Advertisement

ದಕ್ಷಿಣ ಕನ್ನಡದ ಬಲಾಬಲ; ಬಿಜೆಪಿ ಪ್ರಾಬಲ್ಯ, ಕಾಂಗ್ರೆಸ್ ಗೆ ಮುಖಭಂಗ

12:44 PM Sep 03, 2018 | Sharanya Alva |

ಮಂಗಳೂರು: ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯ ಮತಎಣಿಕೆ ಮುಕ್ತಾಯದ ಹಂತ ತಲುಪಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಬಿಜೆಪಿ ಕೋಟೆ ಭದ್ರವಾಗಿದ್ದು, ಕಾಂಗ್ರೆಸ್ ಲೆಕ್ಕಾಚಾರ ತಲೆಕೆಳಗಾಗಿದೆ.

Advertisement

ಪುತ್ತೂರು ನಗರಸಭೆ ಬಿಜೆಪಿ ವಶಕ್ಕೆ:

31 ವಾರ್ಡ್ ಬಲದ ಪುತ್ತೂರು ನಗರಸಭೆಯಲ್ಲಿ ಭಾರತೀಯ ಜನತಾ ಪಕ್ಷ 25 ವಾರ್ಡ್ ಗಳಲ್ಲಿ, ಕಾಂಗ್ರೆಸ್ ಕೇವಲ 5 ವಾರ್ಡ್ ಹಾಗೂ ಪಕ್ಷೇತರ ಒಂದು ವಾರ್ಡ್ ಗಳಲ್ಲಿ ಜಯ ಸಾಧಿಸಿದೆ.

ಉಳ್ಳಾಲ ನಗರಸಭೆಗೆ ಪಕ್ಷೇತರರ ನೆರವು ಅಗತ್ಯ!

ಹಾಲಿ ಶಾಸಕ, ಮಾಜಿ ಸಚಿವ ಯುಟಿ ಖಾದರ್ ಪ್ರತಿನಿಧಿಸುತ್ತಿರುವ ಉಳ್ಳಾಲದಲ್ಲಿ ಕಾಂಗ್ರೆಸ್ ನಿರೀಕ್ಷೆ ಹುಸಿಯಾಗಿದೆ. 31 ವಾರ್ಡ್ ಗಳಲ್ಲಿ ಬಿಜೆಪಿ 6, ಕಾಂಗ್ರೆಸ್ 13, ಜೆಡಿಎಸ್ 4 ಹಾಗೂ ಪಕ್ಷೇತರರು 8 ವಾರ್ಡ್ ಗಳಲ್ಲಿ ಜಯಗಳಿಸಿದ್ದಾರೆ.

Advertisement

ಬಂಟ್ವಾಳ ಪುರಸಭೆಗೆ ಎಸ್ ಡಿಪಿಐ ಬೆಂಬಲ ಅಗತ್ಯ!

ಮಾಜಿ ಸಚಿವ ರಮಾನಾಥ ರೈ ಹಾಗೂ ಹಾಲಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರ ಜಿದ್ದಾಜಿದ್ದಿನ ಬಂಟ್ವಾಳ ಕ್ಷೇತ್ರದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್, ಬಿಜೆಪಿ ಸ್ಪಷ್ಪ ಮ್ಯಾಜಿಕ್ ಸಂಖ್ಯೆ ಪಡೆದಿಲ್ಲ. 27 ವಾರ್ಡ್ ಗಳ ಬಂಟ್ವಾಳ ಪುರಸಭೆಯಲ್ಲಿ ಬಿಜೆಪಿ 11, ಕಾಂಗ್ರೆಸ್ 12, ಎಸ್ ಡಿಪಿಐ 4 ವಾರ್ಡ್ ಗಳಲ್ಲಿ ಗೆಲುವು ಸಾಧಿಸಿದೆ.

ಪುತ್ತೂರು, ಉಳ್ಳಾಲ, ಬಂಟ್ವಾಳದ ಒಟ್ಟು 89 ವಾರ್ಡ್ ಗಳಲ್ಲಿ 42 ಭಾರತೀಯ ಜನತಾ ಪಕ್ಷ, 30 ಕಾಂಗ್ರೆಸ್ , ಜೆಡಿಎಸ್ 4 ಹಾಗೂ ಪಕ್ಷೇತರರು 13 ಮಂದಿ ಗೆಲುವು ಸಾಧಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next