Advertisement

Rain ದಕ್ಷಿಣ ಕನ್ನಡ: ಇಂದು ಎಲ್ಲೋ ಅಲರ್ಟ್‌

11:01 PM Aug 07, 2024 | Team Udayavani |

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಬಿಡುವು ನೀಡಿದ್ದು, ಬುಧವಾರ ಜಿಲ್ಲೆಯ ಕೆಲವು ಕಡೆ ಸಾಧಾರಣ ಮಳೆಯಾಗಿದೆ.

Advertisement

ಉಳಿದಂತೆ ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ ಇತ್ತು. ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಆ.8ರಂದು ಕರಾವಳಿ ಭಾಗದಲ್ಲಿ ಎಲ್ಲೋ ಅಲರ್ಟ್‌ ಘೋಷಿಸಲಾಗಿದ್ದು, ಉತ್ತಮ ಮಳೆ ಸುರಿಯುವ ಸಾಧ್ಯತೆ ಇದೆ.

ಮಂಗಳೂರಿನಲ್ಲಿ ಬುಧವಾರ 28.8 ಡಿ.ಸೆ. ಗರಿಷ್ಠ ಮತ್ತು 23.8 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿತ್ತು.

ಉಡುಪಿ: ಮಳೆ ಕ್ಷೀಣ
ಉಡುಪಿ: ಜಿಲ್ಲೆಯಲ್ಲಿ ಎರಡು ದಿನಗಳಿಂದ ಮಳೆ ಪ್ರಮಾಣ ತಗ್ಗಿದ್ದು, ಬಿಟ್ಟುಬಿಟ್ಟು ಸಾಧಾರಣ ಮಳೆಯಾಗುತ್ತಿದೆ. ಮಂಗಳವಾರ ತಡರಾತ್ರಿ, ಬುಧವಾರ ಕಾಪು, ಬೈಂದೂರು, ಕುಂದಾಪುರ ಭಾಗದಲ್ಲಿ ಕೆಲಕಾಲ ಉತ್ತಮ ಮಳೆ ಸುರಿದಿದೆ.

ಕಾರ್ಕಳ, ಹೆಬ್ರಿ, ಉಡುಪಿ, ಬ್ರಹ್ಮಾವರ ಸುತ್ತಮುತ್ತ ಬಿಸಿಲು ಮೋಡ ಕವಿದ ವಾತಾವರಣ ನಡುವೆ ಸಣ್ಣದಾಗಿ ಮಳೆ ಸುರಿದಿದೆ. ಬುಧವಾರ ಬೆಳಗ್ಗೆ 8.30ರ ಹಿಂದಿನ 24 ಗಂಟೆಗಳ ಕಾಲ 14.6 ಮಿ. ಮೀ. ಸರಾಸರಿ ಮಳೆಯಾಗಿದೆ.

Advertisement

 

Advertisement

Udayavani is now on Telegram. Click here to join our channel and stay updated with the latest news.

Next