Advertisement

ದಕ್ಷಿಣ ಕನ್ನಡ : ಇಬ್ಬರಿಂದ ನಾಮಪತ್ರ ಸಲ್ಲಿಕೆ

01:07 AM Mar 31, 2024 | Team Udayavani |

ಮಂಗಳೂರು: ದ.ಕ.ಲೋಕಸಭಾ ಕ್ಷೇತ್ರದಲ್ಲಿ ಶನಿವಾರ ಸ್ವತಂತ್ರ ಅಭ್ಯರ್ಥಿಯಾಗಿ ದೀಪಕ್‌ ರಾಜೇಶ್‌ ಕುವೆಲ್ಲೋ 2 ಉಮೇದುವಾರಿಕೆ ಸಲ್ಲಿಸಿದ್ದಾರೆ. ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿಯಾಗಿ ರಂಜಿನಿ ಎಂ. ನಾಮಪತ್ರ ಸಲ್ಲಿಸಿದ್ದಾರೆ.

Advertisement

12,839 ಲೀ. ಮದ್ಯ ವಶ
ಚುನಾವಣೆ ನೀತಿಸಂಹಿತೆ ಜಾರಿಯಾದ ದಿನದಿಂದ ಮಾ. 30ರ ವರೆಗೆ ದ.ಕ. ಜಿಲ್ಲೆ ಯಲ್ಲಿ 41,87,909 ರೂ. ಮೌಲ್ಯದ 12,839 ಲೀ. ಮದ್ಯ ಜಪ್ತಿ ಮಾಡಲಾಗಿದೆ. 8,69,950 ರೂ. ಮೌಲ್ಯದ 15.5 ಕೆಜಿ ಡ್ರಗ್ಸ್‌ ವಶಪಡಿಸಿಕೊಳ್ಳಲಾಗಿದೆ. ಅಬಕಾರಿ ನಿಯಮ ಸೇರಿದಂತೆ ಇತರ ನಿಯಮಗಳ ಉಲ್ಲಂಘನೆಗೆ ಸಂಬಂಧಿಸಿದಂತೆ 227 ಎಫ್ಐಆರ್‌ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next