Advertisement

ಕೋವಿಡ್ ನಿರ್ಲಕ್ಷ್ಯ ಸಲ್ಲದು: ಜಿಲ್ಲಾಧಿಕಾರಿ

12:46 PM Jun 28, 2020 | Team Udayavani |

ಮಂಗಳೂರು: ಇತ್ತೀಚಿನ ದಿನಗಳಲ್ಲಿ ಜನರು ಕೋವಿಡ್ ಮಾರ್ಗ ಸೂಚಿಗಳ ಬಗ್ಗೆ ನಿರ್ಲಕ್ಷ್ಯ ತೋರುತ್ತಿರುವುದು ಕಂಡು ಬರುತ್ತಿದ್ದು, ಜಿಲ್ಲೆಯಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್‌ ಹೇಳಿದ್ದಾರೆ.

Advertisement

ಪ್ರಸ್ತುತ ಜಿಲ್ಲೆಯಲ್ಲಿ 576 ಪಾಸಿಟಿವ್‌ ಪ್ರಕರಣ ದಾಖಲಾಗಿದ್ದು, ಪ್ರಸ್ತುತ 150 ಸಕ್ರಿಯ ಪ್ರಕರಣಗಳಿವೆ. ಹೊರ ರಾಜ್ಯ, ರಾಷ್ಟ್ರಗಳಿಂದ ಬಂದವರಲ್ಲಿ ಗಣನೀಯ ಸಂಖ್ಯೆಯಲ್ಲಿ ಕೊರೊನಾ ಪಾಸಿಟಿವ್‌ ಕಂಡುಬಂದಿದೆ.

ಸಾರ್ವಜನಿಕರು ಸಾಮಾಜಿಕ ಅಂತರ ಪಾಲಿಸಬೇಕು. ಮನೆಯಿಂದ ಅಗತ್ಯವಿದ್ದರೆ ಮಾತ್ರ ಹೊರ ಬನ್ನಿ. ಕಡ್ಡಾಯವಾಗಿ ಮಾಸ್ಕ್ ಧರಿಸಿ. ಕ್ವಾರಂಟೈನ್‌ನಲ್ಲಿ ಇರುವವರು ನಿಯಮಗಳನ್ನು ಪಾಲಿಸಲೇಬೇಕು. ನಿಯಮ ಉಲ್ಲಂಘಿಸಿದ ಬಗ್ಗೆ ಈಗಾಗಲೇ 54 ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next