Advertisement

ಮಂಗಳೂರು : ಅಪಾಯಕಾರಿ ಕಾಲುಸಂಕಗಳ ಪಟ್ಟಿ ನೀಡಲು ಡಿಸಿ ಆದೇಶ

01:58 PM Aug 13, 2022 | Team Udayavani |

ಮಂಗಳೂರು : ಜಿಲ್ಲೆಯಲ್ಲಿರುವ ಎಲ್ಲ ಅಪಾಯಕಾರಿ ಕಾಲುಸಂಕಗಳನ್ನು ಪಟ್ಟಿ ಮಾಡುವಂತೆ ದ.ಕ. ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಅವರು ಎಲ್ಲ ನಗರ ಮತ್ತು ಗ್ರಾಮೀಣ ಸ್ಥಳೀಯ ಆಡಳಿತ ಸಂಸ್ಥೆಗಳಿಗೆ ಆದೇಶಿಸಿದ್ದಾರೆ.

Advertisement

ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ಬಾಲಕಿ ತೋಡು ದಾಟುವಾಗ ಕಾಲು ಸಂಕದಿಂದ ಜಾರಿಬಿದ್ದು ಮೃತಪಟ್ಟ ಹಿನ್ನೆಲೆಯಲ್ಲಿ ಇನ್ನು ಅಂತಹ ಘಟನೆಗಳು ಮರುಕಳಿಸದಂತೆ ಈ ಎಚ್ಚರಿಕೆ ನೀಡ ಲಾಗಿದೆ. ಆ.15ರ ಮೊದಲು ಕಾಲು ಸಂಕಗಳ ಪಟ್ಟಿ ನೀಡುವಂತೆ ಆದೇಶಿಸಲಾಗಿದೆ ಎಂದು ಡಿ.ಸಿ. ತಿಳಿಸಿದರು.

ವಿದ್ಯಾರ್ಥಿಗಳು ಬಳಸುತ್ತಿರುವ ಎಲ್ಲ ಕಾಲುಸಂಕಗಳನ್ನು ಕೂಡ ಸ್ಪಷ್ಟವಾಗಿ ನಮೂದಿಸಬೇಕು, ಇದರಿಂದ ಆದ್ಯತೆ ಮೇರೆಗೆ ಮುಂದೆ ಕ್ರಮಕೈಗೊಳ್ಳಲು ಸಹಾಯವಾಗುತ್ತದೆ ಎಂದು ಅವರು ತಿಳಿಸಿದರು.

ಭೂಕುಸಿತ ಅಧ್ಯಯನ
ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲಿ ಉಂಟಾಗಿರುವ ಭೂಕುಸಿತಕ್ಕೆ ಸಂಬಂಧಿಸಿ ರಾಜ್ಯ ವಿಪತ್ತು ನಿರ್ವಹಣ ಪ್ರಾಧಿಕಾರ, ಜಿಯೊಲಾಜಿಕಲ್‌ ಸರ್ವೇ ಆಫ್‌ ಇಂಡಿಯಾ ಮತ್ತು ಎನ್‌ಐಟಿಕೆ ಸುರತ್ಕಲ್‌ ಇವರನ್ನು ಅಧ್ಯಯನ ನಡೆಸಲು ತಿಳಿಸಿದ್ದೇನೆ. ಮಳೆ ಕಡಿಮೆಯಾದ ಬಳಿಕ ಅಧ್ಯಯನ ನಡೆಸಲಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ : ಮನೆ ಪರಿಹಾರ ನೀಡದ ಸರ್ಕಾರ: ಅರ್ಧ ಹಾಕಿಟ್ಟ ಪಂಚಾಂಗದಲ್ಲೇ ಧ್ವಜ ನೆಟ್ಟು ಆಕ್ರೋಶ

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next