Advertisement

ಅಕ್ರಮ ಪಿಸ್ತೂಲ್‌: ಯುವಕನ ಬಂಧನ

11:18 PM Apr 03, 2023 | Team Udayavani |

ಮಂಗಳೂರು: ಅಕ್ರಮವಾಗಿ ಪಿಸ್ತೂಲ್‌ ಹೊಂದಿದ್ದ ಓರ್ವನನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ. ನಗರದ ಕದ್ರಿ ಪೊಲೀಸ್‌ ಠಾಣಾ ವ್ಯಾಪ್ತಿಯ ಜಾರ್ಜ್‌ ಮಾರ್ಟಿಸ್‌ ರಸ್ತೆಯ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಶಿಶಿರ್‌ ಬಂಧಿತ ಆರೋಪಿ. ಈತನಿಂದ ಒಂದು ಪಿಸ್ತೂಲ್‌ ಮತ್ತು ಬುಲೆಟ್‌ ವಶಪಡಿಸಿ ಕೊಳ್ಳಲಾಗಿದೆ.

Advertisement

ಮಾಲಕರಿಂದ ದೂರು
ತನ್ನ ಮನೆಯ ಒಂದು ಮಹಡಿಯಲ್ಲಿ ಬಾಡಿಗೆ ಇದ್ದ ಶಿಶಿರ್‌ ಬಳಿ ಪಿಸ್ತೂಲ್‌ ಇರುವ ಬಗ್ಗೆ ಮನೆಯ ಮಾಲಕರು ಪೊಲೀಸರಿಗೆ ದೂರು ನೀಡಿದ್ದರು.
ಶಿಶಿರ್‌ನನ್ನು ವಶಕ್ಕೆ ಪಡೆದು ವಿಚಾರಣೆ ಗೊಳಪಡಿಸಿದಾಗ ಪಿಸ್ತೂಲನ್ನು ತನ್ನ ಗೆಳೆಯ ನೀಡಿರುವುದಾಗಿ ಹೇಳಿದ್ದಾನೆ. ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next