Advertisement

ಯಾವುದೇ ಭ್ರಷ್ಟಾಚಾರ, ಗಳಿಕೆಗಿಂತ ಹೆಚ್ಚಿನ ಆಸ್ತಿ ವಿವರ ಇದ್ದರೆ ಹಂಚಿಕೊಳ್ಳಿ : ಎಸ್‌ಪಿ

12:21 PM Sep 27, 2022 | Team Udayavani |

ಮಂಗಳೂರು : ಮತ್ತೆ ಬಲಿಷ್ಠಗೊಂಡಿರುವ ಲೋಕಾಯುಕ್ತ ಇಲಾಖೆಯು ದಾಳಿ ಕಾರ್ಯಾಚರಣೆ ನಡೆಸುವ ಅಧಿಕಾರವನ್ನೂ ಪಡೆದುಕೊಂಡಿದ್ದು, ದ.ಕ., ಉಡುಪಿ ಜಿಲ್ಲೆಗೆ ಸಂಬಂಧಿಸಿ ಯಾವುದೇ ಭ್ರಷ್ಟಾಚಾರದ ದೂರುಗಳಿದ್ದರೆ ಮಾಹಿತಿಯನ್ನು ಹಂಚಿಕೊಳ್ಳಬಹುದು ಎಂದು ಮಂಗಳೂರು- ಉಡುಪಿ ವಿಭಾಗದ ಲೋಕಾಯುಕ್ತ ನೂತನ ಎಸ್‌ಪಿ ಲಕ್ಷ್ಮೀಗಣೇಶ್‌ ಕೆ. ತಿಳಿಸಿದ್ದಾರೆ.

Advertisement

ನೂತನ ಲೋಕಾಯುಕ್ತ ಎಸ್ಪಿಯಾಗಿ ಅಧಿಕಾರ ಸ್ವೀಕರಿಸಿದ ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ರಾಜ್ಯ ಸರಕಾರ ಸೆ. 9ರಿಂದ ಕರ್ನಾಟಕ ಲೋಕಾಯುಕ್ತವನ್ನು ಮತ್ತಷ್ಟು ಬಲಿಷ್ಠ ಗೊಳಿಸಿದೆ. ಪೊಲೀಸ್‌ ಠಾಣೆ ಅಧಿಕಾರದ ಜತೆಯಲ್ಲಿ ಭ್ರಷ್ಟಾಚಾರ ನಿರ್ಮೂಲನೆಯ ವಿಚಾರದಲ್ಲಿ ಹೆಚ್ಚಿನ ಕೆಲಸ ಮಾಡುವ ಅಧಿಕಾರ ನೀಡಿದೆ. ಪಂಚಾಯತ್‌ನಿಂದ ಹಿಡಿದು ಜಿಲ್ಲಾಧಿಕಾರಿಗಳ ತನಕ ಯಾವುದೇ ಸರಕಾರಿ ಅಧಿಕಾರಿಗಳು ಕೆಲಸ ಮಾಡಿಸಿ ಕೊಳ್ಳಲು ಹಣ ಕೇಳುತ್ತಿದ್ದಾರೆ ಎಂದಾದರೆ ಅಂಥವರ ವಿರುದ್ಧ ದೂರು ಕೊಟ್ಟರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಸರಕಾರಿ ಅಧಿಕಾರಿಗಳು ಗಳಿಕೆಗಿಂತ ಹೆಚ್ಚಿನ ಆಸ್ತಿ ಹೊಂದಿದ್ದರೆ ದೂರು ಸಲ್ಲಿಸಬಹುದು ಎಂದರು.

