Advertisement

ಕೋವಿಡ್ ಹೆಚ್ಚಳ : ದಕ್ಷಿಣ ಕನ್ನಡ ಜಿಲ್ಲೆ ಮತ್ತೊಂದು ವಾರ ಲಾಕ್ : ಕೋಟ ಶ್ರೀನಿವಾಸ ಪೂಜಾರಿ

02:51 PM Jun 10, 2021 | Team Udayavani |

ಮಂಗಳೂರು : ಕೋವಿಡ್ ಹೆಚ್ಚಳ ಹಿನ್ನೆಲೆಯಲ್ಲಿ ದ‌.ಕ ಜಿಲ್ಲೆಯಲ್ಲಿ ಮತ್ತೆ ಒಂದು ವಾರಗಳ ಕಾಲ ಲಾಕ್ ಡೌನ್ ಗೆ ತೀರ್ಮಾನ ಮಾಡಲಾಗಿದೆ ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ ನೀಡಿದ್ದಾರೆ.

Advertisement

ಕೆಲ ಕೈಗಾರಿಕೆ ಹೊರತುಪಡಿಸಿ ಮತ್ತೆ ಜಿಲ್ಲೆಯಲ್ಲಿ ಒಂದು ವಾರ ಲಾಕ್ ಡೌನ್ ಗೆ ಮನವಿ ಮಾಡಿದ್ದೆವು. ಇದಕ್ಕೆ ಸಭೆಯಲ್ಲಿ ಮುಖ್ಯಮಂತ್ರಿಗಳು ಒಪ್ಪಿಗೆ ಸೂಚಿಸಿದ್ದಾರೆ. ಹೀಗಾಗಿ ಮತ್ತೆ ಒಂದು ವಾರಗಳ ದ.ಕ ಜಿಲ್ಲೆ ಲಾಕ್ ಡೌನ್ ಮಾಡಲಿದ್ದೇವೆ ಎಂದರು.

ಕೆಲ ಸೀಮಿತ ವಿಷಯಗಳಿಗೆ ರಿಯಾಯಿತಿ ಕೊಡಲು ನಾಳೆ ಸಂಸದರು, ಶಾಸಕರ ಸಭೆ ಮಾಡಲಿದ್ದೇವೆ. ಕೂಲಿ ಮಾಡುವವರು ಮತ್ತು ಕೈಗಾರಿಕಾ ಕಾರ್ಮಿಕರಿಗೆ‌ ನೆರವಾಗುವ ನಿಟ್ಟಿನಲ್ಲಿ ಕೆಲವನ್ನು ಸಡಿಲಿಕೆ ಮಾಡಲಾಗುವುದು. ಆ ಬಗ್ಗೆ ‌ನಾಳೆ ಸಭೆ ನಡೆಸಿ ಚರ್ಚೆ ಬಳಿಕ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮಂಗಳೂರಿನಲ್ಲಿ ಕೋಟ ಹೇಳಿಕೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next