Advertisement

ಬೆಳ್ತಂಗಡಿ ಸಿಯೋನ್ ಆಶ್ರಮಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

01:13 PM Jun 02, 2021 | Team Udayavani |

ಬೆಳ್ತಂಗಡಿ: ಕೋವಿಡ್ ಸೋಂಕು ತೀವ್ರ ಸ್ವರೂಪದಲ್ಲಿ ಹಡಿರುವುದರಿಂದ ತಾಲೂಕಿನ ಗಂಡಿಬಾಗಿಲು ಸಿಯೋನ್ ಆಶ್ರಮಕ್ಕೆ ಬುಧವಾರ ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಭೇಟಿ ನೀಡಿ ವ್ಯವಸ್ಥೆ ಪರಿಶೀಲಿಸಿದರು.

Advertisement

ಧರ್ಮಸ್ಥಳ ರಜತಾದ್ರಿಯಲ್ಲಿ ಕ್ವಾರೆಂಟೈನ್ ಒಳಗಾಗಿರುವ ಸಿಯೋನ್ ಆಶ್ರಮದ 128 ಮಂದಿಯ ಆರೋಗ್ಯ ವಿಚಾರಣೆ ಮಾಡುತ್ತಿರುವ ವೈದ್ಯರು, ವ್ಯವಸ್ಥಾಪಕರಲ್ಲಿ ವ್ಯವಸ್ಥೆ ಕುರಿತು ವಿಚಾರಣೆ ನಡೆಸಿದರು.ಬಳಿಕ ನೆರಿಯ ಗಂಡಿಬಾಗಿಲು ಸಿಯೋನ್ ಆಶ್ರಮಕ್ಕೆ ಭೇಟಿ ನೀಡಿ ವ್ಯವಸ್ಥೆ ಪರಿಶೀಲಿಸಿದರು.

ಈ ಮಧ್ಯೆ ಧರ್ಮಸ್ಥಳದ ಪೊಸವಳಿಕೆ ಸಮೀಪ ಹೋಮ್ ಐಸೋಲೇಶನ್ ಒಳಗಾಗಿರುವ ಪಿಲಿಪ್ ಅವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

Advertisement

 

ಈ ವೇಳೆ ಶಾಸಕ ಹರೀಶ್ ಪೂಂಜ, ಪ್ರೊಬೆಷನರಿ ಎಸಿ ವೆಂಕಟೇಶ್, ಜಿ.ಪಂ. ಸಿಇಒ ಡಾ.ಕುಮಾರ್, ತಾ.ಪಂ. ಇಒ ಕುಸುಮಾಧರ್, ತಹಶೀಲ್ದಾರ್ ಮಹೇಶ್ ಜೆ., ತಾಲೂಕು ಆರೋಗ್ಯಧಿಕಾರಿ ಡಾ.ಕಲಾಮಧು ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next