Advertisement

SC, ST ಒಳಮೀಸಲು: ಸುಪ್ರೀಂ ತೀರ್ಪು ಖಂಡಿಸಿ ಇಂದು ಭಾರತ್‌ ಬಂದ್‌

07:40 AM Aug 21, 2024 | Team Udayavani |

ಹೊಸದಿಲ್ಲಿ: ಎಸ್‌ಸಿ, ಎಸ್‌ಟಿ ಒಳಮೀಸಲಾತಿ ಕುರಿತು ನಿರ್ಧಾರ ಕೈಗೊಳ್ಳುವ ಅಧಿಕಾರ ರಾಜ್ಯ ಸರಕಾರಗಳಿಗಿವೆ ಎಂಬ ಸುಪ್ರೀಂ ಕೋರ್ಟ್‌ನ ಇತ್ತೀಚೆಗಿನ ತೀರ್ಪನ್ನು ಖಂಡಿಸಿ ರಿಸರ್ವೇಶನ್‌ ಬಚಾವೋ ಸಂಘರ್ಷ್‌ ಸಮಿತಿ ಕರೆ ನೀಡಿರುವ ಭಾರತ್‌ ಬಂದ್‌ ಬುಧವಾರ ನಡೆಯಲಿದೆ.

Advertisement

ರಾಜಸ್ಥಾನ, ಉತ್ತರಪ್ರದೇಶ ಸೇರಿ ಉತ್ತರ ಭಾರತದ ಕೆಲವು ರಾಜ್ಯಗಳಲ್ಲಿ ಬಂದ್‌ಗೆ ಹೆಚ್ಚು ಬೆಂಬಲ ವ್ಯಕ್ತವಾಗುವ ಸಾಧ್ಯತೆಯಿರುವ ಕಾರಣ ಭದ್ರತೆ ಹೆಚ್ಚಿಸಲಾಗಿದೆ. ಉದ್ಯಮ ಸಂಸ್ಥೆಗಳು ಅಂಗಡಿ ಮುಂಗಟ್ಟುಗಳನ್ನು ಮುಚ್ಚುವ ಮೂಲಕ ಬಂದ್‌ಗೆ ಬೆಂಬಲ ನೀಡಬೇಕು ಎಂದು ಆದಿವಾಸಿ, ದಲಿತ ಸಂಘಟನೆಗಳು ಕರೆ ನೀಡಿವೆ.

ಹಲವು ರಾಜ್ಯಗಳ ಹಲವಾರು ಎಸ್‌ಸಿ/ಎಸ್‌ಟಿ ಸಂಘಟನೆಗಳು ಬಂದ್‌ಗೆ ಬೆಂಬಲ ಸೂಚಿಸಿವೆ. ಮೆಡಿಕಲ್, ಅಗತ್ಯ ವೈದ್ಯಕೀಯ ಸೇವೆಗಳು, ಬ್ಯಾಂಕ್‌ಗಳು, ಶಾಲಾ ಕಾಲೇಜು, ಎಲ್ಲಾ ಬ್ಯಾಂಕ್‌ಗಳು, ಸಾಮಾನ್ಯವಾಗಿ ಕಾರ್ಯ ನಿರ್ವಹಿಸಲಿವೆ.

ರಾಜ್ಯದಲ್ಲಿ ಎಂದಿನಂತೆ ದೈನಂದಿನ ಚಟುವಟಿಗಳು ಆರಂಭಗೊಂಡಿದ್ದು, ಯಾವ ಭಾಗದಲ್ಲಿ ಬಂದ್ ಕಾವು ಇರಲಿದೆ ಎನ್ನುವುದು ಇನ್ನಷ್ಟೇ ತಿಳಿದು ಬರಬೇಕಿದೆ.

Advertisement

Udayavani is now on Telegram. Click here to join our channel and stay updated with the latest news.

Next