ಎರಡು ಜಿಲ್ಲೆಗೆ 1ವಿಭಾಗ
ಲೋಕಾಯುಕ್ತದ ಮಂಗಳೂರು ವಿಭಾಗವು ದ.ಕ. ಮತ್ತು ಉಡುಪಿ ಜಿಲ್ಲೆಗಳ ವ್ಯಾಪ್ತಿಯನ್ನು ಒಳಗೊಂಡಿದೆ. ಈಗಾಗಲೇ ಎಸಿಬಿಯಲ್ಲಿರುವ ಹಳೆಯ ಪ್ರಕರಣಗಳನ್ನು ಲೋಕಯುಕ್ತಕ್ಕೆ ವರ್ಗಾವಣೆ ಮಾಡುವ ಕಾರ್ಯ ನಡೆಯುತ್ತಿದೆ. ವರ್ಗಾವಣೆಯಾದ ಬಳಿಕ ಇರುವ ಪ್ರಕರಣಗಳ ತನಿಖೆಯನ್ನು ಕೈಗೆತ್ತಿಕೊಳ್ಳಲಾಗುತ್ತದೆ. ಈಗಾಗಲೇ ಮಂಗಳೂರು ವಿಭಾಗದಲ್ಲಿ 2 ಡಿವೈಎಸ್ಪಿ ಹಾಗೂ 1 ಇನ್‌ಸ್ಪೆಕ್ಟರ್‌ ಹುದ್ದೆ ಇದ್ದರೆ 1 ಇನ್‌ಸ್ಪೆಕ್ಟರ್‌ ಹಾಗೂ 6 ಪಿಸಿಗಳ ಹುದ್ದೆಗಳು ಖಾಲಿ ಉಳಿದಿವೆ. ಉಡುಪಿಯಲ್ಲಿ 1 ಡಿವೈಎಸ್ಪಿ ಹಾಗೂ 1 ಇನ್‌ಸ್ಪೆಕ್ಟರ್‌ ಹುದ್ದೆಗಳಿದ್ದು 1 ಇನ್‌ಸ್ಪೆಕ್ಟರ್‌ ಹುದ್ದೆ ಖಾಲಿಯಿದೆ. ಅವುಗಳನ್ನು ಶೀಘ್ರದಲ್ಲಿಯೇ ಭರ್ತಿ ಮಾಡಲಾಗುತ್ತದೆ ಎಂದರು.

ಇದನ್ನೂ ಓದಿ : 20 ದಿನ ಬಳಿಕ ಚೆನ್ನೈನಲಿ ಬಾಲಕಿಯರು ಪತ್ತೆ: ಸಲಿಂಗ ಮದುವೆಗೆ ಬಾಲಕಿಯರ ಸಿದ್ಧತೆ?

Advertisement

ಲೋಕಾಯುಕ್ತಕ್ಕೆ ಈಗ ಹೆಚ್ಚಿನ ಅಧಿಕಾರ ನೀಡುವ ಜತೆಯಲ್ಲಿ ಪಿಸಿ ಕಾಯಿದೆ(ಭ್ರಷ್ಟಾಚಾರ ನಿರ್ಮೂಲನೆ ಕಾಯಿದೆ)ಯ ಹೊಣೆಗಾರಿಕೆ ಕೂಡ ಲೋಕಾಯುಕ್ತಕ್ಕೆ ಬಂದಿದ್ದು, ಪೊಲೀಸ್‌ ಠಾಣೆಯ ರೀತಿಯಲ್ಲಿ ಇನ್ನು ಮುಂದೆ ಲೋಕಾಯುಕ್ತ ಕಾರ್ಯಾಚರಣೆ ನಡೆಸುತ್ತದೆ. ಭ್ರಷ್ಟಾಚಾರದ ವಿರುದ್ಧ ದೂರು ನೀಡಿದರೆ ನಿರ್ದಾಕ್ಷಿಣ್ಯವಾಗಿ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಎಸಿಬಿಗಿಂತ ಮೊದಲು ಲೋಕಾಯುಕ್ತ ಇದ್ದಾಗ ಮಂಗಳೂರು ವಿಭಾಗದಲ್ಲಿ 12 ಪ್ರಕರಣಗಳಿಗೆ ಶಿಕ್ಷೆ ವಿಧಿಸ ಲಾಗಿತ್ತು ಎಂದು ಮಾಹಿತಿ ನೀಡಿದರು.

ಲೋಕಾಯುಕ್ತದ ಉಡುಪಿ ಡಿವೈಎಸ್ಪಿ ಜಗದೀಶ್‌, ಮಂಗಳೂರು ಡಿವೈಎಸ್ಪಿಗಳಾದ ಚಲುವರಾಜು ಹಾಗೂ ಕಲಾವತಿ, ಉಡುಪಿ ಇನ್‌ಸ್ಪೆಕ್ಟರ್‌ ಜಯರಾಮ ಡಿ. ಗೌಡ ಹಾಗೂ ಮಂಗಳೂರು ಇನ್‌ಸ್ಪೆಕ್ಟರ್‌ ಅಮಾನುಲ್ಲಾ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next