Advertisement
ಬೆಂಗಳೂರಿನ ಸೆವೆನ್ ಮಿನಿಸ್ಟರ್ಸ್ ಕ್ವಾರ್ಟರ್ಸ್ನಲ್ಲಿ ರಾಷ್ಟ್ರೀಯ ಮತ್ತು ರಾಜ್ಯ ಎಸ್ ಸಿ ಮೋರ್ಚಾ ಪ್ರಮುಖರ ಜೊತೆ ಸಂವಾದ ನಡೆಸಿದ ಅವರು, ಪ್ರತಿಯೊಬ್ಬರೂ ಸ್ವಾಭಿಮಾನ ಮತ್ತು ಸ್ವಾವಲಂಬನೆಯಿಂದ ಬದುಕಬೇಕೆಂಬ ಆಶಯ ಬಿಜೆಪಿಯದು. ಇದಕ್ಕಾಗಿಯೇ ಬಿಜೆಪಿಯು ಅಂಬೇಡ್ಕರರ ಸಾಧನೆಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡಿದೆ ಎಂದು ವಿವರಿಸಿದರು. ಮೊದಲನೇ ಭಾರತರತ್ನ ಪ್ರಶಸ್ತಿಯೇ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಸಿಗಬೇಕಿತ್ತು. ಇತಿಹಾಸದಲ್ಲಿ ಕೊಡಬೇಕಾದ ನ್ಯಾಯವನ್ನು ಕಾಂಗ್ರೆಸ್ ಪಕ್ಷ ಅವರಿಗೆ ನೀಡಲಿಲ್ಲ ಎಂದು ಹೇಳಿದರು.
Related Articles
Advertisement
ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಪಕ್ಷದವರು ರಾಜಕಾರಣದಲ್ಲಿರುವ ದಲಿತರನ್ನು ಹೊಟ್ಟೆಪಾಡಿಗಾಗಿ ರಾಜಕೀಯದಲ್ಲಿದ್ದಾರೆ ಎನ್ನುವ ಮಾತೇ ಅವರ ಮನಸ್ಸಿನಲ್ಲಿರುವ ದಲಿತ ವಿರೋಧಿ ಭಾವನೆಗೆ ಸಾಕ್ಷಿಯಾಗಿದೆ. ಬಡವರಿಗೆ ಬಲ ತುಂಬಬೇಕು, ದಲಿತರಿಗೆ ಬಲ ಕೊಡಬೇಕೆಂಬ ಡಾ. ಅಂಬೇಡ್ಕರರ ಕನಸನ್ನು ನನಸು ಮಾಡಲು ಪ್ರಧಾನಿ ಮೋದಿಯವರ ಜನಧನ್, ಆಯುಸ್ಮಾನ್ ಭಾರತ, ಸ್ಟಾರ್ಟಪ್, ಮುದ್ರಾ ಸೇರಿದಂತೆ ಪ್ರತಿಯೊಂದು ಯೋಜನೆಗಳು ನನಸು ಮಾಡುತ್ತಿವೆ ಎಂದು ಹೇಳಿದರು.
ಎಸ್ಸಿ ಮೋರ್ಚಾ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ, ಎಸ್ಸಿ ಮೋರ್ಚಾ ರಾಷ್ಟ್ರೀಯ ಕಾರ್ಯದರ್ಶಿ ಎಂ. ಕುಮಾರ್, ಪದಾಧಿಕಾರಿಗಳು, ಮುಖಂಡರು ಸಂವಾದದಲ್ಲಿ ಭಾಗವಹಿಸಿದ್ದರು.