ನು ತೆರವುಗೊಳಿಸಲು ಜಿಲ್ಲಾಡಳಿತ ನಿರ್ಧರಿಸಿದ್ದು, ಆಗಮಿಸುವವರು ಕಡ್ಡಾಯವಾಗಿ ಪಾಸ್‌ ಪಡೆಯುವಂತೆ ಸೂಚಿಸಲಾಗಿದೆ.

Advertisement

ದ.ಕ. ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಅವರು ಈ ಸಂಬಂಧ ಆದೇಶ ಹೊರಡಿಸಿದ್ದು, ದೈನಂದಿನ ಚಟುವಟಿಕೆಗಳಿಗೆ ಪ್ರತಿದಿನ ಸಂಚರಿಸುವ ಸಾರ್ವಜನಿಕರು ಸ್ಥಳೀಯಾಡಳಿತ ಸಂಸ್ಥೆಗಳಿಂದ ಮಾಸಿಕ ಪಾಸ್‌ ಪಡೆದಿರಬೇಕು. ಅನಂತರ ಚೆಕ್‌ಪೋಸ್ಟ್‌ಗಳಲ್ಲಿ ಒಳಬರುವ/ ಹೊರಹೋಗುವ ಸಂದರ್ಭಗಳಲ್ಲಿ ತಮ್ಮ ಮಾಹಿತಿ ದಾಖಲಿಸಬೇಕು ಎಂದಿದ್ದಾರೆ. ಚೆಕ್‌ಪೋಸ್ಟ್‌ನಲ್ಲಿ ಪ್ರತೀದಿನ ವೈದ್ಯಕೀಯ ಸ್ಕ್ರೀನಿಂಗ್‌ ಹಾಗೂ ಕಾಲಕಾಲಕ್ಕೆ ವೈದ್ಯಕೀಯ ಪರೀಕ್ಷೆಗೆ

ಒಳಪಡ ಬೇಕು. ಕೇರಳದಿಂದ ದ.ಕ. ಜಿಲ್ಲೆಯಲ್ಲಿ ಉಳಿಯಲು ಇಚ್ಛಿಸುವ ಸಾರ್ವಜನಿಕರು ಕಡ್ಡಾಯವಾಗಿ ಸೇವಾ ಸಿಂಧು ವೆಬ್‌ ಪೋರ್ಟಲ್‌ನಲ್ಲಿ ಪಾಸ್‌ ಪಡೆದು ತಲಪಾಡಿ ಹಾಗೂ ಜಾಲೂÕರು ಚೆಕ್‌ಪೋಸ್ಟ್‌ ಮುಖಾಂತರ ಸಂಚರಿಸಲು ಅವಕಾಶ ನೀಡಲಾಗಿದೆ.

ಎಲ್ಲ ಪ್ರಯಾಣಿಕರು ಕರ್ನಾಟಕ ಸರಕಾರದ ಕೋವಿಡ್‌ 19ನ ಮಾರ್ಗಸೂಚಿಗೆ ಬದ್ಧರಾಗಿರಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